Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ಬದಲಾವಣೆ: ಬೆಂಗಳೂರು, ಪುಣೆಗೆ ಸಾಮೂಹಿಕ ವಲಸೆ ಹೆಚ್ಚಳ ಸಾಧ್ಯತೆ: ನಾರಾಯಣಮೂರ್ತಿ

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗೆ ಭಾರತದಲ್ಲಿ ಹೆಚ್ಚುತ್ತಿರುವ ಹವಾಮಾನ ಬದಲಾವಣೆಯ ಬಗ್ಗೆ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ. ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಂತಹ ಪ್ರಮುಖ ನಗರಗಳಿಗೆ ಸಾಮೂಹಿಕ ವಲಸೆಯನ್ನು ಪ್ರಚೋದಿಸಬಹುದು ಎಂದು ಎಚ್ಚರಿಸಿದ್ದಾರೆ. ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಭಾರತದಂತಹ ದೇಶಗಳು, ಹಲವಾರು ಆಫ್ರಿಕನ್ ರಾಷ್ಟ್ರಗಳು ವಿಶೇಷವಾಗಿ ಏರುತ್ತಿರುವ ತಾಪಮಾನದ ಪರಿಣಾಮಗಳಿಗೆ ಗುರಿಯಾಗುತ್ತವೆ ಎಂದು ತಿಳಿಸಿದರು.

ಹವಾಮಾನ ಬದಲಾವಣೆ: ಬೆಂಗಳೂರು, ಪುಣೆಗೆ ಸಾಮೂಹಿಕ ವಲಸೆ ಹೆಚ್ಚಳ ಸಾಧ್ಯತೆ: ನಾರಾಯಣಮೂರ್ತಿ
ನಾರಾಯಣಮೂರ್ತಿ Image Credit source: Exchange4Media
Follow us
ನಯನಾ ರಾಜೀವ್
|

Updated on: Dec 25, 2024 | 10:01 AM

ಈಗಾಗಲೇ ಸಂಚಾರ ದಟ್ಟಣೆ ಹಾಗೂ ಮಾಲಿನ್ಯದಿಂದಾಗಿ ನಗರದಲ್ಲಿ ವಾಸಿಸುವುದು ಕಷ್ಟಕರವಾಗಿದೆ. ಭವಿಷ್ಯದಲ್ಲಿ ಬೆಂಗಳೂರು, ಪುಣೆ, ಹೈದರಾಬಾದ್​ನಂತಹ ದೊಡ್ಡ ನಗರಗಳಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಉದ್ಯಮಿ ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.

ಈ ಸವಾಲನ್ನು ಎದುರಿಸಲು ಮತ್ತು ಅಂತಹ ವಲಸೆಯನ್ನು ತಡೆಯಲು ಕಾರ್ಪೊರೇಟ್ ಜಗತ್ತು, ರಾಜಕಾರಣಿಗಳು ಮತ್ತು ಅಧಿಕಾರಶಾಹಿಗಳ ನಡುವಿನ ಸಹಯೋಗದ ಅಗತ್ಯವನ್ನು ಅವರು ಒತ್ತಿ ಹೇಳಿದರು. 2030 ರ ವೇಳೆಗೆ ಗಮನಾರ್ಹ ಪ್ರಗತಿಯನ್ನು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಒಂದು ಮುನ್ಸೂಚನೆಯೆಂದರೆ 20-25 ವರ್ಷಗಳಲ್ಲಿ ಭಾರತದಲ್ಲಿ ಕೆಲವು ಸ್ಥಳಗಳು ವಾಸಿಸಲು ಯೋಗ್ಯವಾಗಿರುವುದಿಲ್ಲ.ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಲ್ಲಿ ಸಂಚಾರ ದಟ್ಟಣೆ ಮತ್ತು ಮಾಲಿನ್ಯದಂತಹ ಸಮಸ್ಯೆಗಳಿಂದಾಗಿ ವಾಸಿಸುವುದು ತುಂಬಾ ಕಷ್ಟಕರವಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹವಾಮಾನ ಬದಲಾವಣೆ ಸಮಸ್ಯೆ ವಿರುದ್ಧ ಹೋರಾಟ; ಯಾರದ್ದು ಯಾವ ಹೊಣೆ? ಗ್ಲೋಬಲ್ ಸಮಿಟ್​ನಲ್ಲಿ ತಜ್ಞರಿಂದ ಗಂಭೀರ ಚರ್ಚೆ

ಹವಾಮಾನ ಬದಲಾವಣೆಯನ್ನು ಪರಿಹರಿಸಲು ಮತ್ತು ಗ್ರಾಮೀಣದಿಂದ ನಗರಕ್ಕೆ ವಲಸೆ ಹೋಗುವುದನ್ನು ತಡೆಯಲು ಕಾರ್ಪೊರೇಟ್ ವಲಯ, ರಾಜಕಾರಣಿಗಳು ಮತ್ತು ಅಧಿಕಾರಶಾಹಿಗಳ ನಡುವೆ ತುರ್ತು ಸಹಯೋಗದ ಅಗತ್ಯವನ್ನು ಮೂರ್ತಿ ಒತ್ತಿ ಹೇಳಿದರು.

ಎಲ್ಲಾ ಪ್ರಮುಖ ಭಾರತೀಯ ನಗರಗಳು ತೀವ್ರತೆಯ ವಿವಿಧ ಹಂತಗಳಲ್ಲಿ ಒಂದೇ ರೀತಿಯ ಸವಾಲುಗಳನ್ನು ಎದುರಿಸುತ್ತಿವೆ. ಹೀಗಾಗಿ ತಪ್ಪಿಸಿಕೊಳ್ಳಲು ಬೇರೆ ಸ್ಥಳವಿಲ್ಲದೇ, ನಾವು ಅವರ ಸ್ವಂತ ನಗರಗಳಲ್ಲಿ ಈ ಸಮಸ್ಯೆಗಳನ್ನು ನಿಭಾಯಿಸಬೇಕು ಎಂದಿದ್ದಾರೆ. ರಾಜ್ಯಗಳ ಗ್ರಾಮೀಣ ಭಾಗಗಳಿಂದ ಬೆಂಗಳೂರು, ಬಹುಶಃ ಪುಣೆ, ಬಹುಶಃ ಹೈದರಾಬಾದ್‌ನಂತಹ ವಾಸಯೋಗ್ಯ ಸ್ಥಳಗಳಿಗೆ ಸಾಮೂಹಿಕ ವಲಸೆ ಸಂಭವಿಸುವ ಸಾಧ್ಯತೆಯಿದೆ ಎಂದು ಪುಣೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂರ್ತಿ ಹೇಳಿದರು.

ಬೆಂಗಳೂರಿನಲ್ಲಿ ತಂಪಾದ ಹವಾಮಾನ, ಐಟಿ-ಬಿಟಿ, ರಿಯಲ್ ಎಸ್ಟೇಟ್, ಅಪರಾಧಗಳ ಪ್ರಮಾಣ ಕಡಿಮೆ, ಸುರಕ್ಷತೆ ಈ ಎಲ್ಲಾ ದೃಷ್ಟಿಯಿಂದ ಬೆಂಗಳೂರಿಗೆ ಬರುತ್ತೇವೆ ಎನ್ನುವವರ ಸಂಖ್ಯೆ ಹೆಚ್ಚಿದೆ. ಮೆಟ್ರೋ, ಸುರಂಗ ಮಾರ್ಗಗಳ ನಿರ್ಮಾಣದತ್ತ ಸರ್ಕಾರದ ಗಮನವಿದೆ.

ಬೆಂಗಳೂರನ್ನು ಬಡವರು ಕೂಡ ಬದುಕಲು ಯೋಗ್ಯವಾದ ನಗರವನ್ನಾಗಿ ಮಾಡಲು ಅವರಿಗೆ ಬೇಕಾದ ವಸತಿ, ಶಿಕ್ಷಣ, ಆರೋಗ್ಯದಂತಹ ಮೂಲ ಸೌಕರ್ಯವನ್ನು ಒದಗಿಸಲಾಗುತ್ತಿದೆ, ಹಾಗಾಗಿ ಒಂದೋ ನಮ್ಮದೇ ಗ್ರಾಮೀಣ ಭಾಗಗಳಿಂದ ವಲಸೆ ಬರುವವರು ಸಾಕಷ್ಟು ಮಂದಿ ಇದ್ದಾರೆ, ಜತೆಗೆ ಹವಾಮಾನ ಬದಲಾವಣೆಯಿಂದ ಬೇಸತ್ತು ಬೇರೆ ರಾಜ್ಯಗಳಿಂದ ವಲಸೆ ಬರುವವರ ಸಂಖ್ಯೆಯು ದುಪ್ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್