AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲವಂತದ ಮತಾಂತರವನ್ನು ಸಂಪೂರ್ಣ ನಿಯಂತ್ರಿಸಲು ಕಾನೂನು ತರಲು ಚಿಂತನೆ: ಸಿಎಂ ಬೊಮ್ಮಾಯಿ

ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು ಈ ವಿಷಯ ತಿಳಿಸಿದರು.

ಬಲವಂತದ ಮತಾಂತರವನ್ನು ಸಂಪೂರ್ಣ ನಿಯಂತ್ರಿಸಲು ಕಾನೂನು ತರಲು ಚಿಂತನೆ: ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Sep 28, 2021 | 8:59 PM

Share

ಬೆಂಗಳೂರು: ಕರ್ನಾಟಕದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾದಗಿರಿಯಲ್ಲಿ ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿ ಬಲವಂತದ ಮತಾಂತರ ನಿಯಂತ್ರಿಸಲು ಬಿಗಿಯಾದ ಕಾನೂನು ರೂಪಿಸುವ ಯೋಚನೆ ಇರುವುದನ್ನು ತಿಳಿಸಿದರು.

ಈಮುನ್ನ ಕೆಲವು ದಿನಗಳ ಹಿಂದೆ ವಿಧಾನಸಭಾ ಅಧಿವೇಶನದಲ್ಲಿಯೂ ಬಲವಂತದ  ಮತಾಂತರದ ಕುರಿತು ಪ್ರಸ್ತಾಪ ಬಂದಿತ್ತು.  ವಿಧಾನಸಭೆಯಲ್ಲಿ ಇಂದು ಕೆಲ ಸದಸ್ಯರು ಈಕುರಿತು ಪ್ರಸ್ತಾಪಿಸಿದ್ದರು. ಒತ್ತಾಯಪೂರ್ವಕವಾಗಿ ಮತಾಂತರ ಕಾನೂನುಬಾಹಿರ ಆಗಿದೆ. ಹಾಗಾಗಿ, ಬೇರೆ ಬೇರೆ ರಾಜ್ಯಗಳ ಕಾಯ್ದೆಯನ್ನು ಪರಿಶೀಲನೆ ಮಾಡಿ ರಾಜ್ಯದಲ್ಲೂ ಕಾಯ್ದೆ ಜಾರಿ ಮಾಡುವ ಬಗ್ಗೆ ಚರ್ಚಿಸ್ತೇವೆ ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು.

ಇತ್ತೀಚಿಗಷ್ಟೇ ಬೆಂಗಳೂರು ನಗರದಲ್ಲಿ ಮತಾಂತರದ ಆರೋಪ ಕೇಳಿಬಂದಿದ್ದು, ಆರ್​ಎಸ್​ಎಸ್​ (RSS) ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ ಸುಮಾರು 70 ರಿಂದ 80 ಮಕ್ಕಳನ್ನು ಸೇರಿಸಿ ಕ್ರೈಸ್ತ ಪ್ರಾರ್ಥನೆ ಮಾಡಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಈ ಕುರಿತು ಕಳೆದ ಭಾನುವಾರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮತಾಂತರಕ್ಕೆ ಪ್ರಯತ್ನಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ಆರ್​ಎಸ್​ಎಸ್ ಕಾರ್ಯಕರ್ತರಿಂದ ಮಾಹಿತಿ ಪಡೆದ ಬ್ಯಾಡರಹಳ್ಳಿ ಪೊಲೀಸರು, ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಕಳೆದ ಹತ್ತು ವರ್ಷದಿಂದ ಆ ಮನೆಯಲ್ಲಿ ಕೇವಲ ಪ್ರಾರ್ಥನೆ ಮಾಡಿದ್ದಾರಷ್ಟೇ. ಆದರೆ ಮತಾಂತರ ಮಾಡಿಲ್ಲವೆಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಕೊವಿಡ್ ನಿಯಮ ಉಲ್ಲಂಘಿಸಿ ಪ್ರಾರ್ಥನೆ ಹಿನ್ನೆಲೆ ನಾರಯಣಸ್ವಾಮಿ ವಿರುದ್ಧ ಎನ್​ಡಿಎಮ್​ಎ (NDMA) ಕೇಸ್ ದಾಖಲಿಸಲಾಗಿತ್ತು.

ಇದನ್ನೂ ಓದಿ: 

World Rabies Day 2021: ರೇಬೀಸ್ ರೋಗದ ಕುರಿತಾಗಿ ನೀವು ತಿಳಿಯಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

ಸೂರ್ಯ ಮತ್ತು ಚಂದ್ರಗ್ರಹಣಗಳಂದು ಹುಬ್ಬಳ್ಳಿಯ ಈಶ್ವರ ದೇವಸ್ಥಾನದಲ್ಲಿ ವಿಶೇಷ ಹೋಮ ಹವನಗಳು ನಡೆಯುತ್ತವೆ

(CM Basavaraj Bommai says we have a thought on ban and control Religious Conversion in Karnataka)

Published On - 8:40 pm, Tue, 28 September 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ