AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನದಿ ಜೋಡಣೆಗೆ ಬಸವರಾಜ ಬೊಮ್ಮಾಯಿ ವಿರೋಧ! ದೆಹಲಿಯಲ್ಲಿ ಸಿಎಂ ಹೇಳಿದ್ದೇನು?

ಮಹದಾಯಿ ಬಗ್ಗೆ ಚರ್ಚೆಯಾಗಿದೆ. ಕೋರ್ಟ್​ನಲ್ಲಿ ಬೇಗ ವಿಚಾರಣೆ ನಡೆಯಬೇಕಿದೆ. ಡಿಪಿಆರ್ ನೀಡಿದ್ದೇವೆ, ಕೆಲವು ಸ್ಪಷ್ಟನೆ ಕೇಳಿದ್ದರು. ನೀಡಿದ್ದೇವೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಕೆನಾಲ್ ರೆಡಿಯಾಗಿದೆ, ತಿರುವಿಗೆ ಅವಕಾಶ ಸಿಗಲಿದೆ ಎಂದು ಅಭಿಪ್ರಾಯಟ್ಟರು.

ನದಿ ಜೋಡಣೆಗೆ ಬಸವರಾಜ ಬೊಮ್ಮಾಯಿ ವಿರೋಧ! ದೆಹಲಿಯಲ್ಲಿ ಸಿಎಂ ಹೇಳಿದ್ದೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
TV9 Web
| Updated By: sandhya thejappa|

Updated on: Feb 08, 2022 | 10:46 AM

Share

ದೆಹಲಿ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗೋದಾವರಿ, ಕೃಷ್ಣಾ, ಪೆನ್ನಾರ್ ನದಿ (River) ಜೋಡಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ, ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ನಮ್ಮ ಪಾಲಿನ ನೀರು ಹಂಚಿಕೆಯಾಗುವವರೆಗೆ ವಿರೋಧವಿದೆ. ಎಲ್ಲಿಯವರೆಗೆ ನಮ್ಮ ಪಾಲಿನ ನೀರಿನ ಬಗ್ಗೆ ಹಂಚಿಕೆ ಅಂತಿಮವಾಗುದಿಲ್ಲವೋ, ಅಲ್ಲಿಯವರೆಗೆ ನಮ್ಮ ವಿರೋಧ ಇರುತ್ತದೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಜತೆಯೂ ಚರ್ಚಿಸಿದ್ದೇನೆ. ಅದಕ್ಕೆ ಅವರು ಎರಡು ರಾಜ್ಯಗಳು ಒಪ್ಪಿದರೆ ಮಾತ್ರ ಇದು ಸಾಧ್ಯ ಎಂದಿದ್ದಾರೆ ಅಂತ ತಿಳಿಸಿದರು.

ಮುಂದುವರಿದು ಮಾತನಾಡಿದ ಬೊಮ್ಮಾಯಿ, ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷ್ಣಾ ನ್ಯಾಯಾಧಿಕರಣದ ಆದೇಶ ಅಧಿಸೂಚನೆಗೆ ಮನವಿ ಮಾಡಲಾಗಿದೆ. ಸುಪ್ರೀಂಕೋರ್ಟ್​ನಲ್ಲಿ ಅಧಿಸೂಚನೆ ಹೊರಡಿಸುವ ಬಗ್ಗೆ ವಿಚಾರಣೆಗೆ ನ್ಯಾಯಾಧೀಶರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಓಪನ್ ಕೋರ್ಟ್​ನಲ್ಲಿ ಮೆನ್ಷನ್​ಗೆ ನಿರ್ಧಾರ ಮಾಡಲಾಗುವುದು. ಮೇಕೆದಾಟು ವಿಚಾರವಾಗಿ ನಮ್ಮ ನಿಲುವು ಸ್ಪಷ್ಟ. ತಮಿಳುನಾಡಿನ ಗುಂಡಾರು ವೈಗಾರ್ ಯೋಜನೆಗೆ ವಿರೋಧವಿದೆ. ಹೈಡ್ರೋ ಪರರ್ ಯೋಜನೆಗೂ ವಿರೋಧ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಮಹದಾಯಿ ಬಗ್ಗೆ ಚರ್ಚೆಯಾಗಿದೆ. ಕೋರ್ಟ್​ನಲ್ಲಿ ಬೇಗ ವಿಚಾರಣೆ ನಡೆಯಬೇಕಿದೆ. ಡಿಪಿಆರ್ ನೀಡಿದ್ದೇವೆ, ಕೆಲವು ಸ್ಪಷ್ಟನೆ ಕೇಳಿದ್ದರು. ನೀಡಿದ್ದೇವೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ, ಕೆನಾಲ್ ರೆಡಿಯಾಗಿದೆ, ತಿರುವಿಗೆ ಅವಕಾಶ ಸಿಗಲಿದೆ ಎಂದು ಅಭಿಪ್ರಾಯಟ್ಟರು.

ಅಮಿತ್ ಶಾ ಅವರನ್ನು ಅಲ್ಪ ಸಮಯದಲ್ಲಿ ಭೇಟಿ ಮಾಡಿದ್ದೇನೆ. ಅಗ್ರೆಸ್ಸಿವ್ ಆಗಿ ಕೆಲಸ ಮಾಡುವಂತೆ ಹೇಳಿದ್ದಾರೆ. ಬಜೆಟ್ ಮತ್ತು ಕೆಲಸ ವಿಚಾರದಲ್ಲಿ ಅಗ್ರೆಸ್ಸಿವ್ ಇರಲಿ ಎಂದಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ನಡ್ಡಾ ಅವರನ್ನು ಭೇಟಿ ಮಾಡುವಂತೆ ಹೇಳಿದ್ದಾರೆ. ಇಂದು ನಡ್ಡಾ ಅವರನ್ನು ಭೇಟಿಯಾಗುತ್ತೇನೆ. ನಡ್ಡಾ ಅವರನ್ನು ಭೇಟಿ ಮಾಡಿದ ಮೇಲೆ ಗೊತ್ತಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ

ಸ್ಯಾಂಡಲ್​ವುಡ್​ನಲ್ಲಿ ಸಖತ್​ ಬ್ಯುಸಿ ಆದ ಧರ್ಮಣ್ಣಗೆ ಹುಟ್ಟು ಹಬ್ಬದ ಸಂಭ್ರಮ

ದಂಡುಪಾಳ್ಯ ಸಿನಿಮಾ ಎಫೆಕ್ಟ್! ದಂಡುಪಾಳ್ಯದವರಿಗೆ ಮನೆ ಬಾಡಿಗೆ ನೀಡಲು ನಗರ ಪೊಲೀಸರ ಬಳಿ ಸಲಹೆ ಕೇಳಿದ ಮನೆ ಮಾಲೀಕ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ