ಚಿತ್ರದುರ್ಗ: ಮುರುಘಾಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್ ನಿರ್ಬಂಧ; ಸಮಿತಿ ರಚನೆಗೆ ಸೂಚನೆ

ಫೋಕ್ಸೋ ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಮುರುಘಾಶ್ರೀ ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಅಲ್ಲದೆ, ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ, ಮುರುಘಾ ಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್ ನಿರ್ಬಂಧ ವಿಧಿಸಿದೆ.

ಚಿತ್ರದುರ್ಗ: ಮುರುಘಾಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್ ನಿರ್ಬಂಧ; ಸಮಿತಿ ರಚನೆಗೆ ಸೂಚನೆ
ಚಿತ್ರದುರ್ಗ: ಮುರುಘಾಶ್ರೀ ಆಡಳಿತಕ್ಕೆ ಸುಪ್ರೀಂಕೋರ್ಟ್ ನಿರ್ಬಂಧ; ಸಮಿತಿ ರಚನೆ ಮಾಡುವಂತೆ ಸರ್ಕಾರಕ್ಕೆ ಸೂಚನೆ
Edited By: Rakesh Nayak Manchi

Updated on: Feb 27, 2024 | 3:15 PM

ಚಿತ್ರದುರ್ಗ, ಫೆ.27: ಫೋಕ್ಸೋ (POCSO) ಪ್ರಕರಣ ಸಂಬಂಧ ಚಿತ್ರದುರ್ಗದ ಮುರುಘಾ ಮಠದ (Murugha Mutt) ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು (Dr. Sri Shivamurthy Murugha Sharanaru) ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀ ಮಠ ಹಾಗೂ ಎಸ್​ಜೆಎಂ ವಿದ್ಯಾಪೀಠದ ಆಡಳಿತ ನೋಡಿಕೊಳ್ಳುತ್ತಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂಕೋರ್ಟ್ (Supreme Court) ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಮುರುಘಾ ಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ.

ಎಸ್​ಜೆಎಂ ವಿದ್ಯಾಪೀಠದಲ್ಲಿನ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧ್ಯಕ್ಷ ಮುರುಘಾ ಶ್ರೀಯನ್ನು ಬಂಧಿಸಲಾಗಿತ್ತು. ಬಳಿಕ ಹೈಕೋರ್ಟ್ ಮುರುಘಾ ಶ್ರೀಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾ ಶ್ರೀಗಳು ಮುರುಘಾಮಠ, ಎಸ್​ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದರು.

ಇದನ್ನೂ ಓದಿ: ಎಫ್​ಐಆರ್ ರದ್ದು ಕೋರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್​​

ಫೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮುರುಘಾ ಶ್ರೀ ಕೈಗೆ ಮಠದ ಆಡಳಿತ ನೀಡಿದ್ದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅದರಂತೆ ಇಂದು ಮಧ್ಯಂತ ಆದೇಶ ನೀಡಿದ ಸುಪ್ರೀಂಕೋರ್ಟ್, ಮುರುಘಾಶ್ರೀ ಆಡಳಿತಕ್ಕೆ ನಿರ್ಬಂಧ ವಿಧಿಸಿದೆ. ಅಲ್ಲದೆ, ಮುರುಘಾಮಠ ಹಾಗೂ ಎಸ್​ಜೆಎಂ ವಿದ್ಯಾಪೀಠ ಆಡಳಿತಕ್ಕೆ ಮೂರು ದಿನದಲ್ಲಿ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us