AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಎದುರಿಸಿದ ರೀತಿ ಒಮಿಕ್ರಾನ್ ನಿಭಾಯಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿಗೆ ಹಿಂದಿರುಗಿದ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೊವಿಡ್ ಎದುರಿಸಿದ ರೀತಿ ಒಮಿಕ್ರಾನ್ ನಿಭಾಯಿಸುತ್ತೇವೆ: ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Dec 02, 2021 | 9:20 PM

Share

ದೆಹಲಿ: ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ರೂಪಾಂತರದ ಸೋಂಕು ದೃಢಪಟ್ಟಿರುವ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಒಮಿಕ್ರಾನ್ ಹರಡಿದ್ದರೂ ದೊಡ್ಡಮಟ್ಟದ ಆತಂಕವಿಲ್ಲ. ಕೇಂದ್ರ ಆರೋಗ್ಯ ಸಚಿವರೊಂದಿಗೆ ಈ ಕುರಿತು ಸ್ವತಃ ಚರ್ಚಿಸಿದ್ದೇನೆ. ಬೆಂಗಳೂರಿಗೆ ಹಿಂದಿರುಗಿದ ತಜ್ಞರ ಜತೆ ತುರ್ತು ಸಭೆ ಮಾಡಿ ಚರ್ಚೆ ನಡೆಸುತ್ತೇನೆ. ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ಕರ್ನಾಟಕದ ಒಮಿಕ್ರಾನ್ ಸ್ಥಿತಿಗತಿಯ ಬಗ್ಗೆ ನಾಳೆ ಸಂಪೂರ್ಣ ವಿವರ ನೀಡುವುದಾಗಿ ಹೇಳಿದ್ದಾರೆ. ಕೊವಿಡ್ ಎದುರಿಸಿದ ರೀತಿಯಲ್ಲಿಯೇ ಒಮಿಕ್ರಾನ್ ಪರಿಸ್ಥಿತಿಯನ್ನೂ ನಿಭಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್ ದೃಢಪಟ್ಟಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾವುದೇ ವಿವರ ಸಿಕ್ಕಿಲ್ಲ. ನಮ್ಮ ಆರೋಗ್ಯ ಸಚಿವರು ಮತ್ತು ಮುಖ್ಯ ಕಾರ್ಯದರ್ಶಿಯೊಂದಿಗೆ ನಾನು ಚರ್ಚಿಸಿದೆ. ಕೇಂದ್ರ ಸರ್ಕಾರದಿಂದ ಅಗತ್ಯ ಮಾಹಿತಿ ಪಡೆಯಲು ಸೂಚಿಸಿದ್ದೇನೆ. ನಾಳೆ (ನ.3) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿ ತಜ್ಞರ ಜತೆ ತುರ್ತು ಸಭೆ ನಡೆಯಲಿದೆ. ಹೈರಿಸ್ಕ್ ದೇಶಗಳ ಪ್ರಯಾಣಿಕರಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು. ವಿಮಾನ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ನುಡಿದರು.

ಒಮಿಕ್ರಾನ್ ಪ್ರಕರಣಗಳ ಕುರಿತು ಮಾಹಿತಿ ನೀಡಿರುವ ಕೇಂದ್ರ ಸರ್ಕಾರವು, ಕೊರೊನಾ ರೂಪಾಂತರದ ಸೋಂಕು ಪತ್ತೆಯಾಗಿರುವ ಇಬ್ಬರೂ ಕರ್ನಾಟಕದವರು ಎಂದಿದೆ. ಕೇಂದ್ರ ಸರ್ಕಾರದ ಪ್ರಮುಖರು ಮತ್ತು ತಜ್ಞರ ಜೊತೆ ಈ ಸಂಬಂಧ ಚರ್ಚೆ ಮಾಡಬೇಕಿದೆ. ಪೂರ್ಣ ವರದಿ ಬಂದ ಬಳಿಕ ಪರಿಸ್ಥಿತಿಯ ಯಥಾಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿ ಲಭ್ಯವಾಗಲಿದೆ. ವಿಮಾನ ನಿಲ್ದಾಣಗಳಲ್ಲಿ ಸೋಂಕಿತರ ತಪಾಸಣೆ ಮತ್ತು ಕ್ವಾರಂಟೈನ್ ಬಗ್ಗೆ ಮತ್ತಷ್ಟು ಮಾಹಿತಿ ಪಡೆದುಕೊಳ್ಳುವ ಅವಶ್ಯಕತೆ ಇದೆ. ಈ ವಿಚಾರದ ಬಗ್ಗೆ ತಜ್ಞರ ಜೊತೆ ಮಾತನಾಡಿ ತೀರ್ಮಾನ ಮಾಡಲಾಗುತ್ತದೆ ಎಂದರು. ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ನನ್ನ ಆತ್ಮೀಯರು. ಬೆಂಗಳೂರಿಗೆ ತೆರಳಿದ ಬಳಿಕ ಅವರೊಂದಿಗೆ ಮಾತನಾಡುತ್ತೇನೆ ಎಂದರು.

ಕರ್ನಾಟಕದಲ್ಲಿ ಕಠಿಣ ನಿಯಮ ಜಾರಿ ಸಾಧ್ಯತೆ ಕರ್ನಾಟಕದ ಇಬ್ಬರಿಗೆ ಕೊರೊನಾ ವೈರಾಣುವಿನ ಒಮಿಕ್ರಾನ್​​ ರೂಪಾಂತರಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಕಠಿಣ ಕಾನೂನುಗಳು​ ಜಾರಿಯಾಗುವ ಸಾಧ್ಯತೆಯಿದೆ ಎಂಬ ಮಾತುಗಳು ಪ್ರಬಲವಾಗಿ ಕೇಳಿಬರುತ್ತಿವೆ. ಒಮಿಕ್ರಾನ್​ ಕೇಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆಯು ನಿಯಮಗಳನ್ನು ರೂಪಿಸಲು ಸಿದ್ಧತೆ ಆರಂಭಿಸಿದೆ. ತಜ್ಞರ ಸಲಹೆ ಪಡೆದು ಮತ್ತೆ ರಾಜ್ಯದಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ಸಾಧ್ಯತೆಯಿದೆ. ಈ ಹಿಂದೆ ನಡೆದಿದ್ದ ತಜ್ಞರ ಸಮಿತಿ ಸಭೆಗಳಲ್ಲಿ ಒಮಿಕ್ರಾನ್​ ಪತ್ತೆಯಾದರೆ ಮತ್ತೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸಲಹೆ ಮಾಡಿದ್ದರು.

ಒಮಿಕ್ರಾನ್ ರೂಪಾಂತರದ ಸೋಂಕು ಪತ್ತೆ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸಚಿವರಿಗೆ ಮಾಹಿತಿ ಸಂಗ್ರಹಿಸಿದರು. ಸಮಗ್ರ ಮಾಹಿತಿ ಪಡೆದುಕೊಂಡ ನಂತರ ಸರ್ಕಾರವು ತೆಗೆದುಕೊಳ್ಳಲಿರುವ ಮುಂಜಾಗ್ರತಾ ಕ್ರಮದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಲಿದ್ದಾರೆ.

ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ ಕುರಿತು ಪ್ರತಿಕ್ರಿಯಿಸಿದರು ಸಚಿವ ಡಾ.ಅಶ್ವತ್ಥ್ ನಾರಾಯಣ, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಿಂದ ಸಂಗ್ರಹಿಸಿದ ಮಾದರಿಯನ್ನು ಜಿನೋಮಿಕ್​ ಸೀಕ್ವೆನ್​ಗೆ ಕಳಿಸಲಾಗಿತ್ತು. ಇದೀಗ ಸೋಂಕಿತರ ಸಂಪರ್ಕಕ್ಕೆ ಬಂದಿದ್ದವರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಅಂಥವರನ್ನು ಗುರುತಿಸಿ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು. ಒಮಿಕ್ರಾನ್ ವೈರಸ್​ ಕುರಿತು ವಿಶ್ವದ ಹಲವು ದೇಶಗಳಲ್ಲಿ ಅಧ್ಯಯನ ಮಾಡಲಾಗಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಒಮಿಕ್ರಾನ್​ ವೇಗವಾಗಿ ಹರಡುತ್ತೆ, ಜೀವಕ್ಕೆ ಅಪಾಯವಿಲ್ಲ. ಒಮಿಕ್ರಾನ್​ ವೈರಸ್​ ಕುರಿತು ಸರ್ಕಾರ ಕಟ್ಟೆಚ್ಚರ ವಹಿಸಿದೆ ಎಂದು ನುಡಿದರು.

ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದಿದ್ದ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್​ಗಳನ್ನು ಐಸೊಲೇಟ್ ಮಾಡಲಾಗಿದೆ. ವಿಶ್ವದ ಹಲವು ದೇಶಗಳಲ್ಲಿ ಈಗಾಗಲೇ ಈ ಸೋಂಕು ಕಾಣಿಸಿಕೊಂಡಿದೆ, ಹಲವು ಅಧ್ಯಯನಗಳೂ ನಡೆದಿವೆ. ದೈಹಿಕವಾಗಿ ಸೋರ್‌ನೆಸ್, ಮಾಂಸಖಂಡಗಳ ನೋವು ಕಾಣಿಸಿಕೊಳ್ಳಲಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಕ್ರಮ ತೆಗೆದುಕೊಂಡಿದ್ದೇವೆ. ಈ ಸೋಂಕು ವೇಗವಾಗಿ ಹರಡುತ್ತದೆ. ಆದರೆ ಜೀವಕ್ಕೆ ಅಪಾಯ ಇಲ್ಲ. ಸರ್ಕಾರ ಕಟ್ಟೆಚ್ಚರ ವಹಿಸಿದೆ. ತಪಾಸಣೆ ಆಗಿದ್ದರೂ ರಿಪೋರ್ಟ್ ಬರುವವರೆಗೂ ಯಾರನ್ನೂ ಜನರೊಂದಿಗೆ ಬೆರೆಯಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವಿಧಾನಸೌಧ‌ದ ಸಚಿವಾಲಯದಿಂದಲೂ ಈ ಬಾರಿ ಅಧಿವೇಶನ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಹ ಈ ಬಗ್ಗೆ ಗಮನ ಹರಿಸೋಣ ಎಂದಿದ್ದಾರೆ. ಇದು ಸರ್ಕಾರದ ಎದುರು ಇರುವ ಸವಾಲು ಮತ್ತು ಸಾಧ್ಯತೆ ಎರಡೂ ಹೌದು. ಮುಖ್ಯಮಂತ್ರಿ ಬೆಂಗಳೂರಿಗೆ ಬಂದ ಬಳಿಕೆ ಈ ಬಗ್ಗೆ ಸಭಾಧ್ಯಕ್ಷರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: Omicron in Karnataka: ಕರ್ನಾಟಕದಲ್ಲಿ ಒಮಿಕ್ರಾನ್ ದೃಢ: ರಾಜ್ಯದಲ್ಲಿ ಮತ್ತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ ಇದನ್ನೂ ಓದಿ: Omicron in Karnataka: ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ಐವರಿಗೆ ಕೊವಿಡ್ ದೃಢ; ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್