AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM Basavaraj Bommai: ರಾಜ್ಯದಲ್ಲಿ ಹೆಚ್ಚಾದ ಕೊರೊನಾ ಸೋಂಕು; ಇಂದು ಸಂಜೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ

ರಾಜ್ಯದ ಕಾಲೇಜು- ಹಾಸ್ಟಲ್​ಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಸಂಬಂಧ ಇಂದು ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಅಲ್ಲದೇ ವಿದೇಶದಲ್ಲಿ ಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಆ ಕುರಿತೂ ಮಹತ್ವದ ಚರ್ಚೆ ನಡೆಯಲಿದೆ.

CM Basavaraj Bommai: ರಾಜ್ಯದಲ್ಲಿ ಹೆಚ್ಚಾದ ಕೊರೊನಾ ಸೋಂಕು; ಇಂದು ಸಂಜೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 27, 2021 | 12:07 PM

Share

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಶಾಲೆಗಳು, ಹಾಸ್ಟಲ್​ಗಳಲ್ಲಿ ಕೊವಿಡ್ ಹೆಚ್ಚಾಗುತ್ತಿರುವ ಸಂಬಂಧ ಆತಂಕ ವ್ಯಕ್ತಪಡಿಸಿದ್ದಾರೆ. ‘‘ಶಾಲೆಗಳು, ಹಾಸ್ಟೆಲ್‌ಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಧಾರವಾಡ ಸೇರಿ ರಾಜ್ಯದ ಕೆಲವೆಡೆ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ಇಂದು ಸಂಜೆ ಕೊವಿಡ್ ತಜ್ಞರು, ಅಧಿಕಾರಿಗಳ ಜತೆ ಸಭೆ ಮಾಡುತ್ತಿದ್ದೇನೆ’’ ಎಂದು ಬೊಮ್ಮಾಯಿ ನುಡಿದಿದ್ದಾರೆ.

ಸಭೆ ಬಳಿಕ ಮುಂದಿನ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತೇವೆ ಮತ್ತು ಜನರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸುತ್ತೇವೆ. ಅಲ್ಲದೇ, ರಾಜ್ಯದಲ್ಲಿ ತಡ ಮಾಡದೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಕೊರೊನಾ ನಿಯಂತ್ರಣ, ಲಸಿಕೆ ಸಂಬಂಧ ಪ್ರಮುಖವಾಗಿ ಚರ್ಚೆಯಾಗಲಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ.

ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.

ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವುದರ ಕುರಿತೂ ಮಹತ್ವದ ಚರ್ಚೆ ನಡೆಯಲಿದೆ. ಈ ಸಂಬಂಧ ಸಭೆಯಲ್ಲಿ ಮಹತ್ವದ ಕೆಲ ನಿರ್ಧಾರ ಪ್ರಕಟ ಮಾಡುವ ಸಾಧ್ಯತೆ ಇದೆ. ಏರ್ ಪೋರ್ಟ್ ಹಾಗೂ ರಾಜ್ಯದ ಗಡಿ ಭಾಗದಲ್ಲಿ ತೆಗೆದುಕೊಳ್ಳಬೇಕಾದ ‌ಬಿಗಿ ಕ್ರಮಗಳು, ಶಾಲೆಗಳಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ವಿದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡುವುದು, ಗಡಿ ಭಾಗದಲ್ಲಿ ರಾಜ್ಯಕ್ಕೆ ಬಂದು ಹೋಗುವವರ ಮೇಲೆ ಯಾವ ರೀತಿ ನಿಗಾ ವಹಿಸಬೇಕು… ಹೀಗೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದ್ದು, ನಂತರ ನಿಯಮಾವಳಿಗಳನ್ನು ಘೋಷಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:

ಬೆಂಗಳೂರಿನಲ್ಲಿ ಕೂಲ್ ಕೂಲ್ ವೆದರ್; ಎರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಡ್ರಗ್ಸ್​ ಕೇಸ್​ನಲ್ಲಿ ಸಿಕ್ಕಿಬಿದ್ದ ಮಗನ ಜತೆ ಹೆಮ್ಮೆಯಿಂದ ಪೋಸ್​ ಕೊಟ್ಟ ತಂದೆ; ನಗೆಪಾಟಲಿನ ವಿಡಿಯೋ ವೈರಲ್​

Published On - 11:40 am, Sat, 27 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ