AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್​ಗೆ ಉಚಿತ ಚಿಕಿತ್ಸೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ

BS Yediyurappa Press meet: ಬ್ಲ್ಯಾಕ್​ ಫಂಗಸ್​ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಮೇ 21) ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.

ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್​ಗೆ ಉಚಿತ ಚಿಕಿತ್ಸೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 21, 2021 | 10:05 AM

Share

ಬೆಂಗಳೂರು: ಬ್ಲ್ಯಾಕ್​ ಫಂಗಸ್​ಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು (ಮೇ 21) ನಡೆದ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್​ ಫಂಗಸ್​ಗೆ ಉಚಿತ ಚಿಕಿತ್ಸೆ ನೀಡುತ್ತೇವೆ. ಜನರು ಕಟ್ಟುನಿಟ್ಟಾಗಿ ಲಾಕ್​ಡೌನ್​ ಪಾಲನೆ ಮಾಡಬೇಕು. ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತು ಖರೀದಿಗೆ ಅವಕಾಶ ನೀಡಿದ್ದೇವೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಬ್ಲ್ಯಾಕ್ ಫಂಗಸ್ ಸೋಂಕಿಗೆ ರಾಜ್ಯದಲ್ಲಿ ಔಷಧ ಕೊರತೆ ಇದೆ. ಆದರೆ, ಮುಂದಿನ 2-ರಿಂದ3 ದಿನಗಳಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಔಷಧ ಕರ್ನಾಟಕಕ್ಕೆ ಬರಲಿದೆ. ಔಷಧ ಬರುವ ತನಕ ಇಎನ್‌ಟಿ ಸರ್ಜನ್‌ಗಳಿಂದ ಚಿಕಿತ್ಸೆ ನೀಡಲಾಗುತ್ತದೆ. ಬ್ಲ್ಯಾಕ್ ಫಂಗಸ್ ಒಬ್ಬರಿಂದ ಒಬ್ಬರಿಗೆ ಹರಡುವ ಸೋಂಕು ಅಲ್ಲ. ಹೀಗಾಗಿ, ಈ ಸೋಂಕಿನ ಬಗ್ಗೆ ಯಾವುದೇ ಆತಂಕ, ಅಪಪ್ರಚಾರ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ತಿಳಿಸಿದ್ದರು.

ಇನ್ನು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜನರು ಕಟ್ಟುನಿಟ್ಟಾಗಿ ಲಾಕ್​ಡೌನ್​ ಪಾಲನೆ ಮಾಡಬೇಕು. ಬೆಳಗ್ಗೆ 6ರಿಂದ 10ರವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು. ಆದರೆ ಅನಗತ್ಯವಾಗಿ ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಸದ್ಯ ಬೆಳಗ್ಗೆ 10 ಗಂಟೆಯ ನಂತರವೂ ಜನರು ಅನಗತ್ಯವಾಗಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಹೀಗಾದಲ್ಲಿ ಇನ್ನಷ್ಟು ಬಿಗಿಯಾದ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿರುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು. ಜತೆಗೆ ಕರ್ನಾಟಕ ಲಾಕ್​ಡೌನ್ ವಿಸ್ತರಣೆಯ ನಿರ್ಧಾರವನ್ನು ಹಿರಿಯ ಸಚಿವರ ಜಿತೆ ಜೊತೆ ಚರ್ಚೆ ಮಾಡಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಬೆಳಗ್ಗೆ 10 ಕಳೆದರೂ ಓಡಾಡುತ್ತಿರುವುದು ಕಂಡುಬರುತ್ತಿದೆ. ಬೆಳಗ್ಗೆ 9.45ರೊಳಗೆ ಜನರು ತಮ್ಮ ಮನೆ ಸೇರಿಕೊಳ್ಳಬೇಕು. ನಿಯಮ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಜತೆಗೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಬಗ್ಗೆ ನಿರ್ಧರಿಸಿಲ್ಲ ಎಂದು ಸಹ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಈ 3 ವಿಧಾನಗಳನ್ನು ಅನುಸರಿಸಿದರೆ ಬ್ಲ್ಯಾಕ್​ ಫಂಗಸ್ ಕಾಯಿಲೆಯನ್ನು ತಡೆಗಟ್ಟಬಹುದು: ಡಾ.ರಣ್​ದೀಪ್ ಗುಲೇರಿಯಾ

ಹೋಮ್ ಕ್ವಾರೆಂಟೈನ್ ಆಗಿರುವ ಕೊರೊನಾ ಸೋಂಕಿತರು ಗಮನಿಸಿ: ಬೇಗ ಗುಣವಾಗಲು ಆಯುಷ್-64 ಔಷಧ ಸಹಕಾರಿ; ವಿವರ ಇಲ್ಲಿದೆ (CM BS Yediyurappa announces free treatment for Black Fungus in Karnataka District Hospitals)

Published On - 7:15 pm, Fri, 21 May 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!