Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನ 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ

ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಭಾಗವಹಿಸಿದ ಅವರು ಈ ಘೋಷಣೆ ಮಾಡಿದರು.

ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನ 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: guruganesh bhat

Updated on:Oct 01, 2021 | 5:09 PM

ಬೆಂಗಳೂರು: ವೃದ್ಧಾಶ್ರಮಗಳಿಗೆ ಸರ್ಕಾರದಿಂದ ಒದಗಿಸುವ ಅನುದಾನವನ್ನು25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಭಾಗವಹಿಸಿದ ಅವರು ಈ ಘೋಷಣೆ ಮಾಡಿದರು. 14567 ಹಿರಿಯ ನಾಗರಿಕರ ಸಹಾಯವಾಣಿಯಾಗಿದೆ. ಸರ್ಕಾರದ ಸೌಲಭ್ಯ, ಪಿಂಚಣೆ, ಪೋಷಕರ ಪಾಲನೆ ಪೋಷಣೆ ಅವರ ಯೋಗಕ್ಷೇಮದ ಬಗ್ಗೆ ಈ ಸಂಖ್ಯೆಯ ಮೂಲಕ ವಿಚಾರಿಸಬಹುದು. 35 ವೃದ್ಧಾಶ್ರಮಗಳನ್ನು ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ವಯಸ್ಸಿನಿಂದ ಅನುಭವದಿಂದ ನಡವಳಿಕೆಯಿಂದ ನಿರ್ಧಾರವಾಗುತ್ತದೆ. ಮಾನಸಿಕವಾಗಿ ನಾವೂ ಗಟ್ಟಿಯಿದ್ದರೆ ಹಿರಿತನ ನಿರ್ಧಾರವಾಗುತ್ತದೆ. ಸಮಾಜಕ್ಕೆ ಇನ್ನೂ ಕೊಡುಗೆ ಕೊಡಬಹುದು ಅನ್ನುವ ಮನಸಿದ್ದರೆ ನಮ್ಮ ಹಿರಿತನವನ್ನು ಯಶಸ್ವಿಯಾಗಿ ಕಳೆಯಬಹುದು. ಕುಟುಂಬ, ಸರ್ಕಾರ, ವ್ಯವಸ್ಥೆ, ಸಮಾಜ ಹಿರಿಯರ ಜೊತೆಗಿರಬೇಕು. ಹಿರಿಯರಾಗಿದ್ದ ಸಿ.ಎಂ.ಉದಾಸಿಯವರು ಇತ್ತೀಚೆಗೆ ನಿಧನರಾದರು. ಅವರ ವಯಸ್ಸು ಕೇಳಿದ್ರೆ, ಏ ತಮ್ಮ ಹಾಗೆಲ್ಲ ಕೇಳಬಾರದು ಅಂತಿದ್ದರು. ನಾನು ಮಾಜಿ ಯುವಕ, ನೀನು ಭಾವಿ ಮುದುಕ ಎಂದು ಹೇಳುತ್ತಿದ್ದರು. ಅದು ಒಳ್ಳೆಯ ಮನಸ್ಥಿತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆನಪುಗಳನ್ನು ಮೆಲುಕುಹಾಕಿದರು.

ಹಿರಿಯ ವಯಸ್ಸಿನಲ್ಲಿ ಹಾಸ್ಯ ಬಹಳ ಮುಖ್ಯ. ಅತ್ಯಂತ ಸ್ಥಿತಪ್ರಜ್ಞೆಯಿಂದಿದ್ದರೆ ಜೀವನವೇ ಯಶಸ್ಸಿನ ಗುಟ್ಟು. ಸಂತೃಪ್ತಿಯ ಭಾವ, ಆತ್ಮ ಚೈತನ್ಯ ಎಲ್ಲರಿಗೂ ಬಹಳ ಮುಖ್ಯ. ಕರ್ನಾಟಕದಲ್ಲಿ 45 ಲಕ್ಷ ಜನ ಹಿರಿಯ ನಾಗರಿಕರಿದ್ದಾರೆ. ಅವರೆಲ್ಲ ಆರೋಗ್ಯವಾಗಿರಬೇಕು ಎನ್ನುವುದು ನನ್ನ ಆಶಯ. ಪ್ರತಿಯೊಬ್ಬರಲ್ಲೂ ಚಿಕ್ಕ ಮಕ್ಕಳ ಭಾವವಿದೆ. ಹಿರಿಯರಿಗೆ ನಾವು ಗೌರವ ಕೊಡಬೇಕು, ನೆರವಾಗಬೇಕು. ಸಮಾಜದಲ್ಲಿ ಎಲ್ಲವನ್ನೂ ಪಡೆದುಕೊಂಡು ಮುದುಕರಾಗುತ್ತೇವೆ. ಅನುಭವದ ಭಂಡಾರವನ್ನು ಒಳ್ಳೆಯದಕ್ಕೆ ಧಾರೆ ಎರೆಯಬೇಕು. ರಾಜ್ಯ ಸರ್ಕಾರ ಸಂವೇದನಾಶೀಲತೆಯಿಂದ ಸ್ಪಂದಿಸುತ್ತದೆ. ಹಿರಿಯರಿಗಾಗಿ ಸರ್ಕಾರ ಕಾರ್ಯಕ್ರಮ ಆಯೋಜಿಸುತ್ತದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: 

Dasara 2021: ಮೈಸೂರು ದಸರಾ ಎಷ್ಟೊಂದು ಸುಂದರಾ..ಇಲ್ಲಿದೆ 7 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿ

ಅಕ್ಟೋಬರ್ 8ರಿಂದ 18ರವರೆಗೆ ಮುರುಘಾ ಮಠದಲ್ಲಿ ಶರಣ ಸಂಸ್ಕೃತಿ ಉತ್ಸವ

Published On - 3:31 pm, Fri, 1 October 21

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ