ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ. ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ […]

ತುಂಬು ಗರ್ಭಿಣಿಯಾದ್ರು ಕೆಲಸಕ್ಕೆ ಹಾಜರಾದ ನರ್ಸ್​ಗೆ ಸಿಎಂ ಹೇಳಿದ್ದೇನು?

Updated on: May 10, 2020 | 12:21 PM

ಶಿವಮೊಗ್ಗ: ತುಂಬು ಗರ್ಭಿಣಿಯಾಗಿದ್ದರು ರಜೆಯೇ ತಗೊಳ್ಳದೆ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನರ್ಸ್​ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. 9 ತಿಂಗಳು ತುಂಬು ಗರ್ಭಿಣಿಯಾಗಿರುವ ಶ್ರೀ ರೂಪ ರಜೆಯನ್ನು ತೆಗೆದುಕೊಳ್ಳದೆ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲ್ಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯ‌ನಿರ್ವಹಿಸುತ್ತಿದ್ದಾರೆ.

ಇವರು ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ಸಿನಲ್ಲೇ ಪ್ರಯಾಣಿಸಿ ಸೇವೆ ಮಾಡುತ್ತಿದ್ದಾರೆ. 9 ತಿಂಗಳು ಗರ್ಭಿಣಿಯಾಗಿದ್ರೂ ಪ್ರತಿದಿನ ಸುಮಾರು 120 ಕಿ.ಮೀ ಪ್ರಯಾಣ ಮಾಡುವ ಇವರು ಕೊರೊನಾ ವಾರಿಯರ್ಸ್ ಏನು ಅನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾನ್ಯ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.‌ ಇದರ ಜೊತೆಗೆ ಕೂಡಲೇ ರಜೆ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.

Published On - 11:45 am, Sun, 10 May 20