AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಬೊಮ್ಮಾಯಿ, ನಾಳೆಯೊಳಗೆ ಆದೇಶ ಆಗುತ್ತೆ ಎಂದ ಸಿಎಂ

ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳದ ಬೆನ್ನಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ.

ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಬೊಮ್ಮಾಯಿ, ನಾಳೆಯೊಳಗೆ ಆದೇಶ ಆಗುತ್ತೆ ಎಂದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Dec 19, 2022 | 5:52 PM

Share

ಬೆಳಗಾವಿ: ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ (weavers) ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಒದಗಿಸಿದ ಬೆನ್ನಲ್ಲೇ ನೇಕಾರರಿಗೆ ಮತ್ತೊಂದು ಶುಭ ಸುದ್ದಿ ನೀಡಿದ ಸಿಎಂ ಬೊಮ್ಮಾಯಿ(Basavaraj Bommai), ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ (Free Electricity )ಪೂರೈಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ

ಬಹುದಿನಗಳ ಬೇಡಿಕೆ ಈಡೇರಿಸಿದ್ದಕ್ಕಾಗಿ ನೇಕಾರ ಸಮುದಾಯ ಸುವರ್ಣ ಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಇಂದು (ಡಿಸೆಂಬರ್ 19) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನಿಸಿ ಗೌರವಿಸಿತು. ಈ ವೇಳೆ ಮಾತನಾಡಿದ ಬೊಮ್ಮಾಯಿ, ನೇಕಾರರಿಗೆ ತಮಿಳುನಾಡಿನ ರೀತಿ ಉಚಿತ ವಿದ್ಯುತ್ ಪೂರೈಸುತ್ತೇವೆ. ಅಲ್ಲಿ (ತಮಿಳುನಾಡು) ಎಷ್ಟು ಫ್ರೀ ಕೊಡುತ್ತಿದೆಯೋ ಅಷ್ಟನ್ನು ನಾವು ಇಲ್ಲಿ ಕೊಡುತ್ತೇವೆ. ಯುನಿಟ್ ಗೆ 80 ರೂ ಇದ್ದು, ಅದನ್ನ 40 ರೂ.ಗೆ ಇಳಿಸುತ್ತೇವೆ. ನಿಮ್ಮ ಪ್ರಮುಖ ಬೇಡಿಕೆಗಳಿಗೆ ನಾನು ಈಗಾಗಲೇ ಒಪ್ಪಿಗೆ ಕೊಟ್ಟಿದ್ದೇನೆ ಎಂದು ಹೇಳಿದರು.

ನಮ್ಮ ಮಕ್ಕಳಿಗೆ ಸ್ಕಾಲರ್‌ಶಿಪ್‌ ಕೊಡಿ ಎಂದು ನೀವು ಕೇಳಿರಲಿಲ್ಲ. ಆದ್ರೆ ನಾನು ನೇಕಾರರ ಮಕ್ಕಳಿಗೂ ವಿದ್ಯಾನಿಧಿ ವಿಸ್ತರಣೆ ಮಾಡಿದ್ದೇನೆ. ಜನವರಿಯೊಳಗೆ ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಯಾಗುತ್ತೆ. ನೇಕಾರರಿಗೆ ಘೋಷಿಸಿದ ಯೋಜನೆ ತಕ್ಷಣ ಜಾರಿಗೆ ಆದೇಶ ಪ್ರಕಟಿಸ್ತೇನೆ. ನಮ್ಮ‌ ಸರ್ಕಾರ ನೇಕಾರರಿಗೆ ಸ್ಪಂದಿಸದಂತೆ ಯಾವ ಸರ್ಕಾರ ಸ್ಪಂದಿಸಿಲ್ಲ ಎಂದರು.

5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ

ಕೈಮಗ್ಗ ನೇಕಾರರಿಗೆ (Weavers) ತಲಾ 5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆ (Samman Scheme) ಗೆ ನಾಳೆ (ಡಿ. 16) ಚಾಲನೆ ದೊರೆಯಲಿದೆ. ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು ಅವರ ಶ್ರಮವನ್ನು ಪರಿಗಣಿಸಿ ಹಾಗೂ ಕೋವಿಡ್-19 ಮಹಾಮಾರಿ ಮತ್ತು ಆರ್ಥಿಕ ಹಿನ್ನೆಡೆಯಿಂದ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ 2020-21 ನೇ ಸಾಲಿನಿಂದ ಅನ್ವಯವಾಗುವಂತೆ, ‘ನೇಕಾರ ಸಮ್ಮಾನ್’ ಎಂಬ ಹೊಸ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು.

2021-22 ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ 49,544 ನೇಕಾರರಿಗೆ ರೂ.990.88 ಲಕ್ಷಗಳನ್ನು ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗಿದೆ. 2022-23 ನೇ ಸಾಲಿನ ಆಯವ್ಯಯದನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ “ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ರೂ.2,000/- ಗಳಿಂದ ರೂ.5,000/- ಗಳಿಗೆ ಹೆಚ್ಚಿಸಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:32 pm, Mon, 19 December 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ