AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ ಗ್ಯಾರಂಟಿ: ನಿರುದ್ಯೋಗ ಭತ್ಯೆ ನೀಡಿ ಯುವಕರಿಂದ ಕೆಲಸ ಮಾಡಿಸಿ: ಸರ್ಕಾರಕ್ಕೆ ತರಳಬಾಳು ಶ್ರೀ ಸಲಹೆ

ಕಾಂಗ್ರೆಸ್​ನ ಐದು ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ನೀಡುವ ವಿಚಾರವಾಗಿ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸರ್ಕಾರಕ್ಕೆ ಕೆಲ ಸಲಹೆ ನೀಡಿದ್ದಾರೆ.

ಕಾಂಗ್ರೆಸ್‌ ಗ್ಯಾರಂಟಿ: ನಿರುದ್ಯೋಗ ಭತ್ಯೆ ನೀಡಿ ಯುವಕರಿಂದ ಕೆಲಸ ಮಾಡಿಸಿ: ಸರ್ಕಾರಕ್ಕೆ ತರಳಬಾಳು ಶ್ರೀ ಸಲಹೆ
ರಮೇಶ್ ಬಿ. ಜವಳಗೇರಾ
|

Updated on: May 31, 2023 | 12:11 PM

Share

ಮುಖ್ಯಾಂಶಗಳು

  • ನಿರುದ್ಯೋಗ ಭತ್ಯೆಯನ್ನು ನೀಡಿ ಯುವಕರಿಂದ ಕೆಲಸ ಮಾಡಿಸಿ
  • ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸಲಹೆ
  • ಮಠಕ್ಕೆ ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆಗೆ ಶ್ರೀಗಳ ಸಲಹೆ

ಚಿತ್ರದುರ್ಗ: ಚುನಾವಣೆಯಲ್ಲಿ ಕಾಂಗ್ರೆಸ್​ ನೀಡಿರುವ ಐದು ಗ್ಯಾರಂಟಿಗಳ (Congress guarantees)ಬಗ್ಗೆ ಇದೀಗ ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಕೊಟ್ಟ ಮಾತಿನಿಂತೆ ಈ ಗ್ಯಾರಂಟಿಗಳನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಇನ್ನು ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ನೀಡುವ ಬಗ್ಗೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ(Taralabalu Shivamurthy Shivacharya Swamiji) ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರ ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಸಿರಿಗೆರೆ ತರಳಬಾಳು ಮಠಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿದ ವೇಳೆ ಸಲಹೆ ನೀಡಿರುವ ಸ್ವಾಮೀಜಿ, ನಿರುದ್ಯೋಗ ಭತ್ಯೆಯನ್ನು ನೀಡಿ ಯುವಕರಿಂದ ಕೆಲಸ ಮಾಡಿಸಿ. ಟ್ಯಾಕ್ಸ್ ಪೇಯರ್ ಮನಿ ಸದ್ಬಳಕೆ ಆಗಲಿ ಎಂದು ಸಲಹೆ ನೀಡಿದ್ದಾರೆ.

ನಿರುದ್ಯೋಗಿ ಯುವಕರಿಗೆ 3000 ಹಣ ನೀಡಿ, ಆದ್ರೆ ಅವರಿಂದ ಸರಕಾರ ಕೆಲಸ ಪಡೆಯುವಂತಾಗಬೇಕು. ಇದರಿಂದ ಯುವಕರು ಕೆಲಸ ಮಾಡುವಂತಾಗಬೇಕು. ಸರಕಾರದ ಈ ಗ್ಯಾರಂಟಿಗಳ ಈಡೇರಿಕೆಗೆ 56 ಸಾವಿರ ಕೋಟಿ ಹಣ ಬೇಕಾಗುತ್ತದೆ. ಹಾಗಾಗಿ ಯುವಕರಿಗೆ ಏನಾದ್ರೂ ಕೆಲಸ ಅಸೈನ್ ಮಾಡಿ . ಗ್ರಾಮ ಹಾಗೂ ಪಟ್ಟಣ ಮಟ್ಟದಲ್ಲಿ ಯುವಕರಿಗೆ ಉದ್ಯೋಗ ನೀಡಿ ಎಂದು ನೂತನ ಸಚಿವ ಸಚಿವ ಈಶ್ವರ ಖಂಡ್ರೆಗೆ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ತಿಳಿಸಿದರು.

ಇನ್ನು ಇದಕ್ಕೆ ಈಶ್ವರ್ ಖಂಡ್ರೆ ಪ್ರತಿಕ್ರಿಯಿಸಿ, ಚುನಾವಣೆ ಪೂರ್ವ ತರಾತುರಿಯಲ್ಲಿ ಗ್ಯಾರಂಟಿ ಘೋಷಣೆ ಆಗಿದೆ. ಗ್ಯಾರಂಟಿ ಅನುಷ್ಠಾನ ವೇಳೆ ಎಲ್ಲಾ ಅಂಶಗಳ ಚಿಂತನೆ ನಡೆಸುತ್ತೇವೆ. ಸುಮಾರು 50-55 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ನಿಮ್ಮ ಸಲಹೆಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆಂದ ಎಂದರು.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ