AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಪೊಲೀಸ್ ಬಂದೋಬಸ್ತ್​ನಲ್ಲಿ ವೀರಾಂಜನೇಯ ದೇಗುಲ ತೆರವುಗೊಳಿಸಿದ ಪುರಸಭೆ ಅಧಿಕಾರಿಗಳು

ಮಾರ್ಚ್ 19ರಂದು ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದೆ. ಬಸ್ ಸಂಚಾರಕ್ಕೆ ಅಡಚಣೆಯಾಗುವ ದೇಗುಲ ತೆರವುಗೊಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಚಿತ್ರದುರ್ಗ: ಪೊಲೀಸ್ ಬಂದೋಬಸ್ತ್​ನಲ್ಲಿ ವೀರಾಂಜನೇಯ ದೇಗುಲ ತೆರವುಗೊಳಿಸಿದ ಪುರಸಭೆ ಅಧಿಕಾರಿಗಳು
ವೀರಾಂಜನೇಯ ದೇಗುಲವನ್ನು ತೆರವುಗೊಳಿಸಿದರು.
TV9 Web
| Edited By: |

Updated on:Mar 28, 2022 | 10:41 AM

Share

ಚಿತ್ರದುರ್ಗ: ಹೊಳಲ್ಕೆರೆ ಪಟ್ಟಣದ ಕೆಎಸ್ಆರ್​ಟಿಸಿ (KSRTC) ಬಸ್ ನಿಲ್ದಾಣದಲ್ಲಿದ್ದ ವೀರಾಂಜನೇಯ ದೇಗುಲವನ್ನು ಪುರಸಭೆ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್​ನಲ್ಲಿ ಬಸ್ ನಿಲ್ದಾಣದ ಮೂಲೆಯಲ್ಲಿ ನಿರ್ಮಿಸಿದ ಹೊಸ ದೇಗುಲ (Temple) ಕಟ್ಟಡಕ್ಕೆ ಆಂಜನೇಯ ಮೂರ್ತಿ ಸ್ಥಳಾಂತರಿಸಲಾಗಿದೆ. ಬಳಿಕ ಹಳೇ ದೇಗುಲ ತೆರವು ಕಾರ್ಯ ನಡೆದಿದೆ. ಕಳೆದ ಎರಡು ವರ್ಷಗಳ ಹಿಂದೆಯೇ 8 ಕೋಟಿ 84 ಲಕ್ಷ ರೂ. ವೆಚ್ಚದಲ್ಲಿ ನೂತನ ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗಿತ್ತು. ಆದರೆ ವೀರಾಂಜನೇಯ ದೇಗುಲ ಸಮಿತಿ ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿತ್ತು. ಪರಿಣಾಮ ನೂತನ ಬಸ್ ನಿಲ್ದಾಣದಲ್ಲಿ ಬಸ್​ಗಳ ಸಂಚಾರಕ್ಕೆ ಅಡಚಣೆಯಾಗುವ ಹಿನ್ನೆಲೆಯಲ್ಲಿ ಬಸ್ ನಿಲ್ದಾಣ ಉದ್ಘಾಟನೆ ನೆನೆಗುದಿಗೆ ಬಿದ್ದಿತ್ತು.

ತಡೆಯಾಜ್ಞೆ ತೆರವು: ಮಾರ್ಚ್ 19ರಂದು ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಿದೆ. ಬಸ್ ಸಂಚಾರಕ್ಕೆ ಅಡಚಣೆಯಾಗುವ ದೇಗುಲ ತೆರವುಗೊಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳು ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪೊಲೀಸರ ಬಿಗಿ ಬಂದೋಬಸ್ತ್ನೊಂದಿಗೆ ಹೊಸ ದೇಗುಲಕ್ಕೆ ಮೂರ್ತಿ ಸ್ಥಳಾಂತರಿಸಿ ಹಳೇ ದೇಗುಲ ತೆರವು ಕಾರ್ಯಾಚರಣೆ ನಡೆದಿದೆ.

ವಿರೋಧ: ವಿಶ್ವ ಹಿಂದೂ ಪರಿಷತ್ ಸೇರಿದಂತೆ ಕೆಲ ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾಗೂ ಭಕ್ತರು ಹಳೇ ದೇಗುಲ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗೆ ಮುಂದಾದ ಎಂಟು ಜನ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ದೇಗುಲ ತೆರವು ಕಾರ್ಯಾಚರಣೆ ನಡೆದಿದೆ.

ಬಿಜೆಪಿ ಸರ್ಕಾರವೇ ಹಳೇ ದೇಗುಲ ತೆರವು ಮಾಡಬಾರದು ಎಂಬ ನಿಯಮ ಜಾರಿಗೆ ತಂದಿದೆ. ಆದರೆ, ಬಿಜೆಪಿ ಶಾಸಕ ಹಾಗೂ ಸಾರಿಗೆ ನಿಗಮದ ಅದ್ಯಕ್ಷರು ಪ್ರತಿನಿಧಿಸುವ ಹೊಳಲ್ಕೆರೆಯಲ್ಲೇ ಹಳೇ ದೇಗುಲ ತೆರವು ಕಾರ್ಯ ನಡೆದಿದೆ. ವೀರಾಂಜನೇಯ ದೇಗುಲವೂ ಪುರಾತನ ಕಾಲದ್ದಾಗಿದೆ. ಈ ಬಗ್ಗೆ ಹೋರಾಟ ಮುಂದುವರೆಸುತ್ತೇವೆ ಎಂದು ಮಾಜಿ ಪುರಸಭೆ ಸದಸ್ಯ ಜಯಸಿಂಹ ಹೇಳಿದ್ದಾರೆ.

ಅನಧಿಕೃತವಾಗಿ ದೇಗುಲ ನಿರ್ಮಿಸಲಾಗಿದೆ ಎಂದು ಅನೇಕ ಸಲ ದೇಗುಲ ಸಮಿತಿಗೆ ನೋಟಿಸ್ ನೀಡಿದ್ದೆವು. ಸಾರಿಗೆ ಇಲಾಖೆ ಹಾಗೂ ದೇಗುಲ ಸಮಿತಿ ನಡುವೆ ಕೋರ್ಟಿನಲ್ಲಿ ವ್ಯಾಜ್ಯವಿತ್ತು. ತಡೆಯಾಜ್ಞೆ ತೆರವಾದ ಹಿನ್ನೆಲೆ ಹೊಸ ದೇಗುಲಕ್ಕೆ ಶಾಸ್ತ್ರೋಕ್ತವಾಗಿ ಮೂರ್ತಿ ಸ್ಥಳಾಂತರಿಸಿ ಹಳೆ ದೇಗುಲ ತೆರವುಗೊಳಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎ.ವಾಸಿಂ ಹೇಳಿದ್ದಾರೆ.

ವರದಿ – ಬಸವರಾಜ ಮುದನೂರ್

ಇದನ್ನೂ ಓದಿ

ಭವಿಷ್ಯದ ದೃಷ್ಟಿಯಿಂದ ಮಕ್ಕಳನ್ನು ಪರೀಕ್ಷೆಗೆ ಕಳುಹಿಸಿ; ಮುಸ್ಲಿಂ ಧರ್ಮಗುರುಗಳಿಂದ ಶಿಕ್ಷಣದ ಬಗ್ಗೆ ಬುದ್ಧಿಮಾತು

ಬೆಲೆ ಕುಸಿತದಿಂದ ಕಂಗೆಟ್ಟಿದ್ದ ರೈತರಿಗೆ ಗುಡ್ ನ್ಯೂಸ್; ಒಂದು ಮೂಟೆ ಉತ್ತಮ ಗುಣಮಟ್ಟದ ನಿಂಬೆ 10 ಸಾವಿರ ರೂಪಾಯಿಗೆ ಮಾರಾಟ

Published On - 10:39 am, Mon, 28 March 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್