AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಜಿಲ್ಲೆಗಳಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಆದೇಶ: ಯಡಿಯೂರಪ್ಪ ಸಂಪುಟ ಸಭೆಯ ಹೈಲೆಟ್ಸ್ ಏನೇನು?

ಗಣಿನಾಡು ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳಾಗಿ ವಿಭಜಿಸಿ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

2 ಜಿಲ್ಲೆಗಳಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಆದೇಶ: ಯಡಿಯೂರಪ್ಪ ಸಂಪುಟ ಸಭೆಯ ಹೈಲೆಟ್ಸ್ ಏನೇನು?
ಸಚಿವ ಜೆ.ಸಿ.ಮಾಧುಸ್ವಾಮಿ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 27, 2020 | 12:54 PM

Share

ಬಳ್ಳಾರಿ: ಕರ್ನಾಟಕ ಗೃಹ ಮಂಡಳಿ ಮನವಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗಣಿನಾಡು ಬಳ್ಳಾರಿ ಜಿಲ್ಲೆಯನ್ನು 2 ಜಿಲ್ಲೆಗಳಾಗಿ ವಿಭಜಿಸಿ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ. ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ರು.

ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಕೊಟ್ಟೂರು, ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಸೇರಿದಂತೆ ಒಟ್ಟು 6 ತಾಲೂಕುಗಳನ್ನು ಸೇರಿಸಲಾಗಿದೆ. ಹೊಸಪೇಟೆಯನ್ನು ನೂತನ ಜಿಲ್ಲಾ ಕೇಂದ್ರವಾಗಿ ಘೋಷಿಸಲಾಗಿದೆ.

98 ವಸತಿ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. ವಸತಿ ಯೋಜನೆಗೆ ₹2,275 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಹಾಗೂ ಎಸ್‌ಸಿ, ಎಸ್‌ಟಿ ಸಂಪುಟ ಉಪಸಮಿತಿಗೆ ಅಧ್ಯಕ್ಷರಾಗಿ ಸಚಿವ ಶ್ರೀರಾಮುಲು ನೇಮಕಗೊಂಡಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಗೋವಿಂದ ಕಾರಜೋಳ ಈಗ ಸದಸ್ಯರಾಗಿದ್ದಾರೆ.

ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ತಿದ್ದುಪಡಿ: ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ 1:15 ಅನುಪಾತ ನಿಗದಿ ಪಡಿಸಿ ನಿಯಮ ತಿದ್ದುಪಡಿ ಮಾಡಲಾಗಿದೆ. ಮಲ್ಲಸಂದ್ರ, ಮನವರ್ತೆ ಕಾವಲ್ ಗ್ರಾಮ ಪಂಚಾಯಿತಿ, ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಬಿಬಿಎಂಪಿಗೆ ಸೇರ್ಪಡೆ ಮಾಡಲಾಗಿದೆ.

ವೀರಶೈವ ಲಿಂಗಾಯತ ಸಮುದಾಯ ಒಬಿಸಿ ಪಟ್ಟಿಗೆ: ವೀರಶೈವ ಲಿಂಗಾಯತ ಸಮುದಾಯ ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಕೆಲವು ಅಂಶಗಳ ಅಧ್ಯಯನ ನಡೆಸಬೇಕಿದೆ. ಹೀಗಾಗಿ ವರದಿ ಪಡೆದು ಮತ್ತೆ ಸಂಪುಟದಲ್ಲಿ ಚರ್ಚಿಸಬೇಕು. ಈ ಕಾರಣಕ್ಕಾಗಿ ಮುಂದೂಡಿದ್ದೇವೆ. ನಮ್ಮ ಮೇಲೆ ಕೇಂದ್ರದ ಒತ್ತಡ, ಹೈಕಮಾಂಡ್ ಒತ್ತಡವಿಲ್ಲ ಎಂದು ವಿಧಾನಸೌಧದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ-ವಿಜಯನಗರ ತಾಲೂಕುಗಳ ಬಗ್ಗೆ ಡಿ.ಎಮ್. ನಂಜುಂಡಪ್ಪ ಸಮಿತಿ ವರದಿ ಏನು ಹೇಳುತ್ತದೆ? ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?

Published On - 12:42 pm, Fri, 27 November 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್