ಟಿವಿ9 ವರದಿ ಬೆನ್ನಲ್ಲೇ ಮಠದಕುರುಬರಹಟ್ಟಿ ಬಳಿಯ ಕೆರೆಯಲ್ಲಿರುವ ವಿದ್ಯುತ್ ಕಂಬಗಳ ತೆರವಿಗೆ ಪತ್ರ ಬರೆದ ಬೆಸ್ಕಾಂ ಇಲಾಖೆ EE

ಚಿತ್ರದುರ್ಗ ತಾಲೂಕಿನ ಮಠದಕುರುಬರಹಟ್ಟಿ ಬಳಿಯ ಮುರುಘಾಮಠದ ಮುಂಭಾಗದಲ್ಲಿರುವ ಕೆರೆಯಲ್ಲಿ ವಿದ್ಯುತ್ ಕಂಬಗಳು ನೆಲಕ್ಕೆ ಬಾಗಿದ್ದು ವಿದ್ಯುತ್ ತಂತಿಗಳು ನೀರಿಗೆ ತಾಗುವಂತಿದ್ದವು. ಈ ಬಗ್ಗೆ ಟಿವಿ9ನಲ್ಲಿ ವರದಿ ಪ್ರಸಾರವಾದ ಕೆಲ ಹೊತ್ತಿನಲ್ಲೇ ಬೆಸ್ಕಾಂ ಇಲಾಖೆ EE ಜಯಣ್ಣ ಅವರು ಕೇಂದ್ರ ಕಚೇರಿಗೆ ಪತ್ರ ಬರೆದು ವಾರದೊಳಗೆ ಕೆರೆಯಲ್ಲಿರುವ ವಿದ್ಯುತ್ ಕಂಬ ತೆರವಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಟಿವಿ9 ವರದಿ ಬೆನ್ನಲ್ಲೇ ಮಠದಕುರುಬರಹಟ್ಟಿ ಬಳಿಯ ಕೆರೆಯಲ್ಲಿರುವ ವಿದ್ಯುತ್ ಕಂಬಗಳ ತೆರವಿಗೆ ಪತ್ರ ಬರೆದ ಬೆಸ್ಕಾಂ ಇಲಾಖೆ EE
ಮಠದಕುರುಬರಹಟ್ಟಿ ಬಳಿಯ ಕೆರೆಯಲ್ಲಿರುವ ವಿದ್ಯುತ್ ಕಂಬ
Follow us
| Updated By: ಆಯೇಷಾ ಬಾನು

Updated on: Dec 03, 2023 | 7:59 AM

ಚಿತ್ರದುರ್ಗ, ಡಿ.03: ವಿದ್ಯುತ್ ಅವಘಡ ಪ್ರಕರಣಗಳ ತಡೆಗೆ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಆದರೆ ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಮಾತ್ರ ಬೆಸ್ಕಾಂ ಅಧಿಕಾರಿಗಳು ತೀವ್ರ ನಿರ್ಲಕ್ಷ ತೋರಿದ್ದಾರೆ. ಕೆರೆಯಲ್ಲೇ ವಿದ್ಯುತ್ ಕಂಬಗಳು, ವಿದ್ಯುತ್ ತಂತಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದರೂ ಕ್ಯಾರೆ ಅಂದಿಲ್ಲ ಎಂಬ ಬಗ್ಗೆ ನಿನ್ನೆ ಟಿವಿ9 ವರದಿ ಮಾಡಿತ್ತು (TV9 Impact). ಈ ವರದಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಬೆಸ್ಕಾಂ ಇಲಾಖೆ EE ಜಯಣ್ಣ (BESCOM EE) ಅವರು ಟಿವಿ9 ವರದಿ ಉಲ್ಲೇಖಿಸಿ ಕೇಂದ್ರ ಕಚೇರಿಗೆ ಪತ್ರ ಬರೆದಿದ್ದಾರೆ. ಬೆವಿಕಂ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ವಾರದೊಳಗೆ ಕೆರೆಯಲ್ಲಿರುವ ವಿದ್ಯುತ್ ಕಂಬ ತೆರವಿಗೆ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಚಿತ್ರದುರ್ಗ ತಾಲೂಕಿನ ಮಠದಕುರುಬರಹಟ್ಟಿ ಬಳಿಯ ಮುರುಘಾಮಠದ ಮುಂಭಾಗದಲ್ಲಿರುವ ಐತಿಹಾಸಿಕ ಕೆರೆಗೆ ಅರಸನ ಕೆರೆ ಎಂದೇ ಕರೆಯಲಾಗುತ್ತದೆ. ಕೆಲ ವರ್ಷಗಳ ಹಿಂದೆ ಬರಿದಾಗಿದ್ದ ಸಂದರ್ಭದಲ್ಲಿ ಬೆಸ್ಕಾಂ ಇಲಾಖೆ ಕೆರೆ ಅಂಗಳದಲ್ಲೇ ವಿದ್ಯುತ್ ಕಂಬಗಳನ್ನು ನೆಟ್ಟು ವಿದ್ಯುತ್ ಸಂಪರ್ಕ ಕಲ್ಪಿಸಿತ್ತು. ಆದರೆ, ಇತ್ತೀಚೆಗೆ ಕೆರೆ ಭರ್ತಿ ಆಗಿದ್ದು ನೀರಿನಲ್ಲಿ ಮುಳುಗಿರುವ ವಿದ್ಯುತ್ ಕಂಬಗಳು ನೆಲಕ್ಕೆ ಬಾಗಿವೆ. ಅಲ್ಲದೆ ವಿದ್ಯುತ್ ತಂತಿಗಳು ನೀರಿಗೆ ತಾಗುವಂತಿವೆ. ಹೀಗಾಗಿ, ಕೆರೆಗೆ ಬರುವ ಮೀನುಗಾರರು, ಜನ-ಜಾನುವಾರು ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದ್ದು ಜನರಲ್ಲಿ ಭೀತಿ ಸೃಷ್ಟಿ ಆಗಿತ್ತು. ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರೂ ನಿರ್ಲಕ್ಷ ತೋರಿದ್ದಾರೆಂದು ಸ್ಥಳೀಯರು ಆರೋಪ ಮಾಡಿದ್ದರು. ಸದ್ಯ ಈ ಸಂಬಂಧ ಟಿವಿ9 ವರದಿ ಬಿತ್ತರಿಸಿದ್ದು ವಾರದೊಳಗೆ ಕೆರೆಯಲ್ಲಿನ ವಿದ್ಯುತ್ ಕಂಬ ತೆರವಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

Tv9 Impact BESCOM Department EE has written a letter to remove the electric poles in the lake near Matadakurubarahatti chitradurga

ಮಠದಕುರುಬರಹಟ್ಟಿ ಬಳಿಯ ಕೆರೆಯಲ್ಲಿರುವ ವಿದ್ಯುತ್ ಕಂಬ

ಟಿವಿ9ನಲ್ಲಿ ವರದಿ ಪ್ರಸಾರವಾದ ಕೆಲ ಹೊತ್ತಿನಲ್ಲೇ ಬೆಸ್ಕಾಂ ಇಲಾಖೆ EE ಜಯಣ್ಣ ಅವರು ಕೇಂದ್ರ ಕಚೇರಿಗೆ ಪತ್ರ ಬರೆದು ವಾರದೊಳಗೆ ಕೆರೆಯಲ್ಲಿರುವ ವಿದ್ಯುತ್ ಕಂಬ ತೆರವಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?