AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA: ಭಾರತೀಯ ಪೌರತ್ವಕ್ಕಾಗಿ ಕರ್ನಾಟಕದಿಂದ 145 ಮಂದಿ ಅರ್ಜಿ, ಯಾವ ಜಿಲ್ಲೆಯಿಂದ ಎಷ್ಟು? ಇಲ್ಲಿದೆ ಮಾಹಿತಿ

Citizenship Amendment Act: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸಿಎಎ ಅಡಿ ಪೌರತ್ವಕ್ಕೆ ದೇಶಾದ್ಯಂತ ಸುಮಾರು 12,000 ಮಂದಿ ಈವರೆಗೆ ಅರ್ಜಿ ಸಲ್ಲಿಸಿದ್ದು, ಕರ್ನಾಟಕದಿಂದ 143 ಅರ್ಜಿಗಳು ಸಲ್ಲಿಕೆಯಾಗಿವೆ. ವಿಶೇಷ ಎಂದರೆ, ಕೇವಲ 2 ಜಿಲ್ಲೆಗಳಿಂದ ಮಾತ್ರವೇ ಇಷ್ಟೊಂದು ಅರ್ಜಿ ಸಲ್ಲಿಕೆಯಾಗಿವೆ. ಆ ಜಿಲ್ಲೆಗಳು ಯಾವುವು? ಅರ್ಜಿ ಸಲ್ಲಿಸಿದವರು ಯಾರು? ಇಲ್ಲಿದೆ ಮಾಹಿತಿ.

CAA: ಭಾರತೀಯ ಪೌರತ್ವಕ್ಕಾಗಿ ಕರ್ನಾಟಕದಿಂದ 145 ಮಂದಿ ಅರ್ಜಿ, ಯಾವ ಜಿಲ್ಲೆಯಿಂದ ಎಷ್ಟು? ಇಲ್ಲಿದೆ ಮಾಹಿತಿ
ಭಾರತೀಯ ಪೌರತ್ವಕ್ಕಾಗಿ ಕರ್ನಾಟಕದಿಂದ 145 ಮಂದಿ ಅರ್ಜಿ
Ganapathi Sharma
|

Updated on: May 22, 2024 | 12:51 PM

Share

ಬೆಂಗಳೂರು, ಮೇ 22: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಡಿಯಲ್ಲಿ ಕರ್ನಾಟಕದಿಂದ (Karnataka) ಒಟ್ಟು 145 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅವರು ತಮ್ಮ ಅರ್ಜಿಗಳನ್ನು ಅಂಚೆ ಇಲಾಖೆಗೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಯಚೂರಿನಿಂದ 143 ಮತ್ತು ದಕ್ಷಿಣ ಕನ್ನಡದಿಂದ ಎರಡು ಅರ್ಜಿಗಳು ಬಂದಿವೆ. ಅವರಲ್ಲಿ ಹೆಚ್ಚಿನವರು ಪಾಕಿಸ್ತಾನದಿಂದ ಬಂದ ಹಿಂದೂಗಳು. ಇದು ನಿರಂತರ ಪ್ರಕ್ರಿಯೆಯಾಗಿರುವುದರಿಂದ ಅರ್ಜಿಗಳನ್ನು ಕಳುಹಿಸಲು ಯಾವುದೇ ಗಡುವು ಇಲ್ಲ ಎಂದು ಮೂಲಗಳು ತಿಳಿಸಿವೆ.

ಅರ್ಜಿ ಸಲ್ಲಿಸಿರುವ ವ್ಯಕ್ತಿಗಳು ರಾಯಚೂರಿಗೆ ಸ್ಥಳಾಂತರಗೊಂಡದ್ದು ಯಾವಾಗ ಎಂಬುದು ತಿಳಿದಿಲ್ಲ. ಆದರೆ ನಮ್ಮ ವಿಭಾಗೀಯ ಕಚೇರಿಗೆ 143 ಅರ್ಜಿಗಳು ಬಂದಿವೆ. ಬೆಂಗಳೂರಿನಲ್ಲಿ ನಾಲ್ಕು ವಿಭಾಗೀಯ ಕಚೇರಿಗಳಿದ್ದು, ಅಲ್ಲಿ ಒಂದು ಅರ್ಜಿಯನ್ನೂ ಸ್ವೀಕರಿಸಿಲ್ಲ ಎಂದು ಅಂಚೆ ಇಲಾಖೆ ಮೂಲಗಳು ಹೇಳಿವೆ.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ 2014 ರ ಡಿಸೆಂಬರ್ 31 ರ ಮೊದಲು ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಸಿಎಎ ಅಡಿ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. ಈ ವರ್ಷದ ಮಾರ್ಚ್ 11 ರಂದು ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೊಳಿಸಿದ ನಂತರ, ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅಂಚೆ ಮತ್ತು ರೈಲ್ವೆ ನೌಕರರಿಗೆ ಪ್ರಮಾಣಪತ್ರಗಳನ್ನು ಪರಿಶೀಲಿಸಲು ಮತ್ತು ವಿತರಿಸಲು ಹೊಣೆಗಾರಿಕೆ ನೀಡಲಾಗಿದೆ.

ಸಿಎಎ ಅಡಿ ಪೌರತ್ವಕ್ಕೆ ದೇಶಾದ್ಯಂತ ಸುಮಾರು 12,000 ಮಂದಿ ಈವರೆಗೆ ಅರ್ಜಿ ಸಲ್ಲಿಸಿದ್ದು, ಇತ್ತೀಚೆಗೆ 300 ಮಂದಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಗಿದೆ. ಅರ್ಜಿದಾರರು ಎಲ್ಲಾ ಅಗತ್ಯ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕಾಗುತ್ತದೆ. ಇವರಿಗೆ ಅಪಾಯಿಂಟ್​ಮೆಂಟ್​ಗಳನ್ನೂ ಆನ್‌ಲೈನ್‌ನಲ್ಲಿ ನಿಗದಿಪಡಿಸಲಾಗುತ್ತದೆ. ಮೊದಲ ಅಪಾಯಿಂಟ್​ಮೆಂಟ್ ಮೇ 25 ರಂದು ರಾಯಚೂರಿನಲ್ಲಿ ನಿಗದಿಯಾಗಿದೆ. ಅರ್ಜಿದಾರರು ಎಲ್ಲಾ ಮೂಲ ದಾಖಲೆಗಳನ್ನು ಒದಗಿಸುವ ನಿರೀಕ್ಷೆಯಿದೆ. ಒಂದು ದಿನದಲ್ಲಿ 28 ಅಪಾಯಿಂಟ್​ಮೆಂಟ್ ನೀಡಿರುವುದರಿಂದ ಎಲ್ಲಾ ಅರ್ಜಿಗಳನ್ನು ಮೇ 31 ರೊಳಗೆ ಪೂರ್ಣಗೊಳಿಸಲು ಅಂಚೆ ಸಿಬ್ಬಂದಿ ಯೋಜಿಸಿದ್ದಾರೆ. ದಕ್ಷಿಣ ಕನ್ನಡ ಅಧಿಕಾರಿಗಳು ಜೂನ್ 5 ರಂದು ಇಬ್ಬರು ಅರ್ಜಿದಾರರಿಗೆ ಅಪಾಯಿಂಟ್​ಮೆಂಟ್ ನೀಡಿದ್ದಾರೆ, ಜೂನ್ 5 ರೊಳಗೆ ಅಂಚೆ ಇಲಾಖೆಯ ಕೆಲಸ ಮುಗಿಯುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹೆಚ್ಚು ಮಳೆ ಬರಲಿ, ತಮಿಳುನಾಡಿಗೂ ನೀರು ಹರಿಯಲಿ: ಡಿಸಿಎಂ ಡಿಕೆ ಶಿವಕುಮಾರ್

ಆರಂಭಿಕ ಪ್ರಕ್ರಿಯೆಗಳು ಮುಗಿದ ನಂತರ ಅಂಚೆ ಇಲಾಖೆಯು ಅರ್ಜಿಗಳನ್ನು ರಾಜ್ಯ ಮಟ್ಟದ ಅಧಿಕಾರ ಸಮಿತಿಗೆ ಕಳುಹಿಸಲಿದೆ. ಅವರು ಅದನ್ನು ಮತ್ತೊಮ್ಮೆ ಪರಿಶೀಲಿಸುತ್ತಾರೆ ಮತ್ತು ಪರಿಶೀಲನೆಯ ವಿವರಗಳು ಮತ್ತು ದಾಖಲೆಗಳನ್ನು ಸಿಎಎ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ಗೃಹ ಸಚಿವಾಲಯವು ಅರ್ಜಿಗಳ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ