AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು: ಶೂದ್ರ ಹೋಗಿ ಶುದ್ಧವಾಗಬೇಕು; ಹಂಸಲೇಖ

ನನ್ನ ಡಾರ್ಜಿಲಿಂಗ್ ಚಿತ್ರದುರ್ಗ, ನಾನು ಪ್ರೇಮಿಸುತ್ತಿದ್ದ ವೇಳೆ ದುರ್ಗಕ್ಕೆ ಬರುತ್ತಿದೆನು. ಬೆಳಗ್ಗೆಯಿಂದ ಸಂಜೆವರೆಗೆ ಕೋಟೆಯಲ್ಲೇ ಇರುತ್ತಿದ್ದೆವು. ನಮ್ಮ ಪ್ರೇಮದ ಘಟನೆಗಳು ದುರ್ಗದಲ್ಲೇ ನಡೆದಿವೆ.

ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು: ಶೂದ್ರ ಹೋಗಿ ಶುದ್ಧವಾಗಬೇಕು; ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ
TV9 Web
| Edited By: |

Updated on: Apr 09, 2022 | 6:11 PM

Share

ಚಿತ್ರದುರ್ಗ: ಶೂದ್ರ ಪದವನ್ನು ಎಲ್ಲ ನಿಘಂಟು (Dictionary) ಗಳಿಂದ ನಿವಾರಿಸಿ ಎಂದು ನಗರದಲ್ಲಿಂದು ತ.ರಾ.ಸು ರಂಗಮಂದಿರದಲ್ಲಿ ಮಾನವ ಬಂಧತ್ವ ವೇದಿಕೆ ಆಯೋಜಿಸಿದ್ದ ಬಂಧುತ್ವ ಅಧಿವೇಶನ ಸಮಾರೋಪ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು. ಶೂದ್ರ ಹೋಗಿ ಶುದ್ಧವಾಗಬೇಕು. ಸಿಂಹಾಸನದ ಮೇಲೆ ಕುಳಿತವನ ಕಾಲು ನೆಲದ‌ ಮೇಲಿರಬೇಕು. ಶುದ್ಧತೆಯನ್ನು ಹೊಂದಿದವರನ್ನು ಅಧಿಕಾರಕ್ಕೆ ತನ್ನಿ. ಶೂದ್ರ ಹೋಗಿ ಶುದ್ಧವಾಗಬೇಕೆಂಬುದರ ಬಗ್ಗೆ ಎಪ್ರಿಲ್ 14 ಅಂಬೇಡ್ಕರ್ ಜಯಂತಿ ವೇಳೆ ಹಾಡು ಬರೆದು ಹಾಕುತ್ತೇನೆಂದರು. ಬಂಧುತ್ವ ಹೆಸರಿನಲ್ಲಿ ಇಷ್ಟೆಲ್ಲ ಜನ ಸೇರಿದ್ದು ಖುಷಿ. ನೀವು ಸಮಾಜಕ್ಕೆ ಹಾಲು, ಮೊಸರು, ಮಜ್ಜಿಗೆ, ಬೆಣ್ಣೆ, ಭೂಮಿಗೆ ಗೊಬ್ಬರ ಕೊಡುವ ಕಾಮಧೇನು ಆಗಬೇಕು. ನೀವ್ಯಾರೂ ಅಶಿಕ್ಷಿತರಲ್ಲ, ಯುದ್ಧದ ಬಗ್ಗೆ ವಂಶಪಾರಂಪರ್ಯವಾಗಿ ಗೊತ್ತಿದೆ. ಯುದ್ಧದಲ್ಲಿ ನಾವು ಯಾವತ್ತೂ ಸೋತಿಲ್ಲ. ರಂಗಭೂಮಿಯ ಮೇಲೆ ಕಲಾವಿದ ಸಾಯುತ್ತಾನೆಯೆ ಹೊರತು ಸುಳ್ಳು ಹೇಳಲ್ಲ ಎಂದು ಹೇಳಿದರು.

ನನ್ನ ಡಾರ್ಜಿಲಿಂಗ್ ಚಿತ್ರದುರ್ಗ, ನಾನು ಪ್ರೇಮಿಸುತ್ತಿದ್ದ ವೇಳೆ ದುರ್ಗಕ್ಕೆ ಬರುತ್ತಿದೆನು. ಬೆಳಗ್ಗೆಯಿಂದ ಸಂಜೆವರೆಗೆ ಕೋಟೆಯಲ್ಲೇ ಇರುತ್ತಿದ್ದೆವು. ನಮ್ಮ ಪ್ರೇಮದ ಘಟನೆಗಳು ದುರ್ಗದಲ್ಲೇ ನಡೆದಿವೆ. ನಾನು ಕಂಡ ಮೇರುನಟ ರಾಜ್ ಕುಮಾರ್​, ಅವರು ರಾಜಕೀಯಕ್ಕೆ ಬರದೆ ಕನ್ನಡ ನುಡಿನಾಡಿಯಾಗಿ ಬಂದರು. ರಾಜ್ ಕುಮಾರ್ ಚಿತ್ರರಂಗಕ್ಕೆ ಪ್ರವೇಶಿಸಿದ್ದು ಚಿತ್ರದುರ್ಗದಿಂದ. ನಾನು ವಿವೇಕ ವೇದಿಕೆ ಕಟ್ಟಿದ್ದು ಚಳ್ಳಕೆರೆಯಲ್ಲಿ, ಯಶಸ್ಸು ಗಳಿಸಿದ್ದು ಚಿತ್ರದುರ್ಗದಲ್ಲಿ. ಇಂದು ಯಾವ ಭಾರತೀಯನೂ ಏಕಾಂಗಿಯಲ್ಲ; ಎಲ್ಲರೂ ಸಾಲಗಾರರು. ಶಸ್ತ್ರಾಸ್ತ್ರಗಳ ಸಾಲದ ಭಾರ ಭಾರತೀಯರ ಮೇಲಿದೆ. ನಾಡಿನ ಸಮಸ್ಯೆ ಪರಿಹರಿಸಿ ಉಪಾಯ ಕಂಡುಹಿಡಿಯಲು ಇದೊಂದು ಅವಕಾಶ. ನೀವೆಲ್ಲ ಎಚ್ಚರವಾಗಿರಬೇಕು. ನಮ್ಮನ್ನು ಯುದ್ಧಕ್ಕೆ ಕೆಣಕಿ ಅವರು ಬಲಿಹಾಕಲು ಯತ್ನಿಸುತ್ತಿಸಿದ್ದಾರೆ. ಸೋಲದ ಯೋಧರಿಗೆ ವಿಷಭರಿತ ಸೇಬು ಹಂಚಲಾಗುತ್ತಿದೆ. ನೀವು ಬುದ್ಧ ಆಗಬೇಡಿ, ಶುದ್ಧರಾಗಿ ಸಾಕು. ನಾವು ಮಾಡುವ ಕೆಲಸದಲ್ಲಿ ಶುದ್ಧತೆ ಇರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಸಂಸ್ಥಾನಗಳು ಯುದ್ಧದಲ್ಲಿ ತೊಡಗಿದ್ದವು. ಸಂವಿಧಾನ ಬಂತು ಯುದ್ಧ ನಿಂತಿತು ಎಂದರು.

ಇದನ್ನೂ ಓದಿ:

‘ಎರಡು ದೊಡ್ಡ ಕನಸುಗಳ ಸಮ್ಮಿಲನ’; ಮತ್ತೊಂದು ದೊಡ್ಡ ಹೆಜ್ಜೆ ಇಡಲು ಹೊಂಬಾಳೆ ಫಿಲ್ಮ್ಸ್ ರೆಡಿ

Ram Navami 2022: ಶ್ರೀ ರಾಮನನ್ನು ರಾಮಚಂದ್ರ ಎಂಬ ಅನ್ವರ್ಥ ನಾಮದಿಂದ ಕರೆದವರು ಯಾರು, ಯಾಕೆ?

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ