AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸನ್ನತಿ ಗ್ರಾಮದ ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳಗಳು ಪತ್ತೆ; ವಿದ್ಯಾರ್ಥಿಗಳಿಂದ ಆಕ್ರೋಶ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿ‌ನ ಸನ್ನತಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗಾಗಿ ತಯಾರಿಸಿದ ಬಿಸಿ ಊಟದಲ್ಲಿ ಅಪಾರ ಪ್ರಮಾಣದ ಹುಳುಗಳು ಪತ್ತೆಯಾಗಿವೆ.

ಕಲಬುರಗಿ: ಸನ್ನತಿ ಗ್ರಾಮದ ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳಗಳು ಪತ್ತೆ; ವಿದ್ಯಾರ್ಥಿಗಳಿಂದ ಆಕ್ರೋಶ
ಸನ್ನತಿ ಗ್ರಾಮದ ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳಗಳು ಪತ್ತೆ
TV9 Web
| Edited By: |

Updated on:Nov 22, 2022 | 9:43 PM

Share

ಕಲಬುರಗಿ: ಮಕ್ಕಳಿಗಾಗಿ ತಯಾರಿಸಿದ ಬಿಸಿ ಊಟದಲ್ಲಿ ಅಪಾರ ಪ್ರಮಾಣದ ಹುಳುಗಳು (Worms in meals) ಕಂಡು ಬಂದ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಸೇವಿಸಲು ತೆಗೆದುಕೊಂಡ ಅನ್ನ ಎಸೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿ‌ನ ಸನ್ನತಿ ಗ್ರಾಮದಲ್ಲಿ ನಿನ್ನೆ (ನ.21) ಮಧ್ಯಾಹ್ನ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಹುಳುಗಳು ತುಂಬಿದ್ದ ಬಿಸಿ ಊಟ ಸೇವಿಸಿದ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಆತಂಕ ಶುರುವಾಗಿದೆ. ಮಧ್ಯಾಹ್ನದ ವೇಳೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಕೆಲವರ ತಟ್ಟೆಯಲ್ಲಿ ಹುಳಗಳು ಪತ್ತೆಯಾಗಿವೆ. ಇದರಿಂದ ಗಾಬರಿಗೊಂಡ ವಿದ್ಯಾರ್ಥಿಗಳು ಅನ್ನ ಚೆಲ್ಲುವುದರ ಮೂಲಕ ಬಿಸಿ ಊಟ ತಯಾರಿಸುವ ಸಿಬ್ಬಂದಿಯ ನಿರ್ಲಕ್ಷದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು; ಹೈಕೋರ್ಟ್ ಮಹತ್ವದ ಆದೇಶ

ಬಿಸಿ ಊಟ ತಯಾರಿಕೆಗೂ ಮುನ್ನ ಅಕ್ಕಿ ಅನ್ನ ಮಾಡಲು ಯೋಗ್ಯವೇ ಎಂದು ಪರಿಶೀಲನೆ ಮಾಡಬೇಕು. ಅಲ್ಲದೆ, ಚೆನ್ನಾಗಿ ತೊಳೆದು ಅಕ್ಕಿಯನ್ನು ಶುಚಿಗೊಳಿ ನಂತರವೇ ಅಕ್ಕಿ ಬೇಯಲು ಇಡಬೇಕು. ಆದರೆ ಸಿಬ್ಬಂದಿಗಳು ಈ ಕೆಲಸ ಮಾಡದೆ ನೇರವಾಗಿ ಅಕ್ಕಿ ಬೇಯಿಸಿ ಅನ್ನ ಸಿದ್ಧಪಡಿಸಿದ್ದಾರೆ. ಬಹಳ ದಿನಗಳ ಹಿಂದೆ ಬಂದ ಅಕ್ಕಿಯನ್ನು ಮೂಲೆಯಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಅದೇ ಅಕ್ಕಿ ನೇರವಾಗಿ ಅಡುಗೆ ಮಾಡಲು ಬಳಸಲಾಗಿದೆ. ಹುಳಗಳೇ ತುಂಬಿದ್ದ ಹಳೆಯ ಅಕ್ಕಿಯನ್ನು ಬೇರ್ಪಡಿಸದೆ ನೇರವಾಗಿ ಅಡುಗೆ ಮಾಡಿರುವುದರಿಂದ ಅನ್ನದ ಜೊತೆಗೆ ಹುಳುಗಳು ಬೆಂದು ಹೋಗಿವೆ. ಅನ್ನದ ಜೊತೆ ಬೆಂದ ಹುಳುಗಳು ಈಗ ವಿದ್ಯಾರ್ಥಿಗಳ ಹೊಟ್ಟೆ ಸೇರಿದ್ದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬೀದರ್​: 2 ವರ್ಷದ ಮಗುವಿಗೆ ಕಚ್ಚಿದ ಹುಚ್ಚು ನಾಯಿ: ಮಗುವಿನ ಮುಖಕ್ಕೆ 32 ಹೊಲಿಗೆ ಹಾಕಿದ ವೈದ್ಯರು

ಮತ್ತಷ್ಟು ರಾಜ್ಯ ಸುದ್ದಿಗಳನ್ಹು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Tue, 22 November 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?