AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಮನ ಗೆಲ್ಲಲು ಸಿಎಂ ಬೊಮ್ಮಾಯಿ ಹೊಸ ಅಸ್ತ್ರ, ಗೃಹಿಣಿ ಶಕ್ತಿ ಯೋಜನೆಗೆ ಚಿಂತನೆ

ಮಹಿಳೆಯರ ಮನ ಗೆಲ್ಲಲು ಇದೀಗ ಸಿಎಂ ಬೊಮ್ಮಾಯಿ ಗೃಹಿಣಿ ಶಕ್ತಿ ಎಂಬ ಯೋಜನೆಗೆ ಚಿಂತನೆ ನಡೆಸಿದ್ದಾರೆ. ಕಾಂಗ್ರೆಸ್​ನ ಗೃಹಲಕ್ಷ್ಮಿ ಯೋಜನೆಗೆ ಸೆಡ್ಡುಹೊಡೆಯೋಕೆ ಈ ಯೋಜನೆ ಜಾರಿ ತರಲು ಬಿಜೆಪಿ ಮುಂದಾಗಿದೆ.

ಮಹಿಳೆಯರ ಮನ ಗೆಲ್ಲಲು ಸಿಎಂ ಬೊಮ್ಮಾಯಿ ಹೊಸ ಅಸ್ತ್ರ, ಗೃಹಿಣಿ ಶಕ್ತಿ ಯೋಜನೆಗೆ ಚಿಂತನೆ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 21, 2023 | 12:50 PM

Share

ಬೆಂಗಳೂರು: ಕಾಂಗ್ರೆಸ್​​ನ ಗೃಹಲಕ್ಷ್ಮೀ ಯೋಜನೆಗೆ ಸೆಡ್ಡುಹೊಡೆಯಲು ಸಿಎಂ ಬೊಮ್ಮಾಯಿ ಹೊಸ ಯೋಜನೆ ರೂಪಿಸಿದ್ದಾರೆ. ಮಹಿಳೆಯರ ಮನ ಗೆಲ್ಲಲು ಈ ಬಾರಿ ಬಜೆಟ್​​​​ನಲ್ಲಿ ಮಹಿಳೆಯರಿಗಾಗಿ ಹೊಸ ಯೋಜನೆ ತರಲು ಸಿಎಂ ಚಿಂತನೆ ನಡೆಸಿದ್ದು, ಈ ಸಂಬಂಧ ಇಂದು(ಜ.21) ಸಂಜೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಹಣದ ಲಭ್ಯತೆ ಆಧಾರದ ಮೇಲೆ ಗೌರವ ಧನ ಫಿಕ್ಸ್ ಮಾಡುವ ಮೂಲಕ ಈ ಬಜೆಟ್​​ನಲ್ಲಿಯೇ ಯೋಜನೆ ಘೋಷಣೆ ಮಾಡಿ ತಮ್ಮ ಸರ್ಕಾರವಧಿಯಲ್ಲೇ ಅನುಷ್ಠಾನಕ್ಕೆ ತರಲು ಸಿಎಂ ಪ್ಲ್ಯಾನ್ ಮಾಡಿದ್ದಾರೆ.

ಇನ್ನು ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಈಗಾಗಲೇ ಪ್ರಚಾರ ಕಾರ್ಯ ಶುರುವಾಗಿದೆ. ಜನರನ್ನ ಸೆಳೆಯಲು ವಿವಿಧ ಯೋಜನೆಗಳನ್ನ ಪ್ರಕಟಿಸಲಾಗುತ್ತಿದೆ. ನಗರದ ಅರಮನೆ ಆವರಣದಲ್ಲಿ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮಾಡುವ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದ್ದರು.

ಇದನ್ನೂ ಓದಿ:Hubballi Dharwad: ಮುಸ್ಲಿಂ ಸಮುದಾಯದಿಂದ ಕಾಂಗ್ರೆಸ್​ ಟಿಕೆಟ್​ಗಾಗಿ ಬೇಡಿಕೆ, ಟಿಕೆಟ್​ ನೀಡದಿದ್ದರೆ ಬಂಡಾಯ ಅಭ್ಯರ್ಥಿ ಕಣಕ್ಕಿಳಿಸುವ ಎಚ್ಚರಿಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿ ನೀಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.  ರಾಜ್ಯದ ಮಹಿಳೆಯರೇ ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿತ್ತು ಆದರೀಗ ಅದಕ್ಕೆ ವಿರುದ್ದವಾಗಿ ಬಿಜೆಪಿ ಗೃಹಿಣಿ ಶಕ್ತಿ ಯೋಜನೆಯನ್ನ ಜಾರಿಗೆ ತರಲು ಪ್ಲ್ಯಾನ್​ ಮಾಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ