AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಸಾರ್ ಅಹ್ಮದ್ ಟ್ರಸ್ಟ್​ಗೆ ಭೂಮಿ ಮಂಜೂರು, ಸಂಪುಟ ತೀರ್ಮಾನ ಏನೇನು?

ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ದಿ. ನಿಸಾರ್ ಅಹ್ಮದ್ ಟ್ರಸ್ಟ್​ಗೆ 2 ಎಕರೆ ಭೂಮಿ ಮಂಜೂರು ಮಾಡಲು ಸಂಪುಟದಲ್ಲಿ ತೀರ್ಮಾನವಾಗಿದೆ ಎಂದು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಆದೇಶ ವಾಪಸ್ ಮುಖ್ಯವಾಗಿ, ಕೊರೊನಾ ಸಂಕಟದಿಂದಾಗಿ ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಹೆಚ್ಚಿಸುವ ತಿದ್ದುಪಡಿ ಆದೇಶ ವಾಪಸ್ ಪಡೆದಿದ್ದೇವೆ. ಇನ್ನು ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್​ನಿಂದ ಬರುವವರಿಗೆ 15 ದಿನಗಳ ಕಾಲ ನಿಷೇಧ ಕಡ್ಡಾಯಗೊಳಿಸಲಾಗಿದೆ. ರೈಲು, […]

ನಿಸಾರ್ ಅಹ್ಮದ್ ಟ್ರಸ್ಟ್​ಗೆ ಭೂಮಿ ಮಂಜೂರು, ಸಂಪುಟ ತೀರ್ಮಾನ ಏನೇನು?
ಸಾಧು ಶ್ರೀನಾಥ್​
|

Updated on: May 28, 2020 | 5:45 PM

Share

ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ದಿ. ನಿಸಾರ್ ಅಹ್ಮದ್ ಟ್ರಸ್ಟ್​ಗೆ 2 ಎಕರೆ ಭೂಮಿ ಮಂಜೂರು ಮಾಡಲು ಸಂಪುಟದಲ್ಲಿ ತೀರ್ಮಾನವಾಗಿದೆ ಎಂದು ಸಚಿವ ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಆದೇಶ ವಾಪಸ್ ಮುಖ್ಯವಾಗಿ, ಕೊರೊನಾ ಸಂಕಟದಿಂದಾಗಿ ಕಾರ್ಮಿಕರ ಹೆಚ್ಚುವರಿ ಕೆಲಸದ ಅವಧಿ ಹೆಚ್ಚಿಸುವ ತಿದ್ದುಪಡಿ ಆದೇಶ ವಾಪಸ್ ಪಡೆದಿದ್ದೇವೆ. ಇನ್ನು ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್​ನಿಂದ ಬರುವವರಿಗೆ 15 ದಿನಗಳ ಕಾಲ ನಿಷೇಧ ಕಡ್ಡಾಯಗೊಳಿಸಲಾಗಿದೆ. ರೈಲು, ವಿಮಾನ, ಬಸ್​ಗಳಲ್ಲಿ ಬರುವ ಎಲ್ಲರಿಗೂ 15 ದಿನಗಳ ಕಾಲ ರಾಜ್ಯಕ್ಕೆ ಬರಲು ನಿಷೇಧ ಹೇರಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಪಿಎಸ್​ಐ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ ಪಿಎಸ್​ಐ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 28 ರಿಂದ 30 ವರ್ಷಕ್ಕೆ ಹೆಚ್ಚಳವಾಗಿದೆ. ಎಸ್​ಸಿ, ಎಸ್​ಟಿ ಪಂಗಡಕ್ಕೆ 30ರಿಂದ 32 ವರ್ಷಕ್ಕೆ ಹೆಚ್ಚಳಗೊಂಡಿದೆ. 18 ಕೋಟಿ ವೆಚ್ಚದಲ್ಲಿ ಔಷಧ ಉಗ್ರಾಣ ನಿರ್ಮಿಸಲು ಒಪ್ಪಿಗೆ ದೊರೆತಿದೆ. ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ಔಷಧ ಉಗ್ರಾಣ ನಿರ್ಮಿಸಲು ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು.

ವಿಧಾನಪರಿಷತ್ 5 ಸ್ಥಾನಗಳಿಗೆ ನಾಮನಿರ್ದೇಶನ ವಿಚಾರವಾಗಿ ಮಾತನಾಡಿದ ಸಚಿವ ಮಾಧುಸ್ವಾಮಿ, ನಾಮನಿರ್ದೇಶನ ಅಧಿಕಾರ ಸಿಎಂಗೆ ಕೊಡಲು ಸಂಪುಟ ಒಪ್ಪಿಗೆ ಸೂಚಿಸಿತು ಎಂದರು. ಎಲ್ಲ ರೈತರಿಗೆ 5 ಸಾವಿರ ರೂ. ಪರಿಹಾರ ನೀಡಲು ನಿರ್ಧಾರ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಶ್ರಮಿಕ ವರ್ಗಕ್ಕೆ ಪ್ಯಾಕೇಜ್​ ನೀಡಲಾಗುವುದು. ಈ ಹಿಂದೆ ಇದ್ದ ಕೆಲ ಷರತ್ತುಗಳಲ್ಲಿ ವಿನಾಯಿತಿ ನೀಡಿದ್ದೇವೆ ಎಂದೂ ಅವರು ಹೇಳಿದರು.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್