Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಶವ ಕೊಂಡೊಯ್ಯುತ್ತಿದ್ದ ಕಾರಿನ ಟೈರ್ ಸ್ಫೋಟ, ಮೂವರು ದುರ್ಮರಣ

ಶವ ಸಾಗಿಸುತ್ತಿದ್ದ ಕಾರಿನ ಟೈರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ.

ಚಿತ್ರದುರ್ಗ: ಶವ ಕೊಂಡೊಯ್ಯುತ್ತಿದ್ದ ಕಾರಿನ ಟೈರ್ ಸ್ಫೋಟ, ಮೂವರು ದುರ್ಮರಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 19, 2024 | 6:28 PM

ಚಿತ್ರದುರ್ಗ, (ಜನವರಿ 19): ಶವ ಸಾಗಿಸುತ್ತಿದ್ದ ಕಾರಿನ ಟೈರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ. ಮೃತ ವೃದ್ಧೆಯ ಶವವನ್ನು ಬೆಂಗಳೂರಿಂದ ಬಳ್ಳಾರಿಯ (Bellary) ಸಿರಗುಪ್ಪಕ್ಕೆ ಕೊಂಡೊಯ್ಯುವಾಗ ವೇಳೆ ರಾಂಪುರ ಗ್ರಾಮ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಟೈರ್ ಸ್ಫೋಟಗೊಂಡು ಕಾರು ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ.  ಸುರೇಶ್(40), ಮಲ್ಲಿಕಾರ್ಜುನ(25), ಭೂಮಿಕಾ(9) ಮೃತ ದುರ್ವೈವಿಗಳು. ಮೃತರು ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ದೇಸನೂರು ನಿವಾಸಿಗಳು ಎಂದು ತಿಳಿದುಬಂದಿದೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹುಲಿಗೆಮ್ಮ(66) ಎನ್ನುವರು ಬೆಂಗಳೂರಿನ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದರು. ಹೀಗಾಗಿ ಕಾರಿನಲ್ಲಿ ಹುಲಿಗೆಮ್ಮನ ಮೃತದೇಹವನ್ನು ಬೆಂಗಳೂರಿನಿಂದ ದೇಸನೂರು ಸಾಗಿಸಲಾಗುತ್ತಿತ್ತು. ಆದ್ರೆ, ಮಾರ್ಗ ಮಧ್ಯೆ ಟೈರ್​ ಸ್ಫೋಟಗಗೊಂಡು ಕಾರು ಪಲ್ಟಿಯಾಗಿದೆ.ಈ ಹಿನ್ನೆಲೆಯಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ನಾಗಮ್ಮ, ತಾಯಮ್ಮ, ಧನರಾಜ್, ಕಾರು ಚಾಲಕ ಶಿವು ಸ್ಥಿತಿ ಗಂಭೀರವಾಗಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ರೈತ ಸಾವು

ಹುಬ್ಬಳ್ಳಿ: ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಕೃಷಿ ಕಾರ್ಮಿಕ (Electric shock) ದಾರುಣವಾಗಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಮಾದೇವಪ್ಪ ಹಂಗರಕಿ (62) ಮೃತ ಕೃಷಿ ಕಾರ್ಮಿಕ. ಮಾದೇವಪ್ಪ ಅವರು ಅನ್ವರ್ ಬೇಪಾರಿ ಎನ್ನುವವರ ಕಬ್ಬಿನ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಪಂಪ್‌ಸೆಟ್‌‌ಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ಕಟ್ ಆಗಿತ್ತು. ಆದರೆ ಇದನ್ನು ಗಮನಿಸಿದ ಮಾದೇವಪ್ಪ ವಿದ್ಯುತ್ ತಂತಿ ತುಳಿದಾಗ ಕ್ಷಣಾರ್ಧದಲ್ಲೇ ವಿದ್ಯುತ್‌ ಪ್ರವಹಿಸಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:39 pm, Fri, 19 January 24

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ