AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಚಿನ್ನ ಖರೀದಿಸುವ ಸೋಗಿನಲ್ಲಿ ಬಾಲಕನ ಜೊತೆ ಬಂದು ಕಳ್ಳಿಯ ಕೈಚಳಕ, ವಿಡಿಯೋ ವೈರಲ್

ಹೊಳಲ್ಕೆರೆಯ ಸುಮಿತ್ರಾ ಎಂಬುವವರು ಹಳೆ ಒಡವೆ ನೀಡಿ ಹೊಸ ಚಿನ್ನ ಖರೀದಿಗೆ ಬಂದಿದ್ದರು. ಹಳೆ ಒಡವೆಯಿದ್ದ ಬ್ಯಾಗನ್ನು ಚಿನ್ನದ ಅಂಗಡಿ ಟೇಬಲ್ ಮೇಲಿಟ್ಟಿದ್ದರು. ಸುಮಿತ್ರಾ ಹೊಸ ಒಡವೆ ನೋಡುವ ವೇಳೆ ಕಳ್ಳಿ ಕೈಚಳಕ ತೋರಿಸಿದ್ದಾಳೆ. ಬಾಲಕನ ಜೊತೆಗೆ ಚಿನ್ನದ ಅಂಗಡಿಗೆ ಬಂದಿದ್ದ ಕಳ್ಳಿ ಮರೆ ಮಾಡಿ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾಳೆ.

ಚಿತ್ರದುರ್ಗ: ಚಿನ್ನ ಖರೀದಿಸುವ ಸೋಗಿನಲ್ಲಿ ಬಾಲಕನ ಜೊತೆ ಬಂದು ಕಳ್ಳಿಯ ಕೈಚಳಕ, ವಿಡಿಯೋ ವೈರಲ್
ಬಾಲಕನ ಸಹಾಯದಿಂದ ಕಳ್ಳತನ
TV9 Web
| Edited By: ಆಯೇಷಾ ಬಾನು|

Updated on: Nov 08, 2023 | 10:43 AM

Share

ಚಿತ್ರದುರ್ಗ, ನ.08: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಚಿನ್ನ (Gold) ಖರೀದಿ ಮಾಡುವ ಸೋಗಿನಲ್ಲಿ ಬಂದು ಕಳ್ಳತನ ಮಾಡಲಾಗಿರುವ ಘಟನೆ ನಡೆದಿದೆ. ಸಂದ್ಯಾದೀಪ ಜುವೆಲರಿಯಲ್ಲಿ ನಡೆದ ಕಳ್ಳತನ (Theft) ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳಿಯೊಬ್ಬಳು ಓರ್ವ ಬಾಲಕನ ಜೊತೆ ಚಿನ್ನದಂಗಡಿಗೆ ಬಂದು ಚಿನ್ನ ಖರೀದಿಸುವ ಹಾಗೆ ಫೋಸ್ ಕೊಟ್ಟು ಗ್ರಾಹಕರ ಚಿನ್ನದ ಬ್ಯಾಗ್ ಕದ್ದು ಪರಾರಿಯಾಗಿದ್ದಾಳೆ. ಸುಮಾರು ₹1ಲಕ್ಷ‌ 25 ಮೌಲ್ಯದ ಹಳೆ ಒಡವೆ ಕದ್ದು ಎಸ್ಕೇಪ್ ಆಗಿದ್ದಾಳೆ.

ಹೊಳಲ್ಕೆರೆಯ ಸುಮಿತ್ರಾ ಎಂಬುವವರು ಹಳೆ ಒಡವೆ ನೀಡಿ ಹೊಸ ಚಿನ್ನ ಖರೀದಿಗೆ ಬಂದಿದ್ದರು. ಹಳೆ ಒಡವೆಯಿದ್ದ ಬ್ಯಾಗನ್ನು ಚಿನ್ನದ ಅಂಗಡಿ ಟೇಬಲ್ ಮೇಲಿಟ್ಟಿದ್ದರು. ಸುಮಿತ್ರಾ ಹೊಸ ಒಡವೆ ನೋಡುವ ವೇಳೆ ಕಳ್ಳಿ ಕೈಚಳಕ ತೋರಿಸಿದ್ದಾಳೆ. ಬಾಲಕನ ಜೊತೆಗೆ ಚಿನ್ನದ ಅಂಗಡಿಗೆ ಬಂದಿದ್ದ ಕಳ್ಳಿ ಮರೆ ಮಾಡಿ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾಳೆ. ಬಾಲಕನ ಮೂಲಕ ಹಳೇ ಒಡವೆಯಿದ್ದ ಬ್ಯಾಗ್ ಕದ್ದಿದ್ದಾಳೆ. ಒಡವೆ ಬ್ಯಾಗ್ ಕಳ್ಳತನ ಪ್ರಕರಣದ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ನಡೆದಿದೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ತಯಾರಿಸಿ ಖಾಸಗಿ ಚಾನೆಲ್​ ವರದಿಗಾರನಿಂದ ಬಿಜೆಪಿ ಕಾರ್ಯಕರ್ತೆಗೆ ಬ್ಲ್ಯಾಕ್ ‌ಮೇಲ್

ಮಾಗಡಿ ಪಟ್ಟಣದಲ್ಲಿ 4 ಕಡೆ ಸರಣಿ ಕಳ್ಳತನ

ಮಾಗಡಿ ಪಟ್ಟಣದಲ್ಲಿ 4 ಕಡೆ ಸರಣಿ ಕಳ್ಳತನವಾಗಿದೆ. ಪಟ್ಟಣದ ಟಿಬಿ ರಸ್ತೆಯ ಜೈ ಜವಾನ್ ಜೈ ಕಿಸಾನ್ ಮೆಗಾ ಮಾರ್ಟ್, ಬಾಲಾಜಿ ಮುಂಭಾಗದ ಕೇಬಲ್ ಕಚೇರಿ, ಧ್ಬನಿ ವರ್ಧಕ ಅಂಗಡಿ, ಬೇಕರಿಗಳ ಬೀಗ ಹೊಡೆದು ಕಳ್ಳತನ ಮಾಡಲಾಗಿದೆ. ಮಾರ್ಟ್ ನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಗದು, ಬೇಕರಿಯಲ್ಲಿ 50 ಸಾವಿರ ನಗದು ಸೇರಿದಂತೆ ಸಿಗರೇಟ್​ಗಳನ್ನು ದೊಚಿ ಖದೀಮರು ಪರಾರಿಯಾಗಿದ್ದಾರೆ. ಎರಡು ತಂಡಗಳಲ್ಲಿ ಬಂದಿದ್ದ ಕಳ್ಳರು ಮಧ್ಯರಾತ್ರಿ ಶಟರ್ ಒಡೆದು ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?