AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ

CM Yediyurappa in Covid War Room: ಮುಂದಿನ 10ರಿಂದ 12 ದಿನಗಳಲ್ಲಿ ಲಾಕ್​ಡೌನ್ ಪ್ಯಾಕೇಜ್​ನಲ್ಲಿ ಪರಿಹಾರ ಧನ ಸಿಗದಿದ್ದವರಿಗೆ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ತಿಳಿಸಿದರು.

ಕೊವಿಡ್ ವಾರ್​ರೂಂನಲ್ಲಿ ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿಗೆ ಸ್ವತಃ ಬೆಡ್ ವ್ಯವಸ್ಥೆ ಮಾಡಿದ ಸಿಎಂ ಯಡಿಯೂರಪ್ಪ
ಕೊವಿಡ್ ವಾರ್​ರೂಂನಲ್ಲಿ ಸಿಎಂ ಯಡಿಯೂರಪ್ಪ
guruganesh bhat
|

Updated on:May 24, 2021 | 8:17 PM

Share

ಬೆಂಗಳೂರು:  ನಗರದ ದೊಮ್ಮಲೂರಿನ ಕೊವಿಡ್ ವಾರ್​ರೂಂಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೇಟಿ ನೀಡಿದರು. ಈ ವೇಳೆ ಸ್ವತಃ ಕರೆಯೊಂದನ್ನು ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಿದ ವ್ಯಕ್ತಿಯ ಕರೆ ಸ್ವೀಕರಿಸಿದರು.  ಕಾಲ್ ಸೆಂಟರ್ ಸಿಬ್ಬಂದಿ ಬದಲು ತಾವೇ ಹೆಲ್ಪ್ ಲೈನ್ ಕರೆ ಸ್ವೀಕರಿಸಿದರು. 1912 ಗೆ ಕರೆ ಮಾಡಿ ಐಸಿಯು ಬೆಡ್ ಬೇಕಿತ್ತು ಅಂದ ಆ ಕಡೆಯ ವ್ಯಕ್ತಿಯ ಬಳಿ, ಬಿಯು ನಂಬರ್ ಇದೆಯಾ? ಇದ್ದರೆ ಹೇಳಪ್ಪ, ಬೆಡ್ ವ್ಯವಸ್ಥೇ ಮಾಡುತ್ತಿದ್ದೇವೆ ಎಂದು ಸಿಎಂ ಯಡಿಯೂರಪ್ಪ ಕೇಳಿದರು. ನಂತರ ವ್ಯಕ್ತಿಯ ಮಾಹಿತಿ ಪಡೆದು ಬೆಡ್​ ವ್ಯವಸ್ಥೆ ಮಾಡಿದರು.

ಮುಂದಿನ 10ರಿಂದ 12 ದಿನಗಳಲ್ಲಿ ಲಾಕ್​ಡೌನ್ ಪ್ಯಾಕೇಜ್​ನಲ್ಲಿ ಪರಿಹಾರ ಧನ ಸಿಗದಿದ್ದವರಿಗೆ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ತಿಳಿಸಿದರು.

ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಹಣಕಾಸಿನ ಇತಿಮಿತಿಯಲ್ಲಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಎಷ್ಟೇ ಟೀಕಿಸಿದರೂ, ಅವರು ಅಧಿಕಾರದಲ್ಲಿದ್ದಾಗ ಯಾರಿಗೆ ಏನು ಮಾಡಿಕೊಟ್ಟರು‌ ಅಂತಾ ಜಗತ್ತಿಗೇ ಗೊತ್ತಿದೆ ಎಂದು ಸಿಎಂ ಯಡಿಯೂರಪ್ಪ ಟೀಕಿಸಿದರು.

ರಾಜ್ಯದಲ್ಲಿ ಕೊವಿಡ್ ಲಸಿಕೆ ಕೊರತೆ ಇರುವುದು ನಿಜ. ಇನ್ನು ಮುಂದೆ ಹೆಚ್ಚು ಲಸಿಕೆ ವಿತರಿಸಲು ದೆಹಲಿಯವರ ಬಳಿ ವಿನಂತಿ ಮಾಡಿದ್ದೇವೆ. ನಮಗೆ ಲಸಿಕೆ ಪೂರೈಕೆಯಾದಂತೆ ನಾವು ಸಹ ರಾಜ್ಯದಲ್ಲಿ ವಿತರಣೆ ಮಾಡುತ್ತೇವೆ. ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಕೇರ್ ಸೆಂಟರ್​ಗೆ ಶಿಫ್ಟ್ ಮಾಡಲು ತಿಳಿಸಿದ್ದಾಗಿ ಅವರು ಹೇಳಿದರು.

ಇದನ್ನೂ ಓದಿ: ದೇಶದಲ್ಲಿ ಕಳೆದ 11 ದಿನಗಳಿಂದ ಪತ್ತೆಯಾಗುವ ಹೊಸ ಕೊವಿಡ್ ಸೋಂಕಿತರಿಗಿಂತ ಗುಣಮುಖರಾಗುವವರ ಸಂಖ್ಯೆ ಹೆಚ್ಚಿದೆ: ಲವ್ ಅಗರ್ವಾಲ್

ಉಸಿರಿನಿಂದ ಕೊವಿಡ್ ಪರೀಕ್ಷೆ; ಕ್ಷಣ ಮಾತ್ರದಲ್ಲಿ ಫಲಿತಾಂಶ ಸಿಗುವ ಈ ಪರೀಕ್ಷೆಗೆ ಸಿಂಗಾಪುರ್ ಅನುಮೋದನೆ

(CM BS Yediyurappa himself arranged a bed for the person who went to covid war room and call for helpline number for Bed)

Published On - 6:29 pm, Mon, 24 May 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ