ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ: 30ಕ್ಕೂ ಹೆಚ್ಚು ಜನರು ವಶಕ್ಕೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಅರಬಿಳಚಿ ಕ್ಯಾಂಪ್​ನಲ್ಲಿ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಭಾರಿಸುವ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎರಡು ಪ್ರಕರಣಗಳು ದಾಖಲಾಗಿವೆ.

ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ: 30ಕ್ಕೂ ಹೆಚ್ಚು ಜನರು ವಶಕ್ಕೆ
ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ: 30ಕ್ಕೂ ಹೆಚ್ಚು ಜನರು ವಶಕ್ಕೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 08, 2024 | 4:17 PM

ಶಿವಮೊಗ್ಗ, ಸೆಪ್ಟೆಂಬರ್​​ 08: ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ (Clash) ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಅರಬಿಳಚಿ ಕ್ಯಾಂಪ್​ನಲ್ಲಿ ಘಟನೆ ನಡೆದಿತ್ತು. ಹೊಳೆಹೊನ್ನೊರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಣಪತಿ ವಿಸರ್ಜನೆ ವೇಳೆ ಡೊಳ್ಳು ಭಾರಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಎರಡು ಗುಂಪುಗಳ ಗಲಾಟೆ ವಿರುದ್ಧ ಎರಡು ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮುಂಜಾಗ್ರತೆಗೆ ಅರಬಿಳಚಿ ಕ್ಯಾಂಪ್​ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದ್ದು, ಎರಡು ಕೆಎಸ್ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ: ವೃದ್ಧ ಸಾವು

ರಾಯಚೂರು: ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಉಂಟಾಗಿದ್ದು, ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಮೂರು ಮೈಲ್ ಕ್ಯಾಂಪ್‌ನಲ್ಲಿ ನಡೆದಿದೆ. ವೀರಬಸಪ್ಪ (60) ಮೃತ ವ್ಯಕ್ತಿ.

ಇದನ್ನೂ ಓದಿ: ಕಳೆದ ವರ್ಷದ ಗಲಾಟೆಯಿಂದ ಪಾಠ: ಈ ಬಾರಿ ಶಿವಮೊಗ್ಗದಲ್ಲಿ ಪೊಲೀಸರು ಹೈಅಲರ್ಟ್

ನಿನ್ನೆ ಏರಿಯಾದಲ್ಲಿ ಕೂರಿಸಲಾಗಿದ್ದ ಗಣೇಶನ ವಿಸರ್ಜನೆ ವೇಳೆ ಗಲಾಟೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಬಿಡಿಸಲು ವೀರಬಸಪ್ಪ ಹೋಗಿದ್ದಾರೆ. ಆ ವೇಳೆ ವೀರಬಸಪ್ಪ ಕೆನ್ನೆಗೆ ಮಹೇಶ್​ ಎಂಬಾತ ಹೊಡೆದಿದ್ದಾರೆ. ಈ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತನ ಕುಟುಂಬಸ್ಥರಿಂದ ಕೊಲೆ ಆರೋಪದಡಿ ದೂರು ನೀಡಲಾಗಿದ್ದು, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹೇಶ್, ಪರಶುರಾಮ ಹಾಗೂ ಓರ್ವ ಅಪ್ರಾಪ್ತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾರ್​ನಲ್ಲಿ ಸಪ್ಲೈಯರ್​ ಹಾಗೂ ಓರ್ವನ ಮಧ್ಯೆ ಗಾಲಾಟೆ, ಹಲ್ಲೆ

ಬೆಳಗಾವಿ: ಬಾರ್​ವೊಂದರಲ್ಲಿ ಸಪ್ಲೈಯರ್​ ಹಾಗೂ ಓರ್ವನ ಮಧ್ಯೆ ಗಲಾಟೆ ಮಾಡಿ ಹಲ್ಲೆ ಮಾಡಿರುವಂತಹ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಬಳಿಯ ಬಾರ್​ ವೊಂದರಲ್ಲಿ ನಡೆದಿದೆ. ಬಾರ್​ ಮ್ಯಾನೇಜರ್​ ಹೀರಾಮನಿ ಜೋರಾಪುರ ಮೇಲೆ ಕುಡುಗೋಲಿನಿಂದ ವ್ಯಕ್ತಿಯೊಬ್ಬನಿಂದ ಹಲ್ಲೆ ಮಾಡಲಾಗಿದೆ. ಮುತ್ಯಾನಟ್ಟಿ ಗ್ರಾಮದ ಸುನೀಲ್​ ಕರಿಕಟ್ಟಿ​ ಎಂಬಾತನ ಮೇಲೆಯೂ ಮ್ಯಾನೇಜರ್​ ಪ್ರತಿ ಹಲ್ಲೆ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

ಹಲ್ಲೆಗೊಳಗಾದ ಬಾರ್​ ಮ್ಯಾನೇಜರ್​​ ಖಾಸಗಿ ಆಸ್ಪತ್ರೆಯಲ್ಲಿ ಮತ್ತು ಹಲ್ಲೆ ಮಾಡಿದ ಸುನೀಲ್​ ಎಂಬ ವ್ಯಕ್ತಿಗೆ ಬಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾಲೀಕರಾದವರು ಅವರ ಕೆಳಗಿನ ಹುದ್ದೆಯಲ್ಲಿರುವವರಿಗೆ ಹೇಳಬೇಕು, ಹೀಗೆ ಮಾಡಿದರೆ ಅವರನ್ನು ನಾನು ಬಿಡಲ್ಲ ಎಂದು ಸುನೀಲ್ ಹೇಳಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.