AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು

ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು
15 ಲಕ್ಷ ರೂ. ವೆಚ್ಚದ ಬಿಳ್ಳಿ ಪುತ್ಥಳಿ
TV9 Web
| Edited By: |

Updated on: Oct 18, 2021 | 11:06 AM

Share

ಚಿತ್ರದುರ್ಗ: ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಕೋಟೆನಾಡಿನ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರಿಗೆ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಉಡುಗೊರೆ ನೀಡಲು ಮುರುಘಾಶ್ರೀಗಳ ಶಿಷ್ಯವೃಂದ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಿಂದ 18ರ ವರೆಗೆ ಅಂದ್ರೆ 10 ದಿನಗಳಿಂದ ಶರಣ ಸಂಸ್ಕೃತಿ ಉತ್ಸವ ನಡೆಯುತ್ತಿದ್ದು ಇಂದು ಉತ್ಸವದ ಕೊನೆಯ ದಿನವಾಗಿದೆ. ಹೀಗಾಗಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇಂದು ಸಂಜೆ ಮಠದ ಅನುಭವ ಮಂಟಪದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಡಾ.ಶಿವಮೂರ್ತಿ ಮುರುಘಾಶರಣರಿಗೆ 21 ಇಂಚು ಎತ್ತರವಿರುವ, 20 ಕೆಜಿ ಬೆಳ್ಳಿಯ ಮುರುಘಾಶ್ರೀ ಮಾದರಿ ಬೆಳ್ಳಿ ಪುತ್ಥಳಿ ಉಡುಗೊರೆಯಾಗಿ ನೀಡಲಿದ್ದಾರೆ. ನಾಯಕನಹಟ್ಟಿ ಗ್ರಾಮದ ಶಿಲ್ಪಿ ಮಹೇಶ್ ಆಚಾರ್ ಈ ಬೆಳ್ಳಿ ಪುತ್ಥಳಿಯನ್ನು ನಿರ್ಮಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ಇನ್ನು ಶರಣಸಂಸ್ಕೃತಿ ಉತ್ಸವ ಅಂಗವಾಗಿ ಮುರುಘಾಮಠದಲ್ಲಿಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಿಎಂ ಬಸರಾಜ ಬೊಮ್ಮಾಯಿ ಹಾಗೂ ಬಿಎಸ್‌ ಯಡಿಯೂರಪ್ಪರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಿದ್ದು ಮಾಜಿ ಸಿಎಂ B.S.ಯಡಿಯೂರಪ್ಪಗೆ ‘ಶರಣಶ್ರೀ’ ಪ್ರಶಸ್ತಿ ನೀಡಲಿದ್ದಾರೆ.

ಇದನ್ನೂ ಓದಿ: Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್