AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರಮಸಾಗರದಲ್ಲಿ 9 ದಿನಗಳ ತರಳಬಾಳು ಹಣ್ಣಿಮೆಗೆ ಚಾಲನೆ: ಈ ವರ್ಷದ ವಿಶೇಷವೇನು ಗೊತ್ತೇ?

9 ದಿನಗಳ ಕಾಲ ನಡೆಯುವ ಸಿರಿಗೆರೆ ಮಠದ ತರಳಬಾಳು ಹುಣ್ಣಿಮೆಗೆ ಚಾಲನೆ ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರದಲ್ಲಿ ಈ ವರ್ಷದ ತರಳಬಾಳು ಹುಣ್ಣಿಮೆ ನಡೆಯುತ್ತಿರುವುದು ವಿಶೇಷ. ಕಾರಣ ಹತ್ತಾರು ವರ್ಷಗಳ ಹೋರಾಟದ ನಂತರ ಚಿತ್ರದುರ್ಗದ ಹತ್ತಾರು ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ಬಂದಿದೆ. ಇದಕ್ಕೆ ಸಿರಿಗೆರೆ ಸ್ವಾಮೀಜಿಯೇ ಕಾರಣೀಕರ್ತರು. ಈ ವರ್ಷದ ತರಳುಬಾಳು ಹುಣ್ಣಿಮೆ ವಿಶೇಷದ ಬಗ್ಗೆ ಇಲ್ಲಿದೆ ವಿವರ.

ಭರಮಸಾಗರದಲ್ಲಿ 9 ದಿನಗಳ ತರಳಬಾಳು ಹಣ್ಣಿಮೆಗೆ ಚಾಲನೆ: ಈ ವರ್ಷದ ವಿಶೇಷವೇನು ಗೊತ್ತೇ?
ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಸೇರಿದ್ದ ಜನಸ್ತೋಮ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: Ganapathi Sharma

Updated on: Feb 05, 2025 | 12:23 PM

ಚಿತ್ರದುರ್ಗ, ಫೆಬ್ರವರಿ 5: ಚಿತ್ರದುರ್ಗ ತಾಲೂಕಿನ ಭರಮಸಾಗರ ಒಂದು ರೀತಿಯಲ್ಲಿ ಐತಿಹಾಸಿಕ ಸ್ಥಳ. ವಿಶೇಷವಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ನಡುವೆ ಇರುವ ಭರಮಸಾಗರ ವಾಣಿಜ್ಯ ಕೇಂದ್ರವೂ ಹೌದು. ಇಂತಹ ಐತಿಹಾಸಿಕ ಪ್ರದೇಶ ಹಿಂದೆ ಬರ ಪೀಡಿತ ಪ್ರವೇಶವಾಗಿತ್ತು. ಈಗ ಎಲ್ಲಿ ನೋಡಿದರಲ್ಲಿ ನೀರು ನೀರು ತುಂಬಿದೆ. ಇದಕ್ಕೆ ಕಾರಣ ದಾವಣಗೆರೆ ಜಿಲ್ಲೆಯ ಹರಿಹರ ಬಳಿಯ ತುಂಗಭದ್ರಾ ನದಿಯಿಂದ ಪೈಪ್​ಲೈನ್ ಮೂಲಕ ಕೆರೆಗಳಿಗೆ ತುಂಬಿಸಲಾಗುತ್ತಿರುವುದು. ಇದೀಗ ಇಂಥ ಖುಷಿಯ ಸಂದರ್ಭದಲ್ಲೇ ಭರಮಸಾಗರದಲ್ಲಿ 9 ದಿನಗಳ ತರಳಬಾಳು ಹಣ್ಣಿಮೆಗೆ ಚಾಲನೆ ಸಿಕ್ಕಿದೆ. ರಾಜ್ಯದ ಬಹುತೇಕ ಕಡೆ ನಡೆದ ತರಳಬಾಳು ಹುಣ್ಣಿಮೆ ಈ ಸಲ ಭರಮಸಾಗರದಲ್ಲಿ ನಡೆಯುತ್ತಿದೆ. ಇದಕ್ಕೂ ತುಂಗಭದ್ರಾ ನದಿಯಿಂದ ನೀರು ಬರುವಂತಾಗಿರುವುದಕ್ಕೂ ಇದೆ ನಂಟು!

ತುಂಗಭದ್ರಾ ನದಿಯಿಂದ ನೀರು ಬರುವಂತಾಗಲು ಸಿರಿಗೆರೆ ಸ್ವಾಮೀಜಿಯೇ ಪ್ರಮುಖ ಕಾರಣೀಕರ್ತರು. ಜತೆಗೆ ಈ ಬಾರಿ ಭರಮಸಾಗರದಲ್ಲೇ ತರಳಬಾಳು ಹುಣ್ಣಿಮೆ ನಡೆಯುತ್ತಿದೆ.

ಮೊದಲ ದಿನ ಏನೇನು ಕಾರ್ಯಕ್ರಮ?

ಮೊದಲ ದಿನವಾದ ಮಂಗಳವಾರ ಶಿಕ್ಷಣ, ಸಮಾಜದ ಬಗ್ಗೆ ಚಿಂತನೆ ನಡೆಯಿತು. ಸಚಿವ ಮಧುಬಂಗಾರಪ್ಪ ಅವರು ಚಾಲನೆ ನೀಡಿದ್ದರು. ವಿಶೇಷವಾಗಿ ತರಳಬಾಳು ಗುರಪೀಠದ ಈ ಹುಣ್ಣಿಮೆ ಅಂದರೆ ಸಂಗೀತ ಸಾಹಿತ್ಯ, ನೃತ್ಯ, ಕಲೆ ಜೊತೆಗೆ ಕಸರತ್ತುಗಳ ಮೇಳ ಎಂದೇ ಪ್ರಸಿದ್ಧಿ ಪಡೆದಿದೆ. ಬಾಲಕ, ಬಾಲಕಿಯರ ಹಗ್ಗದ ಮೇಲಿನ ಕಸರತ್ತು ಗಮನ ಸೆಳೆಯಿತು.

Girls

ತರಳಬಾಳು ಹಣ್ಣಿಮೆ ಕಾರ್ಯಕ್ರಮದಲ್ಲಿ ಕಸರತ್ತು ಪ್ರದರ್ಶಿಸಿದ ಬಾಲಕಿಯರು

ಸಮಾರಂಭದಲ್ಲಿ ಮಾತನಾಡಿದ ತರಳಬಾಳು ಗುರುಪೀಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶಿಕ್ಷಣ ವ್ಯವಸ್ಥೆ ಬಗ್ಗೆ ಬೇಸರ ವ್ಯಕ್ತ ಪಡಿಸಿದರು. ರೈತನ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಮುಂದೆ ಒಂದು ದಿನ ಬರುತ್ತದೆ, ನಾಲ್ಕು ಎಕರೆ ಅಡಿಕೆ ತೋಟ ಇದ್ದ ರೈತನಿಗೆ ಹುಡಾಡಿಕೊಂಡು ಬಂದು ಹೆಣ್ಣು ಕೊಡುತ್ತಾರೆ ಎಂದರು.

ನಟ ಡಾಲಿ ಧನಂಜಯ ಕೂಡ ಬಸವಣ್ಣ ಹಾಗೂ ಅಲ್ಲಮನ ವಚನಗಳನ್ನು ಹೇಳಿ ಸಭಿಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದರು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಡಾಲಿ ಧನಂಜಯ ನೋಡಲು ಜನಸಾಗರ; ಲಾಠಿ ಬೀಸಿದ ಪೊಲೀಸರು

ನಿತ್ಯ ಒಂದೊಂದು ವಿಚಾರಗಳನ್ನಿಟ್ಟಿಕೊಂಡು ಒಟ್ಟು ಒಂಬತ್ತು ದಿನ ತರಳಬಾಳು ಹುಣ್ಣಿಮೆ ನಡೆಯುತ್ತದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಹಾಲಿ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಅನೇಕ ಪ್ರಮುಖರು ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ