AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಬಳಿ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಮತ್ತು ಸಾಮಾನ್ಯ ಬೆಡ್ಗಳಿರುವ 205 ಹಾಸಿಗೆಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.

ಕೆಂಗೇರಿ ಬಳಿ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
|

Updated on: May 17, 2021 | 12:53 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ್ದಾರೆ. ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಮತ್ತು ಸಾಮಾನ್ಯ ಬೆಡ್ಗಳಿರುವ 205 ಹಾಸಿಗೆಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.

ಮೈಸೂರಿನ ಹಸಿರು ಪ್ರತಿಷ್ಠಾನದಿಂದ ಬಿಜಿಎಸ್ ಮೆಡಿಕಲ್ ಕಾಲೇಜಿಗೆ 2 ಸಾವಿರ ಗಿಡಗಳನ್ನು ಹಸ್ತಾಂತರಿಸಲಾಗಿದೆ. ಮೆಡಿಕಲ್ ಕಾಲೇಜು ಆವರಣದಲ್ಲಿ ಸಿಎಂ ಯಡಿಯೂರಪ್ಪ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಗಿಡ ನೆಟ್ಟಿದ್ದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಈ ಶುಭ ಸಮಯದಲ್ಲಿ ಉಪಸ್ಥಿತರಿದ್ದರು.

ಇನ್ನು ಇದೇ ವೇಳೆ ಕೆಂಗೇರಿಯಲ್ಲಿ ನಿರ್ಮಿಸಿರುವ ಟ್ರಯಾಜ್ ಸೆಂಟರನ್ನು ಸಿಎಂ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಕೆಂಗೇರಿ ಉಪನಗರದಲ್ಲಿರೋ ಅಂಬೇಡ್ಕರ್ ಸೆಂಟರ್ ಉದ್ಘಾಟನೆ ಮಾಡಲು ಬಂದಿದ್ದೇನೆ. 24 ಗಂಟೆ ವೈದ್ಯರು ಉಪಸ್ಥಿತಿಯಲ್ಲಿರಲಿದ್ದಾರೆ. ರೋಗಿಯ ಪರಿಸ್ಥಿತಿ ನೋಡಿ ಸಾಮಾನ್ಯ, ಐಸಿಯು ಬೆಡ್ ಬಗ್ಗೆ ವೈದ್ಯರು ನಿರ್ಧರಿಸುತ್ತಾರೆ. ಸೆಂಟರ್‌ನಲ್ಲಿ ಒಂದು ಆಂಬ್ಯುಲೆನ್ಸ್‌ ಇರಲಿದೆ. ಟ್ರಯಾಜ್ ಸೆಂಟರ್ನಲ್ಲಿ ಸಮರ್ಥ ರೀತಿಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಜೊತೆ ಮಹಿಳೆಯರ ಸೆಲ್ಫಿ ಕ್ರೇಜ್ ಕೆಂಗೇರಿ ಉಪನಗರದಲ್ಲಿ ಟ್ರಯಾಜ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದ ಬಳಿಕ ಕಾರು ಹತ್ತಿದ್ದ ಸಿಎಂಗೆ ಮಹಿಳೆಯರು ಮನವಿ ಮಾಡಿಕೊಂಡಿದ್ದು ಮನವಿಗೆ ಸ್ಪಂದಿಸಿ ಕಾರಿನಿಂದ ಇಳಿದು ಸಿಎಂ ಸೆಲ್ಫಿಗೆ ಫೋಸ್ ಕೊಟ್ಟಿದ್ದಾರೆ. ಬಳಿಕ ಸಿಎಂ ಜೊತೆ ಸೆಲ್ಫಿ ತೆಗೆಸಿಕೊಳ್ಳುಲು ಮಹಿಳೆಯರು ಮುಗಿಬಿದ್ದಿದ್ದು ಮಹಿಳೆಯರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸೆಲ್ಫಿ ಪಡೆಯಲು ಬಂದ ಮಹಿಳೆಯರನ್ನು ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು #Modiji_cancel12thboards ಹ್ಯಾಶ್​ಟ್ಯಾಗ್​; ಪ್ರಧಾನಿ ಮೋದಿಗೆ ಸಿಬಿಎಸ್​ಇ ಕ್ಲಾಸ್​ 12 ವಿದ್ಯಾರ್ಥಿಗಳ ಮೊರೆ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!