AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಬಳಿ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಮತ್ತು ಸಾಮಾನ್ಯ ಬೆಡ್ಗಳಿರುವ 205 ಹಾಸಿಗೆಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.

ಕೆಂಗೇರಿ ಬಳಿ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
|

Updated on: May 17, 2021 | 12:53 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ್ದಾರೆ. ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಮತ್ತು ಸಾಮಾನ್ಯ ಬೆಡ್ಗಳಿರುವ 205 ಹಾಸಿಗೆಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.

ಮೈಸೂರಿನ ಹಸಿರು ಪ್ರತಿಷ್ಠಾನದಿಂದ ಬಿಜಿಎಸ್ ಮೆಡಿಕಲ್ ಕಾಲೇಜಿಗೆ 2 ಸಾವಿರ ಗಿಡಗಳನ್ನು ಹಸ್ತಾಂತರಿಸಲಾಗಿದೆ. ಮೆಡಿಕಲ್ ಕಾಲೇಜು ಆವರಣದಲ್ಲಿ ಸಿಎಂ ಯಡಿಯೂರಪ್ಪ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಗಿಡ ನೆಟ್ಟಿದ್ದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಈ ಶುಭ ಸಮಯದಲ್ಲಿ ಉಪಸ್ಥಿತರಿದ್ದರು.

ಇನ್ನು ಇದೇ ವೇಳೆ ಕೆಂಗೇರಿಯಲ್ಲಿ ನಿರ್ಮಿಸಿರುವ ಟ್ರಯಾಜ್ ಸೆಂಟರನ್ನು ಸಿಎಂ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಕೆಂಗೇರಿ ಉಪನಗರದಲ್ಲಿರೋ ಅಂಬೇಡ್ಕರ್ ಸೆಂಟರ್ ಉದ್ಘಾಟನೆ ಮಾಡಲು ಬಂದಿದ್ದೇನೆ. 24 ಗಂಟೆ ವೈದ್ಯರು ಉಪಸ್ಥಿತಿಯಲ್ಲಿರಲಿದ್ದಾರೆ. ರೋಗಿಯ ಪರಿಸ್ಥಿತಿ ನೋಡಿ ಸಾಮಾನ್ಯ, ಐಸಿಯು ಬೆಡ್ ಬಗ್ಗೆ ವೈದ್ಯರು ನಿರ್ಧರಿಸುತ್ತಾರೆ. ಸೆಂಟರ್‌ನಲ್ಲಿ ಒಂದು ಆಂಬ್ಯುಲೆನ್ಸ್‌ ಇರಲಿದೆ. ಟ್ರಯಾಜ್ ಸೆಂಟರ್ನಲ್ಲಿ ಸಮರ್ಥ ರೀತಿಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಜೊತೆ ಮಹಿಳೆಯರ ಸೆಲ್ಫಿ ಕ್ರೇಜ್ ಕೆಂಗೇರಿ ಉಪನಗರದಲ್ಲಿ ಟ್ರಯಾಜ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದ ಬಳಿಕ ಕಾರು ಹತ್ತಿದ್ದ ಸಿಎಂಗೆ ಮಹಿಳೆಯರು ಮನವಿ ಮಾಡಿಕೊಂಡಿದ್ದು ಮನವಿಗೆ ಸ್ಪಂದಿಸಿ ಕಾರಿನಿಂದ ಇಳಿದು ಸಿಎಂ ಸೆಲ್ಫಿಗೆ ಫೋಸ್ ಕೊಟ್ಟಿದ್ದಾರೆ. ಬಳಿಕ ಸಿಎಂ ಜೊತೆ ಸೆಲ್ಫಿ ತೆಗೆಸಿಕೊಳ್ಳುಲು ಮಹಿಳೆಯರು ಮುಗಿಬಿದ್ದಿದ್ದು ಮಹಿಳೆಯರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸೆಲ್ಫಿ ಪಡೆಯಲು ಬಂದ ಮಹಿಳೆಯರನ್ನು ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು #Modiji_cancel12thboards ಹ್ಯಾಶ್​ಟ್ಯಾಗ್​; ಪ್ರಧಾನಿ ಮೋದಿಗೆ ಸಿಬಿಎಸ್​ಇ ಕ್ಲಾಸ್​ 12 ವಿದ್ಯಾರ್ಥಿಗಳ ಮೊರೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?