AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಷ್ಟ ದಿಕ್ಸೂಚಿ, ನಿರ್ದಿಷ್ಟ ಗುರಿ, ಸಮಸ್ಯೆ ಬಗೆಹರಿಸುವ ಬದ್ಧತೆ ಇದೆ: ಜನಸೇವಕ ಕಾರ್ಯಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ

Basavaraj Bommai: ಸ್ಪಷ್ಟ ದಿಕ್ಸೂಚಿ ನಿರ್ದಿಷ್ಟ ಗುರಿ ಸಮಸ್ಯೆ ಬಗೆಹರಿಸುವ ಬದ್ದತೆ ಮೂಲಕ ನಾವು ಮುನ್ನಡೆಯುತ್ತೇವೆ. ಕೇವಲ ರಾಜ್ಯೋತ್ಸವ ಮಾಡಿದ್ರೆ ಸಾಲದು ಅದು ಜನೋತ್ಸವ ಆಗಬೇಕು. ಆಡಳಿತ ಸುಧಾರಣೆ ಆದಾಗ ರಾಜ್ಯೋತ್ಸವ ಜನೋತ್ಸವ ಆಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸ್ಪಷ್ಟ ದಿಕ್ಸೂಚಿ, ನಿರ್ದಿಷ್ಟ ಗುರಿ, ಸಮಸ್ಯೆ ಬಗೆಹರಿಸುವ ಬದ್ಧತೆ ಇದೆ: ಜನಸೇವಕ ಕಾರ್ಯಕ್ರಮದ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 01, 2021 | 2:46 PM

Share

ಬೆಂಗಳೂರು: ಜನಸೇವಕ ಕಾರ್ಯಕ್ರಮ ನಗರದಲ್ಲಿ ಯಶಸ್ವಿಯಾಗಬೇಕು. ಹೆಚ್ಚು ಜನಸಂಖ್ಯೆ ಇರುವ ಬೆಂಗಳೂರಲ್ಲಿ ಯಶಸ್ವಿಯಾಗಬೇಕು. ಇಲ್ಲಿ ಯಶಸ್ವಿಯಾದರೆ ಜಿಲ್ಲೆಗಳಿಗೆ ವಿಸ್ತರಿಸುವುದು ಸುಲಭ. ಜನವರಿ 26 ರಿಂದ ಈ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು (ನವೆಂಬರ್ 1) ಹೇಳಿಕೆ ನೀಡಿದ್ದಾರೆ.

ಕ್ರಾಂತಿಕಾರಿ ಬದಲಾವಣೆ ಆಗುವ ದಿನ ಇದು. ಬೆಂಗಳೂರಲ್ಲಿ ಮಾಡುತ್ತಿರುವ ಈ ಪ್ರಯೋಗ ಯಶಸ್ವಿ ಆಗಬೇಕು. ಶಕ್ತಿಕೇಂದ್ರದ ಹತ್ತಿರವೇ ಮಾಡುತ್ತಿರುವ ಈ ಯೋಜನೆ ಯಶಸ್ವಿ ಆಗಲೇಬೇಕು. ಮುಂದಿನ ದಿನಗಳಲ್ಲಿ ಇಡೀ ವ್ಯವಸ್ಥೆ ಬದಲಾವಣೆಗೆ ಇದು ಭದ್ರಬುನಾದಿ ಆಗುತ್ತೆ. ಸ್ಪಷ್ಟ ದಿಕ್ಸೂಚಿ ನಿರ್ದಿಷ್ಟ ಗುರಿ ಸಮಸ್ಯೆ ಬಗೆಹರಿಸುವ ಬದ್ದತೆ ಮೂಲಕ ನಾವು ಮುನ್ನಡೆಯುತ್ತೇವೆ. ಕೇವಲ ರಾಜ್ಯೋತ್ಸವ ಮಾಡಿದ್ರೆ ಸಾಲದು ಅದು ಜನೋತ್ಸವ ಆಗಬೇಕು. ಆಡಳಿತ ಸುಧಾರಣೆ ಆದಾಗ ರಾಜ್ಯೋತ್ಸವ ಜನೋತ್ಸವ ಆಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಡಿತರ ಆಹಾರ ಧಾನ್ಯ ವಿತರಣೆ ಕೂಡ ಪ್ರಾರಂಭ ಮಾಡಿದ್ದೇವೆ. ಬಿಬಿಎಂಪಿ ಖಾತಾ ಕೊಡುವಂತದ್ದು ಕಷ್ಟದ ಕೆಲಸ, ಜನ ಸುಸ್ತಾಗಿ ಹೋಗಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಬಹಳ ದೊಡ್ಡ ಬದಲಾವಣೆ ಮಾಡಲು ಸಾರಿಗೆ ಸಚಿವರು ಮುಂದಾಗಿದ್ದಾರೆ. ಬಹಳ ಜನ ಸಾರಿಗೆ ಕಚೇರಿಗೆ ಹೋಗ್ತಾರೆ. ಅದನ್ನು ತಪ್ಪಿಸಬೇಕು. 30 ಹೊಸ ಸೇವೆಗಳನ್ನು ತರುತ್ತಿದ್ದೇವೆ. ವಾಹನವನ್ನು ಯಾರು ಮಾರುತ್ತಾರೋ ಅವರೇ ರಿಜಿಸ್ಟ್ರೇಷನ್ ನೀಡುವ ವ್ಯವಸ್ಥೆ ತರುತ್ತಿದ್ದೇವೆ. 10 ಸಂಸ್ಥೆಗಳಿಗೆ ಮಾತ್ರ ಇದೀಗ ರಿಜಿಸ್ಟ್ರೇಷನ್ ಅವಕಾಶ ನೀಡುತ್ತಿದ್ದೇವೆ. ಇವೆಲ್ಲವೂ ಜನಪರವಾದ ಸರ್ಕಾರದ ನಿರ್ಣಯ ಎಂದು ತಿಳಿಸಿದ್ದಾರೆ.

2.66 ಲಕ್ಷ ಬಿಪಿಎಲ್, 1.45 ಲಕ್ಷ ಎಪಿಎಲ್ ಕಾರ್ಡ್ ಗಳಿಗೆ ಸಿಎಂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 4.11 ಲಕ್ಷ ಪಡಿತರ ಕಾರ್ಡ್ ಗಳಿಗೆ ಅನುಮೋದನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಎಲ್ಲ ಸೇವೆಗಳ ಪರಿಶೀಲನೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮ ಬಿಬಿಎಂಪಿ ಚುನಾವಣೆಗೆ ತಯಾರಿ ಅಲ್ಲ. ಆಡಳಿತದಲ್ಲಿ ಸುಧಾರಣೆ ತರುವುದಾಗಿ ಮೊದಲೇ ಹೇಳಿದ್ದೆ. ನಾನು ಸಿಎಂ ಆಗುವಾಗಲೇ ಹೇಳಿದ್ದೆ. ಅದಕ್ಕೆ ಪೂರಕವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿವೆ. ಚುನಾವಣೆ ದೃಷ್ಟಿಯಿಂದ ಈ ಕಾರ್ಯಕ್ರಮ ನಡೆಯುತ್ತಿಲ್ಲ. ಜನಸೇವೆಯ ದೃಷ್ಟಿಯಿಂದ ಈ ಜನ ಸೇವೆ ತಂದಿದ್ದೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಬಂದ ಕಡೆ ಮಾತ್ರ ರಸ್ತೆ ಗುಂಡಿ ಮುಚ್ಚಿದ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಆ ರೀತಿ ಏನೂ ಇಲ್ಲ. ಮಳೆ ಬಂದ ಕಾರಣ ಗುಂಡಿ ಮುಚ್ಚುವುದು ತಡವಾಗ್ತಿದೆ. 28 ಕ್ಷೇತ್ರಗಳಲ್ಲೂ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿದೆ‌. ವಾರ, ಹದಿನೈದು ದಿನಗಳ ಕಾಲ ಟೈಮ್ ಕೊಟ್ಟಿದ್ದೇನೆ. ಅದಾದ ಮೇಲೆ ನಾನೇ ಹೋಗಿ ಮತ್ತೆ ವೀಕ್ಷಣೆ ಮಾಡ್ತೇನೆ ಎಂದು ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ಜನ ಸ್ಪಂದನ ವೆಬ್ ಪೋರ್ಟಲ್ ಉದ್ಘಾಟನೆ

ಇದನ್ನೂ ಓದಿ: ಕನ್ನಡ ನಮ್ಮ ದೇವರು, ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು; ಬಸವರಾಜ ಬೊಮ್ಮಾಯಿ ಭಾಷಣ

Published On - 2:45 pm, Mon, 1 November 21

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ