AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಗಮನ ಸೆಳೆದ ವಯನಾಡು ಡಿಸಿ ಕನ್ನಡತಿ ಮೇಘಶ್ರೀ; ಸೊಸೆ ಬಗ್ಗೆ ಮಾವನ ಮೆಚ್ಚುಗೆ ಮಾತುಗಳು

Wayanad landslide: ವಯನಾಡು ಡಿಸಿ ಆಗಿ ಅಧಿಕಾರ ಪಡೆದ ಕೇವಲ 20 ದಿನಗಳಲ್ಲೇ ಕನ್ನಡತಿ ಮೇಘಶ್ರೀ ಅವರು ದಿಟ್ಟತನದಿಂದ ಹಗಲು ರಾತ್ರಿ ಎನ್ನದೆ ವಯನಾಡು ದುರಂತದ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ಇವರ ಈ ಕಾರ್ಯವೈಕರಿಗೆ ಮೆಚ್ಚುಗೆ ವ್ಯಕ್ತವಾಗಿದ್ದು ಅವರ ಮಾವ ಸೊಸೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ್ದಾರೆ.

ಜನರ ಗಮನ ಸೆಳೆದ ವಯನಾಡು ಡಿಸಿ ಕನ್ನಡತಿ ಮೇಘಶ್ರೀ; ಸೊಸೆ ಬಗ್ಗೆ ಮಾವನ ಮೆಚ್ಚುಗೆ ಮಾತುಗಳು
ಜನರ ಗಮನ ಸೆಳೆದ ವಯನಾಡು ಡಿಸಿ, ಕನ್ನಡತಿ ಮೇಘಶ್ರೀ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: ಆಯೇಷಾ ಬಾನು|

Updated on: Aug 05, 2024 | 9:38 AM

Share

ಚಿತ್ರದುರ್ಗ, ಆಗಸ್ಟ್.05: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ (Wayanad Landslide) ಮೃತಪಟ್ಟವರ ಸಂಖ್ಯೆ 350ಕ್ಕೂ ಅಧಿಕವಿದೆ. ಇನ್ನು 66 ಮೃತದೇಹಗಳ ಗುರುತೇ ಸಿಕ್ಕಿಲ್ಲ. ಇಂತಹ ಶವಗಳ ಡಿಎನ್‌ಎ ಸ್ಯಾಂಪಲ್‌ ಪಡೆದಿರೋ ಕೇರಳ ಸರ್ಕಾರ, ಪುತ್ತುಮಲಾ ಅನ್ನೋ ಏರಿಯಾದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ನಡೆಸಿದೆ. ಈ ದುರಂತದ ಬಳಿಕ ವಯನಾಡು ಜಿಲ್ಲಾಡಳಿತ (Wayanad DC) ಜನರಿಗಾಗಿ ನಿಂತಿದೆ. ಹಗಲಿರುಳು ಕೆಲಸ ಮಾಡುತ್ತಿದೆ. ಈ ನಡುವೆ ಜಿಲ್ಲಾಧಿಕಾರಿ, ಕನ್ನಡತಿ ತಮ್ಮ ಉತ್ತಮ ಕೆಲಸದ ಮೂಲಕ ಜನರ ಗಮನ ಸೆಳೆದಿದ್ದಾರೆ.

ವಯನಾಡ್ ಡಿಸಿ ಆಗಿರುವ ಮೇಘಶ್ರೀ ಅವರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೊಡ್ಡೇರಿ ಗ್ರಾಮದವರು. ಸದ್ಯ ಈಗ ಕೋಟೆನಾಡಿನ ಸುಪುತ್ರಿ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜಿಲ್ಲಾಧಿಕಾರಿ ಡಿ. ಆರ್. ಮೇಘಶ್ರೀ ಅವರು ದುರಂತ ನಡೆದ ಬಳಿಕ ಮುಂಜಾನೆ 3 ಗಂಟೆಯಿಂದ ಕೆಲಸ ಮಾಡುತ್ತಿದ್ದಾರೆ. ಜುಲೈ 10ರಂದು ಮೇಘಶ್ರೀ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿ ಆಗಮಿಸಿದ ಕೆಲವೇ ದಿನಗಳಲ್ಲಿ ಅವರು ಅತಿ ದೊಡ್ಡ ಸವಾಲು ಎದುರಿಸಿದ್ದಾರೆ. ಮೇಘಶ್ರೀ ಅವರ ಕಾರ್ಯ ವೈಕರಿಗೆ ಜನ ಫಿದಾ ಆಗಿದ್ದಾರೆ.

ಇದನ್ನೂ ಓದಿ: ಕೇರಳ: ಭೂಕುಸಿತದಲ್ಲಿ ಸಿಲುಕಿರುವ ಪ್ರಾಣಿಗಳ ರಕ್ಷಣೆ, ಸುರಕ್ಷತೆಗೆ ಕಂಟ್ರೋಲ್ ರೂಂ ತೆರೆದ ಸರ್ಕಾರ

ಇನ್ನು ಮೇಘಶ್ರೀ ಅವರ ಬಗ್ಗೆ ಕುಟುಂಬಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೇಘಶ್ರೀ ಅವರಿಗೆ ಬಾಲ್ಯದಿಂದಲೇ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹರ್ತಿಕೋಟೆ ಗ್ರಾಮದ ಡಾ. ವಿಕ್ರಂ ಸಿಂಹ ಜೊತೆ ಪ್ರೇಮ ಅಂಕುರಿಸಿತ್ತು. ಜಾತಿ ಬೇಧ ಮರೆತು ಎರಡೂ ಕುಟುಂಬ ಒಂದಾಗಿ ಮದುವೆ ಮಾಡಿದ್ದರು. ಮೇಘಶ್ರೀ ಅವರು ವಯನಾಡ್ ಡಿಸಿ ಆದ್ರೆ, ಡಾ.ವಿಕ್ರಂ ಸಿಂಹ ಅಗ್ರಿಕಲ್ಚರ್ ವಿವಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದಾರೆ ಎಂದು ಹರ್ತಿಕೋಟೆಯಲ್ಲಿ ವಯನಾಡ್ ಡಿಸಿ ಮಾವ ವಿರೇಂದ್ರ ಸಿಂಹ ಮಾಹಿತಿ ನೀಡಿದರು. ಇನ್ನು ಮೇಘಶ್ರೀ ಮಾವ ವಿರೇಂದ್ರ ಸಿಂಹ ಅವರು ನಿವೃತ್ರ ಜೈಲರ್ ಆಗಿದ್ದಾರೆ.

20 ದಿನಗಳ ಹಿಂದಷ್ಟೇ ಮೇಘಶ್ರೀ ವಯನಾಡ್ ಡಿಸಿಯಾಗಿ ಚಾರ್ಜ್ ತೆಗೆದುಕೊಂಡರು. ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ದೊಡ್ಡ ಸವಾಲು ಕಣ್ಮುಂದೆ ಇದೆ. ಹತ್ತಾರು ಹಳ್ಳಿಗಳು ಸರ್ವನಾಶ ಆಗಿವೆ. ಈ ವೇಳೆ ಮೇಘಶ್ರೀ ದಿಟ್ಟತನದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಪಾಳೇಗಾರರ ಹಿನ್ನೆಲೆಯ ಮನೆತನ ನಮ್ಮದು. ನಮ್ಮ ಮನೆ ಸೊಸೆ ಮೇಘಶ್ರೀ ಧೈರ್ಯದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಪುಟ್ಟ ಮಕ್ಕಳೊಂದಿಗೆ ನನ್ನ ಪುತ್ರ ಮನೆಯಲ್ಲಿದ್ದು ಪತ್ನಿಗೆ ಧೈರ್ಯ ತುಂಬಿದ್ದಾರೆ. ಸಾವು, ನೋವು ಸಂಭವಿಸಿದ ಸ್ಥಳಕ್ಕೆ ಮೇಘಶ್ರೀ ಭೇಟಿ ನೀಡಿದ್ದಾರೆ. ನಮ್ಮಂಥವರಿಗೆ ಆ ದೃಶ್ಯಗಳನ್ನು ನೋಡಿದರೆ ಆತಂಕ ಆಗುತ್ತದೆ. ಮೇಘಶ್ರೀ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ನಾವು ಆಗಾಗ ಫೋನ್ ಕರೆ ಮಾಡಿ ಮಾತಾಡಿದ್ದೇವೆ. ನಮಗೂ ಸಹ ಮೊದಲಿಗೆ ತುಂಬಾ ಆತಂಕ ಆಗಿತ್ತು. ಸದ್ಯ ಯಾವುದೇ ಅಪಾಯ ಇಲ್ಲ ಎಂದು ತಿಳಿದು ಸಮಾಧಾನ ಆಗಿದೆ. ನಮ್ಮ ಸೊಸೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಪರಿ ಹೆಮ್ಮೆ ತಂದಿದೆ. ಕನ್ನಡತಿ ಮೇಘಶ್ರೀ ಎಂಬ ಮಾತು ಕೇಳಿ ಖುಷಿ ಆಗುತ್ತಿದೆ ಎಂದು ಸೊಸೆ ಬಗ್ಗೆ ಮಾವ ಸಂತೋಷದ ಮಾತುಗಳನ್ನಾಡಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಸವರಾಜ ಮುದನೂರ್, ಚಿತ್ರದುರ್ಗ
ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್