AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಜಿಲ್ಲೆಗಳಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಆದೇಶ: ಯಡಿಯೂರಪ್ಪ ಸಂಪುಟ ಸಭೆಯ ಹೈಲೆಟ್ಸ್ ಏನೇನು?

ಗಣಿನಾಡು ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳಾಗಿ ವಿಭಜಿಸಿ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

2 ಜಿಲ್ಲೆಗಳಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಆದೇಶ: ಯಡಿಯೂರಪ್ಪ ಸಂಪುಟ ಸಭೆಯ ಹೈಲೆಟ್ಸ್ ಏನೇನು?
ಸಚಿವ ಜೆ.ಸಿ.ಮಾಧುಸ್ವಾಮಿ
ಆಯೇಷಾ ಬಾನು
|

Updated on:Nov 27, 2020 | 12:54 PM

Share

ಬಳ್ಳಾರಿ: ಕರ್ನಾಟಕ ಗೃಹ ಮಂಡಳಿ ಮನವಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗಣಿನಾಡು ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳಾಗಿ ವಿಭಜಿಸಿ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ರು.

ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಸೇರಿದಂತೆ ಒಟ್ಟು 6 ತಾಲೂಕುಗಳನ್ನು ಸೇರಿಸಲಾಗಿದೆ. ಹೊಸಪೇಟೆಯನ್ನು ನೂತನ ಜಿಲ್ಲಾ ಕೇಂದ್ರವಾಗಿ ಘೋಷಿಸಲಾಗಿದೆ.

98 ವಸತಿ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. ವಸತಿ ಯೋಜನೆಗೆ ₹2,275 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹಾಗೂ ಎಸ್‌ಸಿ, ಎಸ್‌ಟಿ ಸಂಪುಟ ಉಪಸಮಿತಿಗೆ ಅಧ್ಯಕ್ಷರಾಗಿ ಸಚಿವ ಶ್ರೀರಾಮುಲು ನೇಮಕಗೊಂಡಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಗೋವಿಂದ ಕಾರಜೋಳ ಈಗ ಸದಸ್ಯರಾಗಿದ್ದಾರೆ.

ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ತಿದ್ದುಪಡಿ: ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ 1:15 ಅನುಪಾತ ನಿಗದಿ ಪಡಿಸಿ ನಿಯಮ ತಿದ್ದುಪಡಿ ಮಾಡಲಾಗಿದೆ. ಮಲ್ಲಸಂದ್ರ, ಮನವರ್ತೆ ಕಾವಲ್ ಗ್ರಾಮ ಪಂಚಾಯಿತಿ, ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಬಿಬಿಎಂಪಿಗೆ ಸೇರ್ಪಡೆ ಮಾಡಲಾಗಿದೆ.

ವೀರಶೈವ ಲಿಂಗಾಯತ ಸಮುದಾಯ ಒಬಿಸಿ ಪಟ್ಟಿಗೆ: ವೀರಶೈವ ಲಿಂಗಾಯತ ಸಮುದಾಯ ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಕೆಲವು ಅಂಶಗಳ ಅಧ್ಯಯನ ನಡೆಸಬೇಕಿದೆ. ಹೀಗಾಗಿ ವರದಿ ಪಡೆದು ಮತ್ತೆ ಸಂಪುಟದಲ್ಲಿ ಚರ್ಚಿಸಬೇಕು. ಈ ಕಾರಣಕ್ಕಾಗಿ ಮುಂದೂಡಿದ್ದೇವೆ. ನಮ್ಮ ಮೇಲೆ ಕೇಂದ್ರದ ಒತ್ತಡ, ಹೈಕಮಾಂಡ್ ಒತ್ತಡವಿಲ್ಲ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ-ವಿಜಯನಗರ ತಾಲೂಕುಗಳ ಬಗ್ಗೆ ಡಿ.ಎಮ್. ನಂಜುಂಡಪ್ಪ ಸಮಿತಿ ವರದಿ ಏನು ಹೇಳುತ್ತದೆ? ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?

Published On - 12:42 pm, Fri, 27 November 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್