ಮೆಕ್ಕೆಜೋಳ ಬೆಳೆಗಾರರಿಗೆ ಪ್ಯಾಕೇಜ್ ಘೋಷಣೆ: ಸಿಎಂ ಬತ್ತಳಿಕೆಯಲ್ಲಿ ಏನೇನಿದೆ?

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಲು ಸಾಲಾಗಿ ಆರ್ಥಿಕ ಪ್ಯಾಕೇಜ್​ಗಳನ್ನು ಕೊಡಮಾಡುತ್ತಿವೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಹ ಹಿಂದೆ ಬಿದ್ದಿಲ್ಲ. ಈಗಾಗಲೇ ಎರಡ್ಮೂರು ಪ್ಯಾಕೇಜ್​ಗಳನ್ನು ಘೋಷಿಸಿದ್ದು, ಇದೀಗ ಮತ್ತೊಂದು ಕೊಡುಗೆ ನೀಡುತ್ತಿದ್ದಾರೆ. ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ವಿವರ ಹೀಗಿದೆ. ಮೆಕ್ಕೆಜೋಳ ಬೆಳೆಗಾರರಿಗೆ 5 ಸಾವಿರ ರೂ: ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಆದರೂ ಮೆಕ್ಕೆಜೋಳ ಬೆಳಗಾರರಿಗೆ ಲಾಭ ಸಿಕ್ಕಿಲ್ಲ. ನಮ್ಮಲ್ಲಿ 10 ಲಕ್ಷ ಮೆಕ್ಕೆಜೋಳ ಬೆಳೆಗಾರರು ಇದ್ದಾರೆ. ಮೆಕ್ಕೆಜೋಳ ಬೆಳೆಗಾರರಿಗೆ ತಲಾ […]

ಮೆಕ್ಕೆಜೋಳ ಬೆಳೆಗಾರರಿಗೆ ಪ್ಯಾಕೇಜ್ ಘೋಷಣೆ: ಸಿಎಂ ಬತ್ತಳಿಕೆಯಲ್ಲಿ ಏನೇನಿದೆ?
ಸಾಧು ಶ್ರೀನಾಥ್​

Updated on: May 15, 2020 | 4:34 PM

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಲು ಸಾಲಾಗಿ ಆರ್ಥಿಕ ಪ್ಯಾಕೇಜ್​ಗಳನ್ನು ಕೊಡಮಾಡುತ್ತಿವೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಹ ಹಿಂದೆ ಬಿದ್ದಿಲ್ಲ. ಈಗಾಗಲೇ ಎರಡ್ಮೂರು ಪ್ಯಾಕೇಜ್​ಗಳನ್ನು ಘೋಷಿಸಿದ್ದು, ಇದೀಗ ಮತ್ತೊಂದು ಕೊಡುಗೆ ನೀಡುತ್ತಿದ್ದಾರೆ. ಯಡಿಯೂರಪ್ಪ ಅವರ ಸುದ್ದಿಗೋಷ್ಠಿ ವಿವರ ಹೀಗಿದೆ.

ಮೆಕ್ಕೆಜೋಳ ಬೆಳೆಗಾರರಿಗೆ 5 ಸಾವಿರ ರೂ:

ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಆದರೂ ಮೆಕ್ಕೆಜೋಳ ಬೆಳಗಾರರಿಗೆ ಲಾಭ ಸಿಕ್ಕಿಲ್ಲ. ನಮ್ಮಲ್ಲಿ 10 ಲಕ್ಷ ಮೆಕ್ಕೆಜೋಳ ಬೆಳೆಗಾರರು ಇದ್ದಾರೆ. ಮೆಕ್ಕೆಜೋಳ ಬೆಳೆಗಾರರಿಗೆ ತಲಾ 5 ಸಾವಿರ ರೂಪಾಯಿ ನೀಡಲಾಗುವುದು. ಇದರಿಂದ 500 ಕೋಟಿ ರೂಪಾಯಿ ಹೊರೆಯಾಗುತ್ತದೆ. ಆದ್ರೆ ಇದರಿಂದ ಮೆಕ್ಕೆಜೋಳ ಬೆಳೆಗಾರರಿಗೆ ತೃಪ್ತಿಯಾಗುತ್ತದೆ.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ:

40,250 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೀಡಲಾಗುತ್ತೆ. ಸಹಕಾರ ಇಲಾಖೆಯಿಂದ ಪ್ರೋತ್ಸಾಹ ಧನ ನೀಡುತ್ತೇವೆ. ಇದಕ್ಕೆ ಹನ್ನೆರಡೂವರೆ ಸಾವಿರ ಕೋಟಿ ರೂಪಾಯಿಯಾಗುತ್ತದೆ. ಕುರಿ, ಮೇಕೆ ಮೃತಪಟ್ಟರೆ 5 ಸಾವಿರ ರೂಪಾಯಿ ಪರಿಹಾರ ನೀಡುತ್ತೇವೆ. ಈ ಹಿಂದೆ ನೀಡಲಾಗುತ್ತಿದ್ದ ಪರಿಹಾರವನ್ನು ಮುಂದುವರಿಸಿದ್ದೇವೆ.

ಇನ್ಯಾವ ವರ್ಗಕ್ಕೂ ಆರ್ಥಿಕ ನೆರವು ನೀಡಲು ಸಾಧ್ಯವಿಲ್ಲ:

ಪ್ಯಾಕೇಜ್​ಗೆ ಇನ್ನಷ್ಟು ಶ್ರಮಿಕ ವರ್ಗವನ್ನ ಸೇರಿಸಬೇಕು ಅನ್ನೋ ಬೇಡಿಕೆ ಬಂದಿದೆ. ಆದ್ರೆ ಇನ್ಯಾವ ವರ್ಗಕ್ಕೂ ಆರ್ಥಿಕ ನೆರವು ನೀಡಲು ಸಾಧ್ಯವಿಲ್ಲ. ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲಿ ಇನ್ಯಾವ ವರ್ಗಕ್ಕೂ ಆರ್ಥಿಕ ನೆರವು ನೀಡಲು ಸಾಧ್ಯವಿಲ್ಲ. ತನ್ನ ಇತಿಮಿತಿಯಲ್ಲಿ ಸಾಧ್ಯವಾದಷ್ಟು ಎಲ್ಲವನ್ನೂ ಮಾಡಿದ್ದೇನೆ. ಮುಂದೆ ಮತ್ತಷ್ಟು ಆರ್ಥಿಕ ನೆರವು ನೀಡಲು ಸಾಧ್ಯವಿಲ್ಲ ಎಂದು ಯಡಿಯೂರಪ್ಪ ತಿಳಿಸಿದರು.

Published On - 12:48 pm, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us