ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ

[lazy-load-videos-and-sticky-control id=”e1yn8pwuEvs”] ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ […]

ರಾಜ್ಯದ ಸಿಎಂ ಮನೆಗೂ ವಕ್ಕರಿಸಿದ ಕೊರೊನಾ ಮಾರಿ
ಸಾಧು ಶ್ರೀನಾಥ್​

Updated on: Jul 10, 2020 | 4:18 PM

[lazy-load-videos-and-sticky-control id=”e1yn8pwuEvs”]

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಬದಲಿ ವಾಹನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ದುರಾದೃಷ್ಟವೆಂಬಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್ ಮತ್ತು ಇನ್ನೊಬ್ಬ ಸಿಬ್ಬಂದಿಗೂ ಕೊರೊನಾ‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಮಾಧಾನಕಾರ ವಿಚಾರವೆನೆಂದರೆ ಈ ಮೂವರು ಸೋಂಕಿಂತರಲ್ಲಿ ಯಾರು ಸಹ ಬಿ.ಎಸ್ ಯಡಿಯೂರಪ್ಪರವರ ನೇರ ಸಂಪರ್ಕಕ್ಕೆ ಬಂದಿಲ್ಲ. ಜೊತೆಗೆ ಸಿಎಂ ಖಾಸಗಿ ನಿವಾಸ ಧವಳಗಿರಿಯಲ್ಲಿನ‌ ಸಿಬ್ಬಂದಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿಯಿದ್ದು, ಸದ್ಯ ಕೆಲವು ದಿನಗಳಿಂದ ಧವಳಗಿರಿಯಲ್ಲಿ ಸಿಎಂ ವಾಸ್ತವ್ಯವಿಲ್ಲ ಎನ್ನಲಾಗಿದೆ.

ಸದ್ಯಕ್ಕೆ ಸಿಎಂ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಾಸ್ತವ್ಯವಿದ್ದು, ಎಲ್ಲಾ ರೀತಿಯ ಮುನ್ನೆಚ್ವರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರಂತೆ. ಸಿಎಂ ಭೇಟಿಗೆಂದು ಬರುವ ಶಾಸಕರಿಗೂ ಸಹ ಹತ್ತಿರಕ್ಕೆ ಸೇರಿಸದೆ ಸಾಮಾಜಿಕ ಅಂತರ ಕಾಯ್ದುಕ್ಕೊಳ್ಳುವುದರ ಮೂಲಕ ಭೇಟಿಗೆ ಅವಕಾಶ ನೀಡುತ್ತಿದ್ದಾರೆಂದು ಸಿಎಂ ಆಪ್ತ ವಲಯ ತಿಳಿಸಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪಗೂ ಕಾಡಿದ ಕೊರೊನಾ ಕಂಟಕ:
ಸಿಎಂ ಬೆಂಗಾವಲು ವಾಹನದ ಚಾಲಕನಿಗೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್ ಆಗಲು ಸಿಎಂ ಯಡಿಯೂರಪ್ಪ ಸ್ವಯಂ ನಿರ್ಧಾರ ತೆಗೆದುಕೊಂಡಿದ್ದಾರೆ. 5 ದಿನ ಸಿಎಂ ಸ್ವಯಂಪ್ರೇರಿತ ಹೋಮ್ ಕ್ವಾರಂಟೈನ್​ನಲ್ಲಿರಲಿದ್ದಾರೆ. ಸದ್ಯ ಅಧಿಕೃತ ನಿವಾಸ ಕಾವೇರಿಯಲ್ಲಿರಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ. 5 ದಿನ ಸಾರ್ವಜನಿಕರಿಗೆ ಸಿಎಂ ಭೇಟಿಗೆ ಅವಕಾಶ ಇಲ್ಲ. ಬುಧವಾರದ ಬಳಿಕ ಅಧಿಕೃತ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Published On - 12:48 pm, Fri, 10 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us