AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮೂರನೇ ಅಲೆ ಎದುರಿಸಲು ಟಾಸ್ಕ್ ಫೋರ್ಸ್ ಸಮಿತಿ ರಚಿಸುವಂತೆ ಬಿ.ಎಸ್. ಯಡಿಯೂರಪ್ಪ ಆದೇಶ

ಖಾಸಗಿ ಆಸ್ಪತ್ರೆ ಗಳ ಬೆಡ್ ಗಳ ಬಗ್ಗೆ ನಿಗಾ ಇಡಬೇಕು. ಆಕ್ಸಿಜನ್, ರೆಮಿಡಿಸಿವಿರ್ ಹಾಗು ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು.

ಕೊರೊನಾ ಮೂರನೇ ಅಲೆ ಎದುರಿಸಲು ಟಾಸ್ಕ್ ಫೋರ್ಸ್ ಸಮಿತಿ ರಚಿಸುವಂತೆ ಬಿ.ಎಸ್. ಯಡಿಯೂರಪ್ಪ ಆದೇಶ
ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು
TV9 Web
| Edited By: |

Updated on:Aug 23, 2021 | 12:40 PM

Share

ಬೆಂಗಳೂರು: ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಮೇ 10) ತಮ್ಮ ಅಧಿಕೃತ ನಿವಾಸದಲ್ಲಿ ಕೊವಿಡ್​ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜನ ಅನಗತ್ಯವಾಗಿ ಹೊರಗೆ ಓಡಾಡುವುದನ್ನ ತಪ್ಪಿಸಬೇಕು. ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸಿ ಎಂದು ಸೂಚನೆ ನೀಡಿದರು. ಕೊರೊನಾ 3ನೇ‌ ಅಲೆಗೆ ಈಗಿನಿಂದಲೇ ಸಿದ್ದರಾಗಬೇಕಿದ್ದು ಅದಕ್ಕೊಂದು‌ ಟಾಸ್ಕ್ ಫೋರ್ಸ್ ಕಮಿಟಿ ಮಾಡಲು ತಿಳಿಸಿದರು.

ಕೊವಿಡ್ -19 ನಿಯಂತ್ರಿಸಲು ಸಚಿವರುಗಳಿಗೆ ನೀಡಿರುವ ಜವಾಬ್ದಾರಿಯ ಅನುಸಾರ ಎಲ್ಲಿಯೂ ಯಾವುದೇ ರೀತಿಯ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಪ್ರಮುಖವಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದು ಜನರು ಅನಗತ್ಯವಾಗಿ ಓಡಾಡುವುದನ್ನು‌ ತಪ್ಪಿಸಬೇಕು. ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮವಹಿಸುವುದು ಮತ್ತು ರೆಮಿಡಿಸಿವಿರ್ ಡ್ರಗ್ ಪೂರೈಕೆಯನ್ನು ಅಗತ್ಯತೆಗನುಸಾರವಾಗಿ ಸರಬರಾಜು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚಿಸಿದರು.

ಖಾಸಗಿ ಆಸ್ಪತ್ರೆ ಗಳ ಬೆಡ್ ಗಳ ಬಗ್ಗೆ ನಿಗಾ ಇಡಬೇಕು. ಆಕ್ಸಿಜನ್, ರೆಮಿಡಿಸಿವಿರ್ ಹಾಗು ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕೂಡಲೇ ಕ್ರಮ ಕೈಗೊಳ್ಳಲು ಆದೇಶಿಸಿದರು. ವಾರ್ ರೂಮ್ ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಬೇಕು ಎಂದು ಹೇಳಿದರು.

ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳಿಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಹಾಕಲು ಈಗಿನಿಂದಾನೆ ಕೆಲಸ ಶುರು ಮಾಡಲು ಸೂಚನೆ ನೀಡಿದ ಅವರು, ಶಾಸಕರು ಹಾಗು ಸಚಿವರು ತಮ್ಮ ತಮ್ಮ ಕ್ಷೇತ್ರದಲ್ಲೇ ವಾಸ್ತವ್ಯ ಮಾಡಿ‌ ಜಿಲ್ಲೆಗಳ ಕರೋನ‌ ಪರಿಸ್ಥಿತಿ ಹತೋಟಿಗೆ ತರಲು‌ ಶ್ರಮಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Covid-19 Karnataka Update: ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 39,305 ಜನರಿಗೆ ಕೊರೊನಾ ಸೋಂಕು ದೃಢ, 596 ಜನರು ನಿಧನ

ಕೊರೊನಾ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕಾರಿಣಿ ನಿರ್ಣಯ

Published On - 8:00 pm, Mon, 10 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು