AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ಕಮಿಟಿ ವಿಚಾರಕ್ಕೆ ಗಲಾಟೆ: ಪೊಲೀಸ್ ಠಾಣೆ ಆವರಣದಲ್ಲೇ ಮುಸ್ಲಿಂ ಸಮುದಾಯಗಳ ಮಧ್ಯೆ ಮಾರಾಮಾರಿ

ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯ ಆವರಣದಲ್ಲಿ ಮಸೀದಿ ಕಮಿಟಿ ರಚನೆ ವಿಚಾರವಾಗಿ ಪೊಲೀಸ್ ಠಾಣೆ ಆವರಣದಲ್ಲೇ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ನಡೆದಿದೆ. ಪೊಲೀಸ್ ಠಾಣೆ ಆವರಣದಲ್ಲಿ ಗಲಾಟೆ ಕಂಡು ಜನರು ಆತಂಕಗೊಂಡರು. ಗಲಾಟೆ ಮಾಡಿಕೊಂಡವರನ್ನು ಗಂಗಾವತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಜಯ್ಯಾ ಚಿಕ್ಕಮಠ
| Edited By: |

Updated on:May 11, 2024 | 5:10 PM

Share

ಕೊಪ್ಪಳ, ಮೇ 11: ಮಸೀದಿ (mosque) ಕಮಿಟಿ ರಚನೆ ವಿಚಾರವಾಗಿ ಪೊಲೀಸ್ ಠಾಣೆ ಆವರಣದಲ್ಲೇ 2 ಗುಂಪುಗಳ ನಡುವೆ ಗಲಾಟೆ ನಡೆದಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದಿದೆ. ಕಿಲ್ಲಾ ಏರಿಯಾದ ಮರ್ಕಾಸ್ ಮಸೀದಿ ಕಮಿಟಿ ರಚನೆ ವಿಚಾರವಾಗಿ ಮುಸ್ಲಿಂ (Muslim) ಸಮುದಾಯದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪೊಲೀಸ್ ಠಾಣೆ ಆವರಣದಲ್ಲಿ ಗಲಾಟೆ ಕಂಡು ಜನರು ಆತಂಕಗೊಂಡರು. ಗಲಾಟೆ ಮಾಡಿಕೊಂಡವರನ್ನು ಗಂಗಾವತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೀಟ್ ವಿಚಾರವಾಗಿ ಮಹಿಳೆಯರಿಬ್ಬರ ಕಿತ್ತಾಟ 

ವಿಜಯಪುರ: ಬಸ್ ಪ್ರಯಾಣದ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಸೀಟ್ ವಿಚಾರವಾಗಿ ಕಿತ್ತಾಟ ಆರಂಭಿಸಿದ್ದು, ಗಲಾಟೆ ತಾರಕಕ್ಕೇರಿದ್ದರಿಂದ ಚಾಲಕ ರಸ್ತೆಯಲ್ಲೇ ಬಸ್ ನಿಲ್ಲಿಸುರುವ ಘಟನೆ ನಗರದಲ್ಲಿ ನಡೆದಿದೆ. ವಿಜಯಪುರ ನಗರದಿಂದ ಜಮಖಂಡಿ ಕಡೆಗೆ ಹೊರಟಿದ್ದ ಬಸ್​ನಲ್ಲಿ ಇಬ್ಬರು ಮಹಿಳೆಯರು ಸೀಟ್ ವಿಷಯವಾಗಿ ಕಿತ್ತಾಡಿಕೊಂಡಿದ್ದರು. ಇದರಿಂದ ನಿರ್ವಾಹಕ ಪ್ರಯಾಣಿಕರಿಗೆ ಟಿಕೆಟ್‌ ಕೊಡಲು ಹಾಗೂ ಚಾಲಕ ವಾಹನ ಚಲಾಯಿಸಲು ಸಮಸ್ಯೆಯಾಗಿತ್ತು.

ಇದನ್ನೂ ಓದಿ: ಕೊಪ್ಪಳ: ಬಿರುಗಾಳಿ ಹೊಡೆತಕ್ಕೆ ಹಾಳಾದ ಬಾಳೆ ತೋಟ, ಲಕ್ಷಾಂತರ ರೂಪಾಯಿ ಆದಾಯ ಕಳೆದುಕೊಂಡು ಕಂಗಾಲಾದ ರೈತರು

ಚಾಲಕ, ನಿರ್ವಾಹಕರು ಮಾತ್ರವಲ್ಲದೇ ಸಹ ಪ್ರಯಾಣಿಕರು ಇಬ್ಬರೂ ಮಹಿಳೆಯರ ಜಗಳ ಬಿಡಿಸಲು ಯತ್ನಿಸಿದರೂ ಮಹಿಳೆಯರ ಜಗಳ ಬಗೆಹರಿದಿಲ್ಲ. ಪರಿಣಾಮ ಚಾಲಕ ನಗರದ ಹೊರ ವಲಯದಲ್ಲಿ ಬಸ್ ನಿಲ್ಲಿಸಿದ್ದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿತ್ತು. ಈ ಬಸ್ ನಲ್ಲಿನ ಮಹಿಳಾ ಮಣಿಗಳ ಜಗಳ ಕಾರಣ ಇತರೆ ಬಸ್ ಗಳ ಪ್ರಯಾಣಕ್ಕೂ ಸಮಸ್ಯೆಯಾಗಿತ್ತು.

ಇದನ್ನೂ ಓದಿ: SSLC ಫಲಿತಾಂಶ ಪ್ರಕಟ: ಮತ್ತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಹೆಚ್ಚು ಜನ ಜಂಗುಳಿ ಸೇರಿದ ಕಾರನ ರಸ್ತೆಯಲ್ಲಿ ಇತರೆ ಬಸ್​ಗಳು ಹಾಗೂ ಇತರೆ ವಾಹನಗಳೂ ಸಹ ನಿಲ್ಲುವಂತಾಗಿತ್ತು. ಕೆಲ ಸಮಯದ ಬಳಿಕ ಸಹ ಪ್ರಯಾಣಿಕರು ಗಲಾಟೆ ಮಾಡುತ್ತಿದ್ದ ಇಬ್ಬರು ಮಹಿಳೆಯರನ್ನು ಸಮಾಧಾನ ಮಾಡಿದರು. ನಂತರ ಮುಂದಿನ ಪ್ರಯಾಣ ಆರಂಭವಾಯಿತು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:02 pm, Sat, 11 May 24

ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ದಂಪತಿ ರೈಲಿನಿಂದ ಹಾರುವ ಮುನ್ನ ಇಬ್ಬರ ನಡುವೆ ರೈಲಿನಲ್ಲಿ ಏನಾಗಿತ್ತು ನೋಡಿ
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!
ಚಾಮರಾಜನಗರ: ಚಿರತೆ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಸಿಕ್ಕಿಬಿದ್ದ ವ್ಯಕ್ತಿ!