AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6ರಿಂದ ದ್ವಿತೀಯ ಪಿಯುಸಿವರೆಗೆ ಸಂಪೂರ್ಣ ಹಾಜರಾತಿಗೆ ಅವಕಾಶ, ವಾರದಲ್ಲಿ 5 ದಿನ ತರಗತಿ: ಸಿಎಂ ಬೊಮ್ಮಾಯಿ

Karnataka School Reopen: ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

TV9 Web
| Updated By: guruganesh bhat|

Updated on:Sep 24, 2021 | 6:28 PM

Share

ಬೆಂಗಳೂರು: ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೊರೊನಾ ಸೋಂಕು ನಿಯಂತ್ರಣ ಸಂಬಂಧ ಸಭೆ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ನುಮುಂದೆ ರಾತ್ರಿ 10ರಿಂದ ಮುಂಜಾನೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಅಕ್ಟೋಬರ್ 3ರಿಂದ ಪಬ್‌ಗಳಲ್ಲೂ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಅವರು ಘೋಷಿಸಿದರು.

ಕೊವಿಡ್ ಸಭೆಯ ನಿರ್ಣಯಗಳು 1.  ರಾಜ್ಯದಲ್ಲಿ ಪ್ರಸ್ತುತ ಕೊವಿಡ್ ಪಾಸಿಟಿವಿಟಿ ದರ ಶೇಕಡಾ 0.66 ರಷ್ಟಿದೆ. 2. ಅಕ್ಟೋಬರ್ 1 ರಿಂದ ಕೊವಿಡ್ ಪಾಸಿಟಿವಿಟಿ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು. ಪಾಸಿಟಿವಿಟಿ ದರ ಶೇಕಡಾ 1ರಷ್ಟು  ಆದರೆ ಶೇ 50 ರಷ್ಟು ಭರ್ತಿಗೆ ಹಾಗೂ ಶೇಕಡಾ 2ಕ್ಕಿಂತ ಹೆಚ್ಚಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು. 3.  ಕನಿಷ್ಠ ಒಂದು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಚಿತ್ರಮಂದಿರಗಳಿಗೆ ಪ್ರವೇಶ 4. ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. 5. ರಾತ್ರಿ ಕರ್ಫ್ಯೂವನ್ನು ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ನಿಗದಿಪಡಿಸಲಾಗುವುದು. 6. ದಸರಾ ಬಗ್ಗೆ ಪ್ರತ್ಯೇಕ ಮಾರ್ಗ ಸೂಚಿ ಹೊರಡಿಸಲಾಗುವುದು. 7. ಗಡಿ ಭಾಗದಲ್ಲಿ ಹೆಚ್ಚು, ನಿಗಾ ವಹಿಸಲಾಗುವುದು. 8. ಯಾದಗಿರಿ, ರಾಯಚೂರು, ಕಲಬುರಗಿ, ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲು, ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು.

ಇದನ್ನೂ ಓದಿ: 

Analysis: ವಿಧಾನಮಂಡಲ ಉದ್ದೇಶಿಸಿ ಲೋಕಸಭೆ ಸ್ಪೀಕರ್​ ಓಂ ಬಿರ್ಲಾ ಭಾಷಣ: ವಿರೋಧ ಪಕ್ಷ ಬಹಿಷ್ಕಾರ ಎಷ್ಟು ಸರಿ? 

ಪುರಸಭೆಯಲ್ಲಿ ಕಸ ಗುಡಿಸುವ ಮಹಿಳೆಯ ಕೈ ಹಿಡಿದ ಸರ್ಕಾರ! ಏನಿದು ಸ್ಟೋರಿ? ಆ ಮಹಿಳೆ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

(CM Basavaraj Bommai says By October 3rd 100 percent attendance will be permitted in 6th to 12th standard)

Published On - 6:18 pm, Fri, 24 September 21