AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು: ಶೂದ್ರ ಹೋಗಿ ಶುದ್ಧವಾಗಬೇಕು; ಹಂಸಲೇಖ

ನನ್ನ ಡಾರ್ಜಿಲಿಂಗ್ ಚಿತ್ರದುರ್ಗ, ನಾನು ಪ್ರೇಮಿಸುತ್ತಿದ್ದ ವೇಳೆ ದುರ್ಗಕ್ಕೆ ಬರುತ್ತಿದೆನು. ಬೆಳಗ್ಗೆಯಿಂದ ಸಂಜೆವರೆಗೆ ಕೋಟೆಯಲ್ಲೇ ಇರುತ್ತಿದ್ದೆವು. ನಮ್ಮ ಪ್ರೇಮದ ಘಟನೆಗಳು ದುರ್ಗದಲ್ಲೇ ನಡೆದಿವೆ.

ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು: ಶೂದ್ರ ಹೋಗಿ ಶುದ್ಧವಾಗಬೇಕು; ಹಂಸಲೇಖ
ಸಂಗೀತ ನಿರ್ದೇಶಕ ಹಂಸಲೇಖ
TV9 Web
| Edited By: |

Updated on: Apr 09, 2022 | 6:11 PM

Share

ಚಿತ್ರದುರ್ಗ: ಶೂದ್ರ ಪದವನ್ನು ಎಲ್ಲ ನಿಘಂಟು (Dictionary) ಗಳಿಂದ ನಿವಾರಿಸಿ ಎಂದು ನಗರದಲ್ಲಿಂದು ತ.ರಾ.ಸು ರಂಗಮಂದಿರದಲ್ಲಿ ಮಾನವ ಬಂಧತ್ವ ವೇದಿಕೆ ಆಯೋಜಿಸಿದ್ದ ಬಂಧುತ್ವ ಅಧಿವೇಶನ ಸಮಾರೋಪ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ನಿಘಂಟುಗಳಿಂದ ಶೂದ್ರ ಪದ ತೆಗೆದುಹಾಕಬೇಕು. ಶೂದ್ರ ಹೋಗಿ ಶುದ್ಧವಾಗಬೇಕು. ಸಿಂಹಾಸನದ ಮೇಲೆ ಕುಳಿತವನ ಕಾಲು ನೆಲದ‌ ಮೇಲಿರಬೇಕು. ಶುದ್ಧತೆಯನ್ನು ಹೊಂದಿದವರನ್ನು ಅಧಿಕಾರಕ್ಕೆ ತನ್ನಿ. ಶೂದ್ರ ಹೋಗಿ ಶುದ್ಧವಾಗಬೇಕೆಂಬುದರ ಬಗ್ಗೆ ಎಪ್ರಿಲ್ 14 ಅಂಬೇಡ್ಕರ್ ಜಯಂತಿ ವೇಳೆ ಹಾಡು ಬರೆದು ಹಾಕುತ್ತೇನೆಂದರು. ಬಂಧುತ್ವ ಹೆಸರಿನಲ್ಲಿ ಇಷ್ಟೆಲ್ಲ ಜನ ಸೇರಿದ್ದು ಖುಷಿ. ನೀವು ಸಮಾಜಕ್ಕೆ ಹಾಲು, ಮೊಸರು, ಮಜ್ಜಿಗೆ, ಬೆಣ್ಣೆ, ಭೂಮಿಗೆ ಗೊಬ್ಬರ ಕೊಡುವ ಕಾಮಧೇನು ಆಗಬೇಕು. ನೀವ್ಯಾರೂ ಅಶಿಕ್ಷಿತರಲ್ಲ, ಯುದ್ಧದ ಬಗ್ಗೆ ವಂಶಪಾರಂಪರ್ಯವಾಗಿ ಗೊತ್ತಿದೆ. ಯುದ್ಧದಲ್ಲಿ ನಾವು ಯಾವತ್ತೂ ಸೋತಿಲ್ಲ. ರಂಗಭೂಮಿಯ ಮೇಲೆ ಕಲಾವಿದ ಸಾಯುತ್ತಾನೆಯೆ ಹೊರತು ಸುಳ್ಳು ಹೇಳಲ್ಲ ಎಂದು ಹೇಳಿದರು.

ನನ್ನ ಡಾರ್ಜಿಲಿಂಗ್ ಚಿತ್ರದುರ್ಗ, ನಾನು ಪ್ರೇಮಿಸುತ್ತಿದ್ದ ವೇಳೆ ದುರ್ಗಕ್ಕೆ ಬರುತ್ತಿದೆನು. ಬೆಳಗ್ಗೆಯಿಂದ ಸಂಜೆವರೆಗೆ ಕೋಟೆಯಲ್ಲೇ ಇರುತ್ತಿದ್ದೆವು. ನಮ್ಮ ಪ್ರೇಮದ ಘಟನೆಗಳು ದುರ್ಗದಲ್ಲೇ ನಡೆದಿವೆ. ನಾನು ಕಂಡ ಮೇರುನಟ ರಾಜ್ ಕುಮಾರ್​, ಅವರು ರಾಜಕೀಯಕ್ಕೆ ಬರದೆ ಕನ್ನಡ ನುಡಿನಾಡಿಯಾಗಿ ಬಂದರು. ರಾಜ್ ಕುಮಾರ್ ಚಿತ್ರರಂಗಕ್ಕೆ ಪ್ರವೇಶಿಸಿದ್ದು ಚಿತ್ರದುರ್ಗದಿಂದ. ನಾನು ವಿವೇಕ ವೇದಿಕೆ ಕಟ್ಟಿದ್ದು ಚಳ್ಳಕೆರೆಯಲ್ಲಿ, ಯಶಸ್ಸು ಗಳಿಸಿದ್ದು ಚಿತ್ರದುರ್ಗದಲ್ಲಿ. ಇಂದು ಯಾವ ಭಾರತೀಯನೂ ಏಕಾಂಗಿಯಲ್ಲ; ಎಲ್ಲರೂ ಸಾಲಗಾರರು. ಶಸ್ತ್ರಾಸ್ತ್ರಗಳ ಸಾಲದ ಭಾರ ಭಾರತೀಯರ ಮೇಲಿದೆ. ನಾಡಿನ ಸಮಸ್ಯೆ ಪರಿಹರಿಸಿ ಉಪಾಯ ಕಂಡುಹಿಡಿಯಲು ಇದೊಂದು ಅವಕಾಶ. ನೀವೆಲ್ಲ ಎಚ್ಚರವಾಗಿರಬೇಕು. ನಮ್ಮನ್ನು ಯುದ್ಧಕ್ಕೆ ಕೆಣಕಿ ಅವರು ಬಲಿಹಾಕಲು ಯತ್ನಿಸುತ್ತಿಸಿದ್ದಾರೆ. ಸೋಲದ ಯೋಧರಿಗೆ ವಿಷಭರಿತ ಸೇಬು ಹಂಚಲಾಗುತ್ತಿದೆ. ನೀವು ಬುದ್ಧ ಆಗಬೇಡಿ, ಶುದ್ಧರಾಗಿ ಸಾಕು. ನಾವು ಮಾಡುವ ಕೆಲಸದಲ್ಲಿ ಶುದ್ಧತೆ ಇರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಸಂಸ್ಥಾನಗಳು ಯುದ್ಧದಲ್ಲಿ ತೊಡಗಿದ್ದವು. ಸಂವಿಧಾನ ಬಂತು ಯುದ್ಧ ನಿಂತಿತು ಎಂದರು.

ಇದನ್ನೂ ಓದಿ:

‘ಎರಡು ದೊಡ್ಡ ಕನಸುಗಳ ಸಮ್ಮಿಲನ’; ಮತ್ತೊಂದು ದೊಡ್ಡ ಹೆಜ್ಜೆ ಇಡಲು ಹೊಂಬಾಳೆ ಫಿಲ್ಮ್ಸ್ ರೆಡಿ

Ram Navami 2022: ಶ್ರೀ ರಾಮನನ್ನು ರಾಮಚಂದ್ರ ಎಂಬ ಅನ್ವರ್ಥ ನಾಮದಿಂದ ಕರೆದವರು ಯಾರು, ಯಾಕೆ?

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ