AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಚಾರಿಕ ಬೆಳವಣಿಗೆ ಸಹಿಸದೇ ಮುರುಘಾ ಶರಣರ ವಿರುದ್ಧ ಷಡ್ಯಂತ್ರ: ಶರಣರು ಆರೋಪ ಮುಕ್ತರಾಗಿ ಹೊರಬರುತ್ತಾರೆ -ರಾಮನಗರದ ಮುಮ್ಮಡಿ ಶಿವರುದ್ರಸ್ವಾಮಿ

ಮುರುಘಾಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರಕ್ಕೆ ಸಂಬಂಧಿಸಿ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿಗಳು, ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಮುರುಘಾ ಶರಣರು ಆರೋಪ ಮುಕ್ತರಾಗಿ ಹೊರಬರಲಿದ್ದಾರೆ.

ವೈಚಾರಿಕ ಬೆಳವಣಿಗೆ ಸಹಿಸದೇ ಮುರುಘಾ ಶರಣರ ವಿರುದ್ಧ ಷಡ್ಯಂತ್ರ: ಶರಣರು ಆರೋಪ ಮುಕ್ತರಾಗಿ ಹೊರಬರುತ್ತಾರೆ -ರಾಮನಗರದ ಮುಮ್ಮಡಿ ಶಿವರುದ್ರಸ್ವಾಮಿ
ಮುರಘಾ ಮಠ ಸ್ವಾಮಿಜಿ
TV9 Web
| Updated By: ಆಯೇಷಾ ಬಾನು|

Updated on:Aug 30, 2022 | 3:22 PM

Share

ಚಿತ್ರದುರ್ಗ: ಜಿಲ್ಲೆಯ ಮುರುಘರಾಜೇಂದ್ರ ಬೃಹನ್ಮಠ (ಮುರುಘಾಮಠ) ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಮತ್ತೊಂದೆಡೆ ಇಂದು ಸಂತ್ರಸ್ತರು ನ್ಯಾಯಾಲಯದಲ್ಲಿ ಸೆಕ್ಷನ್ 164ರ ಅಡಿ ಹೇಳಿಕೆ ದಾಖಲಿಸಲಿದ್ದಾರೆ. ಇದರ ನಡುವೆ ಚಿತ್ರದುರ್ಗದ ಮುರುಘಾಮಠದಲ್ಲಿ ಸ್ವಾಮೀಜಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ಶಾಂತವೀರಶ್ರೀ, ಮಾದಾರ ಚನ್ನಯ್ಯಶ್ರೀ, ಮಾಚಿದೇವಶ್ರೀ ಸೇರಿ 20ಕ್ಕೂಹೆಚ್ಚು ಮಠಾಧೀಶರು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಮುರುಘಾಶ್ರೀ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ವಿಚಾರಕ್ಕೆ ಸಂಬಂಧಿಸಿ ಸುದ್ದಿಗೋಷ್ಠಿ ನಡೆಸಿರುವ ಸ್ವಾಮೀಜಿಗಳು, ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಮುರುಘಾ ಶರಣರು ಆರೋಪ ಮುಕ್ತರಾಗಿ ಹೊರಬರಲಿದ್ದಾರೆ ಎಂದು ರಾಮನಗರ ಜಿಲ್ಲೆ ಮರಳಗವಿ ಮಠದ ಮುಮ್ಮಡಿ ಶಿವರುದ್ರಸ್ವಾಮಿ ತಿಳಿಸಿದ್ದಾರೆ.

ವೈಚಾರಿಕ ಬೆಳವಣಿಗೆ ಸಹಿಸದೇ ಸ್ವಾಮೀಜಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಪಟ್ಟಭದ್ರ ಹಿತಾಸಕ್ತಿಗಳಿಂದ ಶ್ರೀಮಠಕ್ಕೆ ಕಪ್ಪು ಮಸಿ ಬಳಿಯುವ ಯತ್ನ ನಡೆದಿದೆ. ವೈಚಾರಿಕ ಕ್ರಾಂತಿಯಿಂದ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದ್ದಾರೆ. ಇದನ್ನು ಸಹಿಸದ ಕೆಲವು ಶಕ್ತಿಗಳಿಂದ ಷಡ್ಯಂತ್ರ ನಡೆಯುತ್ತಿದೆ ಎಂದರು. ಇದನ್ನೂ ಓದಿ: CRPC 164: ಸಿಆರ್​ಪಿಸಿ 164ರ ಅಡಿ ಹೇಳಿಕೆ ದಾಖಲಾದರೆ ಕಾನೂನಿನ ಕುಣಿಕೆ ಬಿದ್ದಂತೆಯೇ ಸರಿ; ಮುರುಘಾ ಶ್ರೀಗಳ ಬಗ್ಗೆ ಬಾಲಕಿಯರ ಹೇಳಿಕೆಗೆ ಇಷ್ಟೇಕೆ ಪ್ರಾಮುಖ್ಯತೆ?

ಶ್ರೀಗಳಿಗೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಮುರುಘಾ ಶ್ರೀಗಳು ತಪ್ಪು ಮಾಡಿಲ್ಲ, ಅವರು ನಿರಪರಾಧಿ. ಶಿವಮೂರ್ತಿ ಮುರಘಾ ಶರಣರು ಆರೋಪಮುಕ್ತರಾಗುತ್ತಾರೆ. ಮುರುಘಾ ಶ್ರೀಗಳು ವೈಚಾರಿಕ ಕ್ರಾಂತಿಯಿಂದ ಕೂಡಿದವರು. ಸ್ವಾಮೀಜಿಗೆ ಎಲ್ಲ ಮಠಾಧೀಶರು ಆತ್ಮಸ್ಥೈರ್ಯ ತುಂಬುತ್ತಿದ್ದಾರೆ. ಸತ್ಯವೇ ಜಯವಾಗುತ್ತೆ, ಶ್ರೀಗಳು ಆರೋಪ ಮುಕ್ತರಾಗುತ್ತಾರೆ. ಮಠದ ಅಭಿವೃದ್ಧಿಗೆ ಶಿವಮೂರ್ತಿ ಮುರುಘಾ ಶರಣರು ಶ್ರಮಿಸ್ತಾರೆ. ಶ್ರೀಗಳ ಹೋರಾಟಕ್ಕೆ ನಮ್ಮ ಬೆಂಬಲ, ಸಹಕಾರ ಇರುತ್ತದೆ. ಮಕ್ಕಳು ದೇವರ ಸಮಾನ, ಮಕ್ಕಳ ಬಗ್ಗೆ ನಮಗೆ ಗೌರವವಿದೆ. ಪ್ರಕರಣದ ತನಿಖೆಯ ನಂತರ ಸತ್ಯಾಂಶ ಬಯಲಾಗುತ್ತದೆ. ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಏನೂ ಹೇಳಲಾಗಲ್ಲ. ದಯವಿಟ್ಟು ಎಲ್ಲರೂ ಕ್ಷಮಿಸಬೇಕು ಎಂದರು.

ಮುರಘಾಶ್ರೀ ಬಂಧನಕ್ಕೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆ

ಮತ್ತೊಂದು ಕಡೆ ಮುರುಘಾಶ್ರೀ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ಮುಂದುವರೆದಿದೆ. ಬಾಲಮಂದಿರದ ಮುಂದೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಬಾಲಮಂದಿರದ ಮುಂದೆ ಪ್ರತಿಭಟನೆ ನಡೆಸದಂತೆ ಸೂಚಿಸಿದ್ದಾರೆ. ಈ ವೇಳೆ ಪೊಲೀಸ್​ ಅಧಿಕಾರಿಗಳ ಜೊತೆ ಪ್ರತಿಭಟನಾಕಾರರ ವಾಗ್ವಾದ ನಡೆದಿದೆ. ಚಿತ್ರದುರ್ಗದ ಬಾಲಮಂದಿರ ಬಳಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಹೆಚ್ಚುವರಿಯಾಗಿ ಮತ್ತೊಂದು ಡಿಎಆರ್ ತುಕುಡಿ ನಿಯೋಜನೆ ಮಾಡಲಾಗಿದೆ.

Published On - 2:39 pm, Tue, 30 August 22

ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
ಸ್ವದೇಶಿ ಉತ್ಪನ್ನ ಬಳಸಿ; ಭಾರತೀಯರಿಗೆ ಕರೆ ನೀಡಿದ ಸಚಿವ ಅಶ್ವಿನಿ ವೈಷ್ಣವ್
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ರಿಷಬ್ ಶೆಟ್ಟಿ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
‘ಕಾಂತಾರ’ ಸಿನಿಮಾಗೆ ಅಂಚೆ ಇಲಾಖೆ ಗೌರವ: ವಿಶೇಷ ಅಂಚೆ ಲಕೋಟೆ ಬಿಡುಗಡೆ
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಮೈಸೂರು ಬಿಜೆಪಿ ಟಿಕೆಟ್ ಸಿಕ್ಕಿದ್ಹೇಗೆ? ಗುಟ್ಟು ಬಿಚ್ಚಿಟ್ಟ ಯದುವೀರ್​​
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಅರಮನೆ ದರ್ಬಾರ್‌ ಹಾಲ್‌ನಲ್ಲಿ ಮೇಳೈಸಿದ ರಾಜ ಪರಂಪರೆಯ ಭವ್ಯ ದೃಶ್ಯ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಭರ್ಜರಿ ಮೆಚ್ಚುಗೆ ಪಡೆದ ಕಾಂತಾರ ಟ್ರೇಲರ್​: ರಿಷಬ್ ಶೆಟ್ಟಿ ಸುದ್ದಿಗೋಷ್ಠಿ
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ಹುಬ್ಬಳ್ಳಿಯಲ್ಲಿ ಬೈಕ್‌ ಖರೀದಿಗೆ ಮುಗಿಬಿದ್ದ ಗ್ರಾಹಕರು
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ್ರಾ? ಅಂತೆ ಕಂತೆಗಳಿಗೆ ಡಿಕೆ ಶಿವಕುಮಾರ್ ಗರಂ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಾತಾ ತ್ರಿಪುರ ಸುಂದರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ
ನವೆಂಬರ್ ನಲ್ಲಿ ಸಂಪುಟ ಪುನಾರಚನೆ: ದಿಲ್ಲಿಯಿಂದ ಬಂತು ಸ್ಫೋಟಕ ಸುದ್ದಿ