AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು

ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು
15 ಲಕ್ಷ ರೂ. ವೆಚ್ಚದ ಬಿಳ್ಳಿ ಪುತ್ಥಳಿ
TV9 Web
| Edited By: |

Updated on: Oct 18, 2021 | 11:06 AM

Share

ಚಿತ್ರದುರ್ಗ: ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಕೋಟೆನಾಡಿನ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರಿಗೆ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಉಡುಗೊರೆ ನೀಡಲು ಮುರುಘಾಶ್ರೀಗಳ ಶಿಷ್ಯವೃಂದ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಿಂದ 18ರ ವರೆಗೆ ಅಂದ್ರೆ 10 ದಿನಗಳಿಂದ ಶರಣ ಸಂಸ್ಕೃತಿ ಉತ್ಸವ ನಡೆಯುತ್ತಿದ್ದು ಇಂದು ಉತ್ಸವದ ಕೊನೆಯ ದಿನವಾಗಿದೆ. ಹೀಗಾಗಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇಂದು ಸಂಜೆ ಮಠದ ಅನುಭವ ಮಂಟಪದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಡಾ.ಶಿವಮೂರ್ತಿ ಮುರುಘಾಶರಣರಿಗೆ 21 ಇಂಚು ಎತ್ತರವಿರುವ, 20 ಕೆಜಿ ಬೆಳ್ಳಿಯ ಮುರುಘಾಶ್ರೀ ಮಾದರಿ ಬೆಳ್ಳಿ ಪುತ್ಥಳಿ ಉಡುಗೊರೆಯಾಗಿ ನೀಡಲಿದ್ದಾರೆ. ನಾಯಕನಹಟ್ಟಿ ಗ್ರಾಮದ ಶಿಲ್ಪಿ ಮಹೇಶ್ ಆಚಾರ್ ಈ ಬೆಳ್ಳಿ ಪುತ್ಥಳಿಯನ್ನು ನಿರ್ಮಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ಇನ್ನು ಶರಣಸಂಸ್ಕೃತಿ ಉತ್ಸವ ಅಂಗವಾಗಿ ಮುರುಘಾಮಠದಲ್ಲಿಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಿಎಂ ಬಸರಾಜ ಬೊಮ್ಮಾಯಿ ಹಾಗೂ ಬಿಎಸ್‌ ಯಡಿಯೂರಪ್ಪರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಿದ್ದು ಮಾಜಿ ಸಿಎಂ B.S.ಯಡಿಯೂರಪ್ಪಗೆ ‘ಶರಣಶ್ರೀ’ ಪ್ರಶಸ್ತಿ ನೀಡಲಿದ್ದಾರೆ.

ಇದನ್ನೂ ಓದಿ: Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ