AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು

ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು
15 ಲಕ್ಷ ರೂ. ವೆಚ್ಚದ ಬಿಳ್ಳಿ ಪುತ್ಥಳಿ
TV9 Web
| Edited By: |

Updated on: Oct 18, 2021 | 11:06 AM

Share

ಚಿತ್ರದುರ್ಗ: ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಕೋಟೆನಾಡಿನ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರಿಗೆ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಉಡುಗೊರೆ ನೀಡಲು ಮುರುಘಾಶ್ರೀಗಳ ಶಿಷ್ಯವೃಂದ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಿಂದ 18ರ ವರೆಗೆ ಅಂದ್ರೆ 10 ದಿನಗಳಿಂದ ಶರಣ ಸಂಸ್ಕೃತಿ ಉತ್ಸವ ನಡೆಯುತ್ತಿದ್ದು ಇಂದು ಉತ್ಸವದ ಕೊನೆಯ ದಿನವಾಗಿದೆ. ಹೀಗಾಗಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇಂದು ಸಂಜೆ ಮಠದ ಅನುಭವ ಮಂಟಪದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಡಾ.ಶಿವಮೂರ್ತಿ ಮುರುಘಾಶರಣರಿಗೆ 21 ಇಂಚು ಎತ್ತರವಿರುವ, 20 ಕೆಜಿ ಬೆಳ್ಳಿಯ ಮುರುಘಾಶ್ರೀ ಮಾದರಿ ಬೆಳ್ಳಿ ಪುತ್ಥಳಿ ಉಡುಗೊರೆಯಾಗಿ ನೀಡಲಿದ್ದಾರೆ. ನಾಯಕನಹಟ್ಟಿ ಗ್ರಾಮದ ಶಿಲ್ಪಿ ಮಹೇಶ್ ಆಚಾರ್ ಈ ಬೆಳ್ಳಿ ಪುತ್ಥಳಿಯನ್ನು ನಿರ್ಮಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ಇನ್ನು ಶರಣಸಂಸ್ಕೃತಿ ಉತ್ಸವ ಅಂಗವಾಗಿ ಮುರುಘಾಮಠದಲ್ಲಿಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಿಎಂ ಬಸರಾಜ ಬೊಮ್ಮಾಯಿ ಹಾಗೂ ಬಿಎಸ್‌ ಯಡಿಯೂರಪ್ಪರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಿದ್ದು ಮಾಜಿ ಸಿಎಂ B.S.ಯಡಿಯೂರಪ್ಪಗೆ ‘ಶರಣಶ್ರೀ’ ಪ್ರಶಸ್ತಿ ನೀಡಲಿದ್ದಾರೆ.

ಇದನ್ನೂ ಓದಿ: Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ