AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಮ್ಮದ್ ನಿಸಾರ್ ನಿಜಲಿಂಗ ಸ್ವಾಮೀಜಿಯಾಗಿ ಬದಲಾಗಿದ್ಹೇಗೆ? ಸ್ಫೋಟಕ ಮಾಹಿತಿ ಬಹಿರಂಗ

ಜಂಗಮ ದೀಕ್ಷೆ ಪಡೆದ ಮುಸ್ಲಿಂ ಸಮುದಾಯದ ಮಹಮದ್ ನಿಸಾರ್ ಸ್ವಾಮೀಜಿಯಾಗಿ ಪರಿವರ್ತನೆಯಾಗಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ನಿಜಲಿಂಗ ಸ್ವಾಮೀಜಿ ಎಂದು ನಾಮಕರಣಗೊಂಡಿದ್ದ ಮಹಮದ್ ನಿಸಾರ್ ಮೂಲತಃ ಮುಸ್ಲಿಂ ಎಂದು ತಿಳಿದ ತಕ್ಷಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ ಪೀಠದಿಂದ ಕೆಳಗಿಳಿಸಿದ್ದಾರೆ. ಅಷ್ಟಕ್ಕೂ ಮಹಮದ್ ನಿಸಾರ್ ಯಾರು?  ನಿಜಲಿಂಗ ಸ್ವಾಮೀಜಿ ಆಗಿದ್ಹೇಗೆ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಮಹಮ್ಮದ್ ನಿಸಾರ್ ನಿಜಲಿಂಗ ಸ್ವಾಮೀಜಿಯಾಗಿ ಬದಲಾಗಿದ್ಹೇಗೆ? ಸ್ಫೋಟಕ ಮಾಹಿತಿ ಬಹಿರಂಗ
Nijalinga Swamiji
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Aug 06, 2025 | 7:08 PM

Share

ಕಲಬುರಗಿ, (ಆಗಸ್ಟ್ 06): ಚಾಮರಾಜನಗರ (Chamrajnagar) ಜಿಲ್ಲೆಯ ಗುಂಡ್ಲುಪೇಟೆಯ ಚೌಡಹಳ್ಳಿಯ ಮಠದಪೀಠಾಧಿಪತಿಯಾಗಿದ್ದ ನಿಜಲಿಂಗ ಸ್ವಾಮೀಜಿ ((Nijalinga Swamiji) ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ತಡವಾಗಿ ತಿಳಿದುಬಂದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಯಾದಗಿರಿ ಜಿಲ್ಲೆ ಶಹಪುರ ಮೂಲದ ನಿಜಲಿಂಗ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದರು. ಪೂರ್ವಾಶ್ರಮದಲ್ಲಿ ಇವರ ಹೆಸರು ಮಹಮದ್ ನಿಸಾರ್(Mohammed Nisar) ಎಂದು ಇತ್ತು. ವಿಚಾರ ಗೊತ್ತಾಗುತ್ತಿದ್ದಂತೆಯೇ ಚೌಡಹಳ್ಳಿ ಗ್ರಾಮಸ್ಥರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಸ್ವಾಮೀಜಿ ಪೀಠತ್ಯಾಗ ಮಾಡಿ ಮಠದಿಂದ ಹೊರ ನಡೆದಿದ್ದಾರೆ. ಇನ್ನು ಮುಸ್ಲಿಂ ಸಮುದಾಯದ ಮಹಮದ್ ನಿಸಾರ್ ನಿಜಲಿಂಗ ಸ್ವಾಮೀಜಿಯಾಗಿಬದಲಾಗಿದ್ಹೇಗೆ ಎನ್ನುವುದನ್ನು ಸ್ವತಃ ತಾಯಿ ಬಿಚ್ಚಿಟ್ಟಿದ್ದಾರೆ.

5ನೇ ಕ್ಲಾಸಿನಿಮದಲೇ ಲಿಂಗ ಪೂಜೆ

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಾಜಪೂರ ಗ್ರಾಮದಲ್ಲಿ ಮಹಮ್ಮದ್ ನಿಸಾರ್ ತಾಯಿ ರೇಹನಾ ಬೇಗಂ ಮಾತನಾಡಿದ್ದು, ನನ್ನ ಮಗ ಐದನೇ ಕ್ಲಾಸ್ ನಿಂದ ಲಿಂಗ ಪೂಜೆ ಬಸವತತ್ವದ ಬಗ್ಗೆ ಇಷ್ಟಪಡುತ್ತಿದ್ದ. ಬಸವಣ್ಣನ ಪ್ರಭಾವದಿಂದ ಲಿಂಗದೀಕ್ಷೆ ಪಡೆದುಕೊಂಡಿದ್ದೆನೆ ಎಂದಿದ್ದ. ನನ್ನ ಮಗ ಮನೆಗೆ ಲಿಂಗ ತಂದು ಲಿಂಗ ಪೂಜೆ ಮಾಡುತ್ತಿದ್ದ. ನಾನುಲಿಂಗವನ್ನ ಬಿಸಾಕಿದ್ದರೂ ಮತ್ತೆ ಲಿಂಗ ಪೂಜೆ ಮಾಡುತ್ತೇನೆಂದು ಹಠ ಮಾಡುತ್ತಿದ್ದ. ಏಳನೇ ತರಗತಿ ಆದ ಮೇಲೆ ಬಸವಕಲ್ಯಾಣ ಹೋಗಿ ಅಲ್ಲೆ ಸ್ವಾಮೀಜಿ ಬಳಿ ಉಳಿದುಕೊಂಡಿದ್ದಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:  ವಿರಕ್ತ ಮಠಕ್ಕೆ ಮುಸ್ಲಿಂ ವ್ಯಕ್ತಿ ಪೀಠಾಧಿಪತಿ: ವಿರೋಧಿಸಿದ ಗ್ರಾಮಸ್ಥರಿಗೆ ತಿಳಿ ಹೇಳಿದ ವಚನಾನಂದ ಶ್ರೀ

ತಂದೆ ಸಾವನ್ನಪ್ಪಿದ್ರು ಹೋಗಿರಲಿಲ್ಲ

ಕಳೆದ ಐದು ವರ್ಷದಿಂದ ಆತ ಮನೆಗೆ ಬಂದಿರಲಿಲ್ಲ‌. ತಂದೆ ಸಾವನ್ನಪ್ಪಿದ್ರು ಆತ ಅಂತ್ಯಸಂಸ್ಕಾರಕ್ಕೆ ಬಂದಿರಲಿಲ್ಲ. ಸ್ವಂತ ತಂಗಿಯ ಮದುವೆಗೂ ಆತ ಬಂದಿರಲಿಲ್ಲ. ಆತ ಕುಡಿಯುತ್ತಿರಲಿಲ್ಲ ಅವನ ಕುಡಿಯುವ ವಿಡಿಯೋ ನನಗೆ ಗೊತ್ತಿಲ್ಲ. ಅವನಿಗೆ ಆಗದವರು ಆರೋಪ ಮಾಡುತ್ತಿರಬಹುದು‌. ಆತ ನಮ್ಮ ಪಾಲಿಗೆ ಸತ್ತಿದ್ದಾನೆ ಅಂದುಕೊಂಡು ಜೀವನ ಮಾಡುತ್ತಿದ್ದೇನೆ ಹೇಳಿದ್ದಾರೆ.

ನಿಸಾರ್ ಶಾಲೆಯಲ್ಲಿ ಹೇಗಿದ್ದ ಗೊತ್ತಾ?

 ಇನ್ನೂ ನಿಸಾರ್ ಅಹ್ಮದ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವಾಗಲೇ ಹೆಚ್ಚಾಗಿ ಆಧ್ಯಾತ್ಮದ ಬಗ್ಗೆ ಹೆಚ್ಚು ಒಲವು ಹೊಂದಿದ್ದ ಎನ್ನುವುದನ್ನು ಪಾಠ ಹೇಳಿದ್ದ ಶಿಕ್ಷಕರೇ ತಿಳಿಸಿದ್ದಾರೆ. ನಿಸಾರ್ ಅಹ್ಮದ್ ಓದಿದ ಶಾಲೆಯ ಶಿಕ್ಷಕ ಮಹೇಶ ಬಡಿಗೇರ್ ಮಾತನಾಡಿ, ಅಂದಿನ ನಿಸಾರ್ ಅಹ್ಮದ್ ವಿಧ್ಯಾರ್ಥಿ ಜೀವನದಲ್ಲೆ ಆಧ್ಯಾತ್ಮದ ಬಗ್ಗೆ ಒಲವು ಹೊಂದಿದ್ದ. ಆಧ್ಯಾತ್ಮಿಕದ ಬಗ್ಗೆಯೇ ಚರ್ಚೆ ಮಾಡುತ್ತಿದ್ದ. 2020 ರಲ್ಲಿ ನಮ್ಮ ಶಾಲೆಯಿಂದ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿದ್ದ. ಲಬುರಗಿ ಜಿಲ್ಲೆ ಕಾಳಗಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ಮುಗಿಸಿದ್ದ. ಅದಕ್ಕೂ ಮೊದಲೇ ಆತ ಲಿಂಗದೀಕ್ಷೆ ತೆಗೆದುಕೊಂಡಿರುವುದಾಗಿ ಹೇಳುತ್ತಿದ್ದ. ಕೊನೆದಾಗಿ ತನ್ನ ಅಂಕಪಟ್ಟಿ ತೆಗೆದುಕೊಳ್ಳುವುದಕ್ಕೆ ಎಂದು ಶಾಲೆಗೆ ಬಂದಿದ್ದ. ಆ ವೇಳೆ ಕಾವಿ ವೇಶಧಾರಿಯಾಗೇ ಶಾಲೆಗೆ ಬಂದಿದ್ದ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಲಿಂಗಾಯತ ವಿರಕ್ತ ಮಠಕ್ಕೆ ಮುಸಲ್ಮಾನ ಪೀಠಾಧಿಪತಿ: ಒಂದುವರೆ ತಿಂಗಳ ಬಳಿಕ ಸತ್ಯ ಬಹಿರಂಗ

ವಿದ್ಯಾರ್ಥಿ ಜೀವನದಲ್ಲೇ ಆತ ವಚನ ಬರೆಯುತ್ತಿದ್ದ. ಸಾಕಷ್ಟು ವಚನಗಳನ್ನ ಕೂಡಾ ಬರೆದಿದ್ದ. ಉರ್ದು ಮಾತೃಭಾಷೆಯಾಗಿದ್ದರೂ ಕನ್ನಡ ಚೆನ್ನಾಗಿ ಕಲಿತಿದ್ದ. ಅಲ್ಲದೇ ಕನ್ನಡದಲ್ಲೇ ವಚನಗಳನ್ನ ಬರೆಯುತ್ತಿದ್ದ. ಆತ ಲಿಂಗದೀಕ್ಷೆ ಪಡೆಯೋ ಬಗ್ಗೆ ಕೆಲವರ ವಿರೋಧವಿತ್ತು ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Wed, 6 August 25

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು