AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಭಾರತಕ್ಕೆ ದೊಡ್ಡ ಕೊಡುಗೆ ನೀಡಲು ಶ್ರಮಿಸುತ್ತಿದ್ದೇವೆ; ‘ಬಿಜೆಪಿ ಜನಪ್ರತಿನಿಧಿಗಳ’ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಭಾಷಣ

ನಮ್ಮ ಸರ್ಕಾರ ಯೋಜನೆ ಜನರಿಗೆ ಮುಟ್ಟಿಸುವಂತೆ ಮಾಡಬೇಕಿದೆ. ಪ್ರಧಾನಿ ಮೋದಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಮಾಡಿದ್ದರು. ರೈತರ ಖಾತೆಗೆ ನೇರವಾಗಿ 6 ಸಾವಿರ ರೂಪಾಯಿ ಜಮೆ ಆಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ನವಭಾರತಕ್ಕೆ ದೊಡ್ಡ ಕೊಡುಗೆ ನೀಡಲು ಶ್ರಮಿಸುತ್ತಿದ್ದೇವೆ; ‘ಬಿಜೆಪಿ ಜನಪ್ರತಿನಿಧಿಗಳ’ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಭಾಷಣ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: sandhya thejappa|

Updated on:Jun 18, 2022 | 7:39 PM

Share

ಚಿತ್ರದುರ್ಗ: ಮುರುಘಾಮಠದ ಅನುಭವ ಮಂಟಪದಲ್ಲಿ ಇಂದು ‘ಬಿಜೆಪಿ ಜನಪ್ರತಿನಿಧಿಗಳ’ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ (JP Nadda) ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಸಮಾವೇಶ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಪೂರಕವಾಗಲಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಬುನಾದಿಯಾಗಲಿದೆ. ಭಾರತದಲ್ಲಿ ಭಾರತೀಯ ಜನತಾ ಪಕ್ಷ ಸಂಘಟನೆ ಭದ್ರವಾಗಿದೆ ಎಂದರು. ನಂತರ ಕೇಂದ್ರದಲ್ಲಿ ನೆಚ್ಚಿನ ಮೋದಿಯವರ ನಾಯಕತ್ವದ ಸರ್ಕಾರವಿದೆ. ನವಭಾರತಕ್ಕೆ ದೊಡ್ಡ ಕೊಡುಗೆ ನೀಡಲು ಶ್ರಮಿಸುತ್ತಿದ್ದೇವೆ ಎಂದು ಅಭಿಪ್ರಾಯಪಟ್ಟರು.

ವಿಧಾನಸೌಧದ ಎಸಿ ರೂಮ್​ನಲ್ಲಿ ನಾವು ಚರ್ಚೆ ಮಾಡಬಹುದು. ಆದರೆ ಎಲ್ಲಾ ಸಮಸ್ಯೆಗಳನ್ನು ಸ್ಥಳೀಯ ಸಂಸ್ಥೆಗಳು ಬಗೆಹರಿಸಬೇಕು ಎಂದು ಮಾತನಾಡಿದ ಬೊಮ್ಮಾಯಿ, ಹಾಗಾಗಿ ಸ್ಥಳೀಯ ಸಂಸ್ಥೆಗಳಿಗೆ ಅನುದಾನ, ಅಧಿಕಾರ ನೀಡಿದ್ದೇವೆ. ಗ್ರಾಮ ಒನ್ ಸ್ಥಾಪಿಸಿ ಎಲ್ಲಾ ದಾಖಲೆ ಸಿಗುವಂತೆ ಮಾಡಿದ್ದೇವೆ. ಡಿಸಿ ಕಚೇರಿ, ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಿದ್ದೇವೆ. ನಮ್ಮ ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದಿದೆ ಎಂದರು.

ನಮ್ಮ ಸರ್ಕಾರ ಯೋಜನೆ ಜನರಿಗೆ ಮುಟ್ಟಿಸುವಂತೆ ಮಾಡಬೇಕಿದೆ. ಪ್ರಧಾನಿ ಮೋದಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಮಾಡಿದ್ದರು. ರೈತರ ಖಾತೆಗೆ ನೇರವಾಗಿ 6 ಸಾವಿರ ರೂಪಾಯಿ ಜಮೆ ಆಗುತ್ತಿದೆ. ಮೋದಿಯವರು ಸ್ವಚ್ಛ, ದಕ್ಷ, ಪಾರದರ್ಶಕ ಆಡಳಿತ ನೀಡ್ತಿದ್ದಾರೆ. ಕರ್ನಾಟಕದ ಜನತೆಗೆ ಸೂರು ಕಲ್ಪಿಸಲು ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ
Image
Rahul Gandhi: ಅನುಮತಿ ಪಡೆಯದೆ ಲಂಡನ್​ಗೆ ಹೋದ ಸಂಸದ ರಾಹುಲ್ ಗಾಂಧಿ; ಪಕ್ಷದ ವತಿಯಿಂದ ಬಂತು ಪ್ರತಿಕ್ರಿಯೆ: ಏನದು? ಮತ್ತದೇ ಯಡವಟ್ಟು!
Image
ರಸ್ತೆ ಬದಿಯ ಹೋಟೆಲ್​ನಲ್ಲಿ ಊಟ ಮಾಡಿದ ಈ ಸ್ಟಾರ್​ ನಟನನ್ನು ಗುರುತಿಸುತ್ತೀರಾ? ಇಲ್ಲಿದೆ ವೈರಲ್ ವಿಡಿಯೋ
Image
ಸ್ಟೇಜ್​ ಮೇಲೆ ಕೆಜಿಎಫ್​2 ಡೈಲಾಗ್ ಹೊಡೆದ ಎಸ್.ಡಿ.ಪಿ.ಐ ಮುಖಂಡ
Image
IPL 2022 Final Tickets: ಐಪಿಎಲ್ ಫೈನಲ್ ಮ್ಯಾಚ್ ಟಿಕೆಟ್ ಖರೀದಿಸುವುದು ಹೇಗೆ?

ಬೃಹತ್ ಸಮಾವೇಶಕ್ಕೆ ಆಗಮಿಸಿದ ಜೆಪಿ ನಡ್ಡಾಗೆ ಮೈಸೂರು ಪೇಟ ತೊಡಿಸಿ ಬೆಳ್ಳಿ ಗದೆ ನೀಡಿ ಸನ್ಮಾನ ಮಾಡಲಾಯಿತು. ಈ ವೇಳೆ ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್​, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕಟೀಲು, ಸಚಿವರು, ಶಾಸಕರು, ಸಂಸದರು, ಬಿಜೆಪಿ ನಾಯಕರು ಉಪಸ್ಥಿತಿತರಿದ್ದರು.

ಭಾರತಮಾತೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಸಮಾವೇಶಕ್ಕೆ ಚಾಲನೆ ನೀಡಿದರು. ನಂತರ ಭಾರತೀಯ ಜನಸಂಘದ ಕಾರ್ಯದರ್ಶಿಯಾಗಿದ್ದ ವಾಸುದೇವ ರೆಡ್ಡಿ, ಆನಂದಮ್ಮ ದಂಪತಿಗೆ ಸನ್ಮಾನ ಜೆಪಿ ನಡ್ಡಾ ಸನ್ಮಾನಿಸಿದರು. ಒನಕೆ ಓಬವ್ವನ ವಿಗ್ರಹವನ್ನು ನೀಡಿ ಬಿಜೆಪಿ ನಾಯಕರು ಗೌರವಿಸಿದರು.

ಬಿಸಿ ಪಾಟೀಲ್, ಜೇಷ್ಠ ನಡುವೆ ವಾಗ್ವಾದ:

ಮುರುಘಾಮಠಕ್ಕೆ ಜೆಪಿ ನಡ್ಡಾ ಭೇಟಿ ನೀಡಿದ ವೇಳೆ ಬಿಸಿ ಪಾಟೀಲ್, ಜೇಷ್ಠ ನಡುವೆ ವಾಗ್ವಾದ ನಡೆಯಿತು. ನಡ್ಡಾ, ಸಿಎಂ ಮಠದಲ್ಲೇ ಇರುವಾಗ ಪ್ರತ್ಯೇಕವಾಗಿ ಹೊರಬಂದಿದ್ದೇಕೆಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಬಿಸಿ ಪಾಟೀಲ್‌ಗೆ ಬಿಜೆಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಜೇಷ್ಠ ಪ್ರಶ್ನಿಸಿದರು. ಎಲ್ಲಾ ನೀವು ಹೇಳಿದಂತೆ ಕೇಳಬೇಕಾ ಎಂದು ಸಚಿವ ಬಿಸಿ ಪಾಟೀಲ್ ಹೇಳಿದರು. ನಾವು ಸಹ ಬೆಳಗ್ಗೆಯಿಂದಲೂ ಕಾದಿದ್ದೇವೆ ಎಂದು ಜೇಷ್ಠ ಉತ್ತರ ನೀಡಿದರು. ನಮ್ಮ ವಯಸ್ಸೇನು, ನಿಮ್ಮ ವಯಸ್ಸೇನು ಎಂದು ಬಿಸಿಪಾಟೀಲ್ ಹೇಳಿದರು. ನೀವು ಹೇಳಿದಂತೆ ಕೇಳಲಾಗದು, ಇದೊಂದು ವ್ಯವಸ್ಥೆ ಅಂತ ಜೇಷ್ಠ ಹೇಳಿದರು.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ತಾಜಾ ಸುದ್ದಿಗಳನ್ನ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Sat, 18 June 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​