AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಕಳೆದುಕೊಂಡ ಯುವಕ, ಹತ್ತು ದಿನ ಅದನ್ನು ಬಿಟ್ಟಿರಲಾರದೆ ನರಳಿ, ಕೋಟೆನಾಡಿನಲ್ಲಿ ಆತ್ಮಹತ್ಯೆಗೆ ಶರಣಾದ

ಮೊಬೈಲ್ ಗೀಳಿಗೆ ಬಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳು ಗ್ರಾಮದ ಯುವಕ ಯಶವಂತ್ ಕೇಳಿದಾಕ್ಷಣ ಅಜ್ಜ-ಅಜ್ಜಿ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಜೀವವನ್ನೇ ಕಳೆದುಕೊಂಡ ದಾರುಣ ಘಟನೆ ಕೊಳಾಳು ಗ್ರಾಮದಲ್ಲಿ ನಡೆದಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್ನಾದ್ರೂ ಮಕ್ಕಳು ಮತ್ತು ಯುವಕರು ಮೊಬೈಲ್ ಗೀಳಿಗೆ ಬೀಳದಂತೆ ಪೋಷಕರು ಎಚ್ಚರ ವಹಿಸಬೇಕಿದೆ.

ಮೊಬೈಲ್ ಕಳೆದುಕೊಂಡ ಯುವಕ, ಹತ್ತು ದಿನ ಅದನ್ನು ಬಿಟ್ಟಿರಲಾರದೆ ನರಳಿ, ಕೋಟೆನಾಡಿನಲ್ಲಿ ಆತ್ಮಹತ್ಯೆಗೆ ಶರಣಾದ
ಮೊಬೈಲ್ ಕಳೆದುಕೊಂಡ ಯುವಕ ಅದ ಬಿಟ್ಟಿರಲಾರದೆ ಕೋಟೆನಾಡಿನಲ್ಲಿ ಆತ್ಮಹತ್ಯೆಗೆ ಶರಣು
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಸಾಧು ಶ್ರೀನಾಥ್​

Updated on: Oct 20, 2023 | 7:10 PM

ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆಯಲ್ಲಿ ಮೊಬೈಲ್ ಗೀಳು ವಿಪರೀತವಾಗಿದೆ. ಮೊಬೈಲ್ ಇಲ್ಲದೆ ಬದುಕಲಾಗದು ಎಂಬ ಸ್ಥಿತಿ ನಿರ್ಮಾಣ ಆಗಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಮೊಬೈಲ್ ಕಳೆದುಕೊಂಡ ಯುವಕನೋರ್ವ (youth) 10 ದಿನ ಮೊಬೈಲ್ ಬಿಟ್ಟು (mobile) ಇರಲಾಗದೆ ಆತ್ಮಹತ್ಯೆಗೆ ಶರಣಾದ ಘಟನೆ ಕೋಟೆನಾಡಿನಲ್ಲಿ ನಡೆದಿದೆ. ಈ ಕುರಿತು ವರದಿ ಇಲ್ಲಿದೆ. ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಯುವಕ. ಆಳೆತ್ತರ ಬೆಳೆದಿದ್ದ ಮಗ ಮೊಬೈಲ್ ಗೀಳಿಗೆ ಬಲಿ ಆಗಿದ್ದು ಕಂಡು ಕಂಗಾಲಾದ ಪೋಷಕರು. ಮೊಬೈಲ್ ಗಾಗಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಗ್ರಾಮದ ಜನರಿಗೆ ಶಾಕ್. ಹೌದು. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳು ಗ್ರಾಮದ ಯುವಕ ಯಶವಂತ್(20) ಅಕ್ಟೋಬರ್ 8ರಂದು ಚಿತ್ರದುರ್ಗ (chitradurga) ನಗರದಲ್ಲಿ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಬಂದಿದ್ದನು. ಆಗ ತನ್ನ ಬಳಿಯಿರುವ ಸ್ಮಾರ್ಟ್ ಫೋನ್ ಕಳೆದುಕೊಂಡಿದ್ದನು. ಮನೆಗೆ ತೆರಳಿದ ಬಳಿಕ ಅಜ್ಜಿಯ ಬಳಿ (parents) ಹೊಸ ಮೊಬೈಲ್ ಕೊಡಿಸುವಂತೆ ಹಠ ಹಿಡಿದಿದ್ದನು.

ನಿಮ್ಮ ಅಜ್ಜ ನಿಮಗಾಗಿಯೇ ದುಡಿಯುತ್ತಿದ್ದಾರೆ. ಸಾಲ ತೀರಿಸುವುದೇ ದುಸ್ತರ ಆಗಿದೆ. ಈಸಲದ ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುತ್ತಾರೆ ಎಂದು ಹೇಳಿದ್ದರು. ಆದ್ರೆ, ಅಜ್ಜನ ಬಳಿ ಮೊಬೈಲ್ ಕೇಳಲು ಹೆದರಿದ ಯಶವಂತ್ ಗೆಳೆಯರ ಜತೆ ಸೇರಿ ಕೂಲಿ ಕೆಲಸಕ್ಕೆ ಹೊರಟಿದ್ದನು. ಅಕ್ಟೋಬರ್ 18ರಂದು ಸಂಜೆ ವೇಳೆ ಮನೆಗೆ ಬಂದಾಗಿ ವಿಷಯ ತಿಳಿದ ಅಜ್ಜ ಯಶವಂತ್ ಮತ್ತು ಸ್ನೇಹಿತರಿಗೆ ಬುದ್ಧಿವಾದ ಹೇಳಿದ್ದರು. ಮೊದಲೇ ಯಶವಂತನ ತಂದೆ ಸಿದ್ದೇಶ್ ತೀರಿ 17 ವರ್ಷಗಳಾಗಿವೆ. ತಾಯಿ ಕೋಮಲಾ ಹೋಟೆಲ್ ಕೆಲಸ ಮಾಡಿಕೊಂಡು ಬದುಕು ನಡೆಸುತ್ತಿದ್ದಾಳೆ.

ಕೂಲಿ ಕೆಲಸಕ್ಕೆಂದು ಯಶವಂತನಿಗೆ ದೂರದೂರಿಗೆ ಕೆಲಸಕ್ಕೆ ಹೋದಾಗ ಅವಘಡ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸಿದ್ದರು. ಹೀಗಾಗಿ, ಮೊಬೈಲ್ ಕೊಡಿಸಿಲ್ಲ, ಅಲ್ಲದೆ ಕೂಲಿ ಕೆಲಸಕ್ಕೆ ಹೋಗಲೂ ಬಿಡದೆ ಗೆಳೆಯರೆದುರು ಬೈದಿದ್ದಾರೆಂಬ ಕಾರಣಕ್ಕೆ ಯಶವಂತ ಮನೆಯೊಳಗೆ ಹೋದವನೆ ಕೀಟನಾಶಕ ಸೇವಿಸಿದ್ದಾನೆ. ವಿಷಯ ತಿಳಿದು ಕೂಡಲೇ ಐಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅಕ್ಟೋಬರ್ 19ರಂದು ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮದ್ಯೆ ಅಸುನೀಗಿದ್ದಾನೆ.

ಇದನ್ನೂ ಓದಿ: ಬೆಸಗರಹಳ್ಳಿ -ಮಗನ ಜೊತೆ ಸೇರಿ ವಿಕಲಚೇತನ ಗಂಡನ ಕಥೆ ಮುಗಿಸಿದ ಪತ್ನಿ, ಅಂಥಾ ಕಾರಣವೇನಿತ್ತು?

ಇನ್ನು ವಿಷಯ ತಿಳಿಯುತ್ತಿದ್ದಂತೆ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರಿಂದ ಪ್ರಕರಣದ ಕುರಿತು ಮಾಹಿತಿ ಪಡೆದಿದ್ದಾರೆ. ಮೊಬೈಲ್ ಗೀಳಿಗೆ ಬಿದ್ದಿದ್ದ ಯಶವಂತ್ ಅಕ್ಟೋಬರ್ 8ರಂದು ಮೊಬೈಲ್ ಕಳೆದುಕೊಂಡಿದ್ದನು. ಆದ್ರೆ, ಮೊಬೈಲ್ ಕಳೆದುಕೊಂಡ 10 ದಿನದಲ್ಲಿ ಅಜ್ಜ ಮೊಬೈಲ್ ಕೊಡಿಸದ ಕಾರಣಕ್ಕೆ ಯಶವಂತ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಒಟ್ಟಾರೆಯಾಗಿ ಮೊಬೈಲ್ ಗೀಳಿಗೆ ಬಿದ್ದ ಯುವಕ ಯಶವಂತ್ ಕೇಳಿದಾಕ್ಷಣ ಅಜ್ಜ-ಅಜ್ಜಿ ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಜೀವವನ್ನೇ ಕಳೆದುಕೊಂಡ ದಾರುಣ ಘಟನೆ ಕೊಳಾಳು ಗ್ರಾಮದಲ್ಲಿ ನಡೆದಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇನ್ನಾದ್ರೂ ಮಕ್ಕಳು ಮತ್ತು ಯುವಕರು ಮೊಬೈಲ್ ಗೀಳಿಗೆ ಬೀಳದಂತೆ ಪೋಷಕರು ಎಚ್ಚರ ವಹಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ