AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಸಾರ್ ಅಹ್ಮದ್ ಟ್ರಸ್ಟ್​ಗೆ ಭೂಮಿ ಮಂಜೂರು, ಸಂಪುಟ ತೀರ್ಮಾನ ಏನೇನು?

ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ದಿ. ನಿಸಾರ್ ಅಹ್ಮದ್ ಟ್ರಸ್ಟ್​ಗೆ 2 ಎಕರೆ ಭೂಮಿ ಮಂಜೂರು ಮಾಡಲು ಸಂಪುಟದಲ್ಲಿ ತೀರ್ಮಾನವಾಗಿದೆ ಎಂದು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಆದೇಶ ವಾಪಸ್ ಮುಖ್ಯವಾಗಿ, ಕೊರೊನಾ ಸಂಕಟದಿಂದಾಗಿ ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಹೆಚ್ಚಿಸುವ ತಿದ್ದುಪಡಿ ಆದೇಶ ವಾಪಸ್ ಪಡೆದಿದ್ದೇವೆ. ಇನ್ನು ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್​ನಿಂದ ಬರುವವರಿಗೆ 15 ದಿನಗಳ ಕಾಲ ನಿಷೇಧ ಕಡ್ಡಾಯಗೊಳಿಸಲಾಗಿದೆ. ರೈಲು, […]

ನಿಸಾರ್ ಅಹ್ಮದ್ ಟ್ರಸ್ಟ್​ಗೆ ಭೂಮಿ ಮಂಜೂರು, ಸಂಪುಟ ತೀರ್ಮಾನ ಏನೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 28, 2020 | 5:45 PM

Share

ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ದಿ. ನಿಸಾರ್ ಅಹ್ಮದ್ ಟ್ರಸ್ಟ್​ಗೆ 2 ಎಕರೆ ಭೂಮಿ ಮಂಜೂರು ಮಾಡಲು ಸಂಪುಟದಲ್ಲಿ ತೀರ್ಮಾನವಾಗಿದೆ ಎಂದು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಆದೇಶ ವಾಪಸ್ ಮುಖ್ಯವಾಗಿ, ಕೊರೊನಾ ಸಂಕಟದಿಂದಾಗಿ ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಹೆಚ್ಚಿಸುವ ತಿದ್ದುಪಡಿ ಆದೇಶ ವಾಪಸ್ ಪಡೆದಿದ್ದೇವೆ. ಇನ್ನು ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್​ನಿಂದ ಬರುವವರಿಗೆ 15 ದಿನಗಳ ಕಾಲ ನಿಷೇಧ ಕಡ್ಡಾಯಗೊಳಿಸಲಾಗಿದೆ. ರೈಲು, ವಿಮಾನ, ಬಸ್​ಗಳಲ್ಲಿ ಬರುವ ಎಲ್ಲರಿಗೂ 15 ದಿನಗಳ ಕಾಲ ರಾಜ್ಯಕ್ಕೆ ಬರಲು ನಿಷೇಧ ಹೇರಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಪಿಎಸ್​ಐ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ ಪಿಎಸ್​ಐ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 28 ರಿಂದ 30 ವರ್ಷಕ್ಕೆ ಹೆಚ್ಚಳವಾಗಿದೆ. ಎಸ್​ಸಿ, ಎಸ್​ಟಿ ಪಂಗಡಕ್ಕೆ 30ರಿಂದ 32 ವರ್ಷಕ್ಕೆ ಹೆಚ್ಚಳಗೊಂಡಿದೆ. 18 ಕೋಟಿ ವೆಚ್ಚದಲ್ಲಿ ಔಷಧ ಉಗ್ರಾಣ ನಿರ್ಮಿಸಲು ಒಪ್ಪಿಗೆ ದೊರೆತಿದೆ. ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಔಷಧ ಉಗ್ರಾಣ ನಿರ್ಮಿಸಲು ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ವಿಧಾನಪರಿಷತ್ 5 ಸ್ಥಾನಗಳಿಗೆ ನಾಮನಿರ್ದೇಶನ ವಿಚಾರವಾಗಿ ಮಾತನಾಡಿದ ಸಚಿವ ಮಾಧುಸ್ವಾಮಿ, ನಾಮನಿರ್ದೇಶನ ಅಧಿಕಾರ ಸಿಎಂಗೆ ಕೊಡಲು ಸಂಪುಟ ಒಪ್ಪಿಗೆ ಸೂಚಿಸಿತು ಎಂದರು. ಎಲ್ಲ ರೈತರಿಗೆ 5 ಸಾವಿರ ರೂ. ಪರಿಹಾರ ನೀಡಲು ನಿರ್ಧಾರ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಶ್ರಮಿಕ ವರ್ಗಕ್ಕೆ ಪ್ಯಾಕೇಜ್​ ನೀಡಲಾಗುವುದು. ಈ ಹಿಂದೆ ಇದ್ದ ಕೆಲ ಷರತ್ತುಗಳಲ್ಲಿ ವಿನಾಯಿತಿ ನೀಡಿದ್ದೇವೆ ಎಂದೂ ಅವರು ಹೇಳಿದರು.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ