AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು

ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಗುರುವಂದನೆ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಬೆಳ್ಳಿ ಪುತ್ಥಳಿ ಉಡುಗೊರೆ: ಯಡಿಯೂರಪ್ಪ-ಬೊಮ್ಮಾಯಿಗೆ ಶರಣ ಪ್ರಶಸ್ತಿಗಳು
15 ಲಕ್ಷ ರೂ. ವೆಚ್ಚದ ಬಿಳ್ಳಿ ಪುತ್ಥಳಿ
TV9 Web
| Updated By: ಆಯೇಷಾ ಬಾನು|

Updated on: Oct 18, 2021 | 11:06 AM

Share

ಚಿತ್ರದುರ್ಗ: ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಕೋಟೆನಾಡಿನ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾಶರಣರಿಗೆ ಮುರುಘಾಶ್ರೀ ಮಾದರಿಯ ಬೆಳ್ಳಿ ಪುತ್ಥಳಿ ಉಡುಗೊರೆ ನೀಡಲು ಮುರುಘಾಶ್ರೀಗಳ ಶಿಷ್ಯವೃಂದ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಮುರುಘಾಶ್ರೀಗಳ ಪೀಠಾರೋಹಣ ತೃತೀಯ ದಶಮಾನೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಿಂದ 18ರ ವರೆಗೆ ಅಂದ್ರೆ 10 ದಿನಗಳಿಂದ ಶರಣ ಸಂಸ್ಕೃತಿ ಉತ್ಸವ ನಡೆಯುತ್ತಿದ್ದು ಇಂದು ಉತ್ಸವದ ಕೊನೆಯ ದಿನವಾಗಿದೆ. ಹೀಗಾಗಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಮುರುಘಾಶ್ರೀಗಳಿಗೆ ಉಡುಗೊರೆ ನೀಡಲು ಭಕ್ತರು, ಶಿಷ್ಯವೃಂದ ಮುಂದಾಗಿದ್ದು ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಮ್ಮದೇ ರೂಪದ ಬೆಳ್ಳಿ ಪುತ್ಥಳಿ ನೀಡಿ ಗೌರವಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇಂದು ಸಂಜೆ ಮಠದ ಅನುಭವ ಮಂಟಪದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಡಾ.ಶಿವಮೂರ್ತಿ ಮುರುಘಾಶರಣರಿಗೆ 21 ಇಂಚು ಎತ್ತರವಿರುವ, 20 ಕೆಜಿ ಬೆಳ್ಳಿಯ ಮುರುಘಾಶ್ರೀ ಮಾದರಿ ಬೆಳ್ಳಿ ಪುತ್ಥಳಿ ಉಡುಗೊರೆಯಾಗಿ ನೀಡಲಿದ್ದಾರೆ. ನಾಯಕನಹಟ್ಟಿ ಗ್ರಾಮದ ಶಿಲ್ಪಿ ಮಹೇಶ್ ಆಚಾರ್ ಈ ಬೆಳ್ಳಿ ಪುತ್ಥಳಿಯನ್ನು ನಿರ್ಮಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ಇನ್ನು ಶರಣಸಂಸ್ಕೃತಿ ಉತ್ಸವ ಅಂಗವಾಗಿ ಮುರುಘಾಮಠದಲ್ಲಿಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಿಎಂ ಬಸರಾಜ ಬೊಮ್ಮಾಯಿ ಹಾಗೂ ಬಿಎಸ್‌ ಯಡಿಯೂರಪ್ಪರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮುಖ್ಯಮಂತ್ರಿ ಬೊಮ್ಮಾಯಿಗೆ ‘ಬಸವ ಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಿದ್ದು ಮಾಜಿ ಸಿಎಂ B.S.ಯಡಿಯೂರಪ್ಪಗೆ ‘ಶರಣಶ್ರೀ’ ಪ್ರಶಸ್ತಿ ನೀಡಲಿದ್ದಾರೆ.

ಇದನ್ನೂ ಓದಿ: Video: ಕೇರಳ ಮಳೆಯ ಭೀಕರತೆ; ನೋಡನೋಡುತ್ತಿದ್ದಂತೆ ನದಿಗೆ ಕುಸಿದುಬಿತ್ತು ಇಡೀ ಮನೆ

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ