AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕ ಇಲಾಖೆ ಸಚಿವರ ಶಿಫಾರಸ್ಸಿಗಿಲ್ಲ ಕಿಮ್ಮತ್ತು! ವರ್ಗಾವಣೆ ಮಾಡಿರುವ ಅಧಿಕಾರಿಗಳ ಸೇವಾ ವಿವರ ನೀಡುವಂತೆ ಸಂತೋಷ್ ಲಾಡ್ ಟಿಪ್ಪಣಿ

ಆಗಸ್ಟ್ ತಿಂಗಳಲ್ಲಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಸಚಿವರಿಗೂ ಮಾಹಿತಿ ನೀಡದೇ ವರ್ಗಾವಣೆ ಪಟ್ಟಿ ಸಿದ್ದಪಡಿಸಿದ್ದಾರೆ. ಸಚಿವರ ಶಿಫಾರಸ್ಸುಗಳನ್ನೇ ಕಸದ ಬುಟ್ಟಿಗೆ ಹಾಕಿ ವರ್ಗಾವಣೆ ಪಟ್ಟಿ ಸಿದ್ಧಪಡಿಸಿದ್ದಕ್ಕೆ ಸಂತೋಷ್ ಲಾಡ್ ಗರಂ ಆಗಿದ್ದಾರೆ.

ಕಾರ್ಮಿಕ ಇಲಾಖೆ ಸಚಿವರ ಶಿಫಾರಸ್ಸಿಗಿಲ್ಲ ಕಿಮ್ಮತ್ತು! ವರ್ಗಾವಣೆ ಮಾಡಿರುವ ಅಧಿಕಾರಿಗಳ ಸೇವಾ ವಿವರ ನೀಡುವಂತೆ ಸಂತೋಷ್ ಲಾಡ್ ಟಿಪ್ಪಣಿ
ಸಂತೋಷ್ ಲಾಡ್
Pramod Shastri G
| Edited By: |

Updated on:Nov 04, 2023 | 10:55 AM

Share

ಬೆಂಗಳೂರು, ನ.4: ಆಗಸ್ಟ್ ತಿಂಗಳಲ್ಲಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಸಚಿವರಿಗೂ ಮಾಹಿತಿ ನೀಡದೇ ಸಿಎಂ ಸಚಿವಲಾಯದ ಅಧಿಕಾರಿಗಳು ವರ್ಗಾವಣೆ ಪಟ್ಟಿಯನ್ನು ಸಿದ್ಧಪಡಿಸಿರುವುದು ಸಚಿವ ಸಂತೋಷ್ ಲಾಡ್ (Santosh Lad) ಕೋಪಕ್ಕೆ ಕಾರಣವಾಗಿದೆ.

ಸಚಿವ ಸಂತೋಷ್ ಲಾಡ್ ಅವರ ಶಿಫಾರಸುಗಳನ್ನೇ ಕಸದ ಬುಟ್ಟಿಗೆ ಹಾಕಿರುವ ಸಿಎಂ ಸಚಿವಾಲಯದ ಅಧಿಕಾರಿಗಳು, ಸಚಿವರಿಗೇ ಮಾಹಿತಿ ನೀಡದೇ ಅಧಿಕಾರಿಗಳ ವರ್ಗಾವಣೆ ಪಟ್ಟಿ ಸಿದ್ಧಪಡಿಸಿದ್ದಾರೆ. ಇದು ಸಂತೋಷ್ ಲಾಡ್ ಹಾಗೂ ಸಿಎಂ ಸಚಿವಾಲಯ ಅಧಿಕಾರಿಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.

ಸಚಿವರ ಹೆಸರಲ್ಲಿ ತಾವೇ ಅಧಿಕಾರ ಚಲಾಯಿಸುತ್ತಿರುವ ಸಿಎಂ ಸಚಿವಾಲಯದ ಅಧಿಕಾರಿಗಳ ಅಬ್ಬರಕ್ಕೆ ತೀವ್ರ ಕೋಪಗೊಂಡಿರುವ ಸಚಿವ ಸಂತೋಷ್ ಲಾಡ್, ಅತ್ತ ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಲೂ ಆಗದೇ, ಸುಮ್ಮನಿರಲೂ ಆಗದೇ ಇರುವ ಸ್ಥಿತಿಯಲ್ಲಿ ಕುಳಿತಿದ್ದಾರೆ. ಅಲ್ಲದೆ, ವರ್ಗಾವಣೆ ಮಾಡಿರುವ ಅಧಿಕಾರಿಗಳ ಸೇವಾ ವಿವರ ನೀಡುವಂತೆ ಟಿಪ್ಪಣಿ ಕಳಿಸಿದ್ದಾರೆ.

ಏನಿದು ಜಟಾಪಟಿ?

ಆಗಸ್ಟ್ ತಿಂಗಳಲ್ಲಿ ಕಾರ್ಮಿಕ ಇಲಾಖೆಯ 40 ಅಧಿಕಾರಿಗಳನ್ನು ಸಚಿವರು ವರ್ಗಾವಣೆ ಮಾಡಿದ್ದರು. ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಅವರ ಅನುಮೋದನೆ ಇಲ್ಲ ಎಂದು ಐದೇ ದಿನಕ್ಕೆ ವರ್ಗಾವಣೆ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಸಚಿವರು ಕೇವಲ ನಾಲ್ಕು ಅಧಿಕಾರಿಗಳ ವರ್ಗಾವಣೆಗಾಗಿ ಸಿಎಂ ಅನುಮೋದನೆಗೆ ಶಿಫಾರಸ್ಸು ಮಾಡಿದ್ದರು.

ಇದನ್ನೂ ಓದಿ: ವರ್ಗಾವಣೆ ದಂಧೆಯಲ್ಲಿ ಜೆಟಿ ಪಾಟೀಲ್ ಪಿಎ ಭಾಗಿ ಆರೋಪ; ಇದು ನಿಜ ಎಂದ ಮಾಜಿ ಸಚಿವ ಮುರುಗೇಶ್ ನಿರಾಣಿ

ಸಿಎಂ ಅನುಮೋದನೆ ಪಡೆಯುವ ವೇಳೆ ಸಿಎಂ ಸಚಿವಲಾಯದ ಅಧಿಕಾರಿಗಳು ಹೆಚ್ಚುವರಿ ಪಟ್ಟಿ ಸಿದ್ಧಪಡಿಸಿ ಬಿಟ್ಟಿದ್ದಾರೆ. ಸಚಿವರು ಕೊಟ್ಟಿದ್ದ ಪಟ್ಟಿ ಕಸದ ಬುಟ್ಟಿಗೆ ಹಾಕಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸಚಿವರ ಬೇಸರ ಗೊತ್ತಿಲ್ಲದೇ ಸಿದ್ದರಾಮಯ್ಯ ಅವರು ವರ್ಗಾವಣೆ ಪಟ್ಟಿಗೆ ಅನುಮೋದನೆ ನೀಡಿದ್ದಾರೆ.

ಸಚಿವರು ಹಾಗೂ ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡದೆ ಅಧಿಕಾರಿಗಳೇ ವರ್ಗಾವಣೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಿಎಂ ಕಚೇರಿ ಅಧಿಕಾರಿಗಳ ನಡೆಗೆ ಸಚಿವ ಸಂತೋಷ್ ಲಾಡ್ ತೀವ್ರ ಬೇಸರಗೊಂಡಿದ್ದಾರೆ. ಅಲ್ಲದೆ, ಅಧಿಕಾರಿಗಳಿಂದ ನೇರ ವರ್ಗಾವಣೆ ಪಟ್ಟಿ ತಯಾರಿಕೆ ವೇಳೆ ಮಾರ್ಗಸೂಚಿ ಉಲ್ಲಂಘನೆಯ ಆರೋಪ ಹಿನ್ನೆಲೆ ವರ್ಗಾವಣೆ ಮಾಡಿರುವ ಅಧಿಕಾರಿಗಳ ಸೇವಾ ವಿವರ ನೀಡುವಂತೆ ಸಚಿವರು ಟಿಪ್ಪಣಿ ಕಳಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 am, Sat, 4 November 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ