AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಂತ ಸುಶಿಕ್ಷಿತ, ಸ್ಥಿತಿವಂತ ಕುಟುಂಬದ ಯುವತಿಗೆ ಆ ಖದೀಮ ಬರೋಬ್ಬರಿ 2.5 ಕೋಟಿ ಪಂಗನಾಮ ಹಾಕಿದ! ಜೊತೆಗೆ…ಉಂಡೂ ಹೋದ ಕೊಂಡೂ ಹೋದವನ ಕತೆಯಿದು!

ಒಟ್ಟಾರೆಯಾಗಿ ವಿದೇಶದಲ್ಲಿ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಭಾರೀ ಭಾರೀ ವಂಚನೆ ಮಾಡಿದ ಪ್ರಕರಣ ಚಿತ್ರದುರ್ಗದಂತಹ ಭದ್ರಕೋಟೆ ನಾಡಿನಲ್ಲಿ ನಡೆದಿದೆ. ಚಿತ್ರದುರ್ಗದ ಪೊಲೀಸರು ಸದ್ಯ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿ ವಂಚನೆ ಪ್ರಕರಣದ ಅಸಲಿಯತ್ತೇನೆಂಬುದನ್ನು ಬಯಲುಗೊಳಿಸಬೇಕಿದೆ.

ಅತ್ಯಂತ ಸುಶಿಕ್ಷಿತ, ಸ್ಥಿತಿವಂತ ಕುಟುಂಬದ ಯುವತಿಗೆ ಆ ಖದೀಮ ಬರೋಬ್ಬರಿ 2.5 ಕೋಟಿ ಪಂಗನಾಮ ಹಾಕಿದ! ಜೊತೆಗೆ...ಉಂಡೂ ಹೋದ ಕೊಂಡೂ ಹೋದವನ ಕತೆಯಿದು!
ಅತ್ಯಂತ ಸುಶಿಕ್ಷಿತ ಕುಟುಂಬದ ಯುವತಿಗೆ ಕೋಟ್ಯಂತರ ಪಂಗನಾಮ ಹಾಕಿದ! ಉಂಡೂ ಹೋದ ಕೊಂಡೂ ಹೋದ ಕತೆಯಿದು!
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Nov 03, 2023 | 3:06 PM

Share

ಇಂಜಿನಿಯರ್ ಪದವೀಧರೆ ಆಗಿದ್ದವಳಿಗೆ ವಿದೇಶದಲ್ಲಿ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರುವ ಕನಸಿತ್ತು. ಅವಳ ಕನಸನ್ನೇ ಬಂಡವಾಳ ಮಾಡಿಕೊಂಡ ವಂಚಕನೋರ್ವ ನಂಬಿಸಿ ಕೋಟ್ಯಾಂತರ ಹಣ ಪೀಕಿದ್ದಾನೆ. ಅಲ್ಲದೆ ಸಲುಗೆಯನ್ನು ದುರ್ಬಳಕೆ ಮಾಡಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಉಂಡೂ ಹೋದ ಕೊಂಡೂ ಹೋದವನ ಸ್ಟೋರಿ ಇಲ್ಲಿದೆ ನೋಡಿ. ನಂಬಿ ಮೋಸ ಹೋದ ಯುವತಿ ಮತ್ತು ಕುಟುಂಬಸ್ಥರು ಕಂಗಾಲು. ಎರಡೂವರೆ ಕೋಟಿ ಹಣ ಪಡೆದು ಭಾರೀ ವಂಚನೆ. ಸಲುಗೆಯಿಂದ ಕರೆಸಿಕೊಂಡು ಯುವತಿ ಮೇಲೆ ಅತ್ಯಾಚಾರ ಆರೋಪ. ಹೌದು, ಚಿತ್ರದುರ್ಗ ನಗರ ಮೂಲದ ಯುವತಿ (ಪಲ್ಲವಿ) ಬಿಇ ಓದಿಕೊಂಡಿದ್ದು 2019ರಲ್ಲಿ ಬೆಂಗಳೂರಲ್ಲಿ ಕಂಪ್ಯೂಟರ್​​ ಸೈನ್ಸ್​​ (ಸಿಎಸ್) ಗೆ ಸಂಬಂಧಿಸಿದ ಕೋರ್ಸ್ ಮಾಡುತ್ತಿದ್ದರು. ಆಗ ಚಿತ್ರದುರ್ಗ ಮೂಲದ ಸೌರಭ್ ಪರಿಚಯ ಆಗಿದ್ದಾನೆ.

ಈ ಸೌರಭ ಅಮೆರಿಕಾದಲ್ಲಿ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದಾನೆ. ಯುವತಿಯ ತಂದೆ (ಗೋವಿಂದಪ್ಪ) ನಿವೃತ್ತ ಬ್ಯಾಂಕ್ ಉದ್ಯೋಗಿ ಆಗಿದ್ದು ಪುತ್ರಿ (ಪಲ್ಲವಿ), ಪುತ್ರ (ಕಿಶೋರ್) ಇಬ್ಬರೂ ಇಂಜಿನಿಯರ್ ಆಗಿದ್ದು ವಿದೇಶದಲ್ಲಿ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಉದ್ಯೋಗ ಕೊಡಿಸುವಂತೆ ಕೇಳಿಕೊಂಡಿದ್ದಾರೆ. ಇಡೀ ಫ್ಯಾಮಿಲಿಗೆ ನಂಬಿಸಿದ ಆರೋಪಿ ಸೌರಭನಿಗೆ ಅವರ ಪೋಷಕರು ಕೇಳ್​​… ಕೇಳಿದಷ್ಟು ಹಣ ನೀಡುತ್ತಾ ಬಂದಿದ್ದಾರೆ. 2 ಕೋಟಿ 55 ಲಕ್ಷ 30 ಸಾವಿರದ 531 ರೂಪಾಯಿ ಹಣ ನೀಡಿದ್ದಾರೆ!

ಚಾಲಾಕಿ ಸೌರಭ್ ಕೆಲ ಕಂಪನಿಗಳ ಹೆಸರಲ್ಲಿ ನಕಲಿ ಅಪಾಯಿಂಟ್​​​ಮೆಂಟ್​ ಕಾಪಿಗಳನ್ನು ಸಿದ್ದಪಡಿಸಿ ಕೊಟ್ಟಿದ್ದಾನೆ. ಪಾಸ್ ಪೋರ್ಟ್ ಸಿದ್ಧವಾಗಿದೆ ಎಂದೆಲ್ಲಾ ನಂಬಿಸಿದ್ದಾನೆ. ಇನ್ನೇನು ಅಮೆರಿಕಾಕ್ಕೆ ಹೋಗುವುದಕ್ಕೆ ಮುಹೂರ್ತ ಫಿಕ್ಸ್ ಆಗಿದೆ ಎಂದು ನಂಬಿಸಿ ಯುವತಿಯನ್ನು ಕರೆಸಿಕೊಂಡಿದ್ದಾನೆ. ಬೆಂಗಳೂರಿನ ಖಾಸಗಿ ಲಾಡ್ಜ್ ಮತ್ತು ಚಿತ್ರದುರ್ಗದ ಚಂದ್ರವಳ್ಳಿ ಬಳಿ ಕರೆಸಿಕೊಂಡು ಬಲಾತ್ಕಾರ ನಡೆಸಿದ್ದಾನೆಂದು ಯುವತಿ ಮತ್ತು ಪೋಷಕರು ಆರೋಪಿಸಿ ದೂರು ದಾಖಲಿಸಿದ್ದಾರೆ.

ಇನ್ನು ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ ಸೌರಭ್ ಎರಡೂವರೆ ಕೋಟಿ ರೂಪಾಯಿ ಹಣ ಪಡೆದು ವಂಚಿಸಿರುವುದಾಗಿ ಸಂತ್ರಸ್ತ ಯುವತಿಯ ತಂದೆ (ಗೋವಿಂದಪ್ಪ) ಸಿಇಎನ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸೌರಭ್ ಜೊತೆಗೆ ಬಸವರಾಜ್ ಮತ್ತು ಮಲ್ಲಿ ಎಂಬುವವರೂ ವಂಚಿಸಿದ್ದಾರಂತೆ. ಅಂತೆಯೇ ಸಂತ್ರಸ್ತ ಯುವತಿ ಮಹಿಳಾ ಠಾಣೆಗೆ ದೂರು ನೀಡಿದ್ದು ಸೌರಭ್ ಕೆಲಸ ಕೊಡಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡಿದ್ದಲ್ಲದೆ ಸಲುಗೆಯಿಂದ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸೌರಭ್ ನನ್ನು ಬಂಧಿಸಿದ್ದಾರೆ.

ಒಟ್ಟಾರೆಯಾಗಿ ವಿದೇಶದಲ್ಲಿ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಭಾರೀ ಭಾರೀ ವಂಚನೆ ಮಾಡಿದ ಪ್ರಕರಣ ಚಿತ್ರದುರ್ಗದಂತಹ ಭದ್ರಕೋಟೆ ನಾಡಿನಲ್ಲಿ ನಡೆದಿದೆ. ಚಿತ್ರದುರ್ಗದ ಪೊಲೀಸರು ಸದ್ಯ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿ ವಂಚನೆ ಪ್ರಕರಣದ ಅಸಲಿಯತ್ತೇನೆಂಬುದನ್ನು ಬಯಲುಗೊಳಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Fri, 3 November 23

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​