AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿ ಬಳಿ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ

ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಮತ್ತು ಸಾಮಾನ್ಯ ಬೆಡ್ಗಳಿರುವ 205 ಹಾಸಿಗೆಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.

ಕೆಂಗೇರಿ ಬಳಿ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
ಆಯೇಷಾ ಬಾನು|

Updated on: May 17, 2021 | 12:53 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ 205 ಬೆಡ್‌ಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ್ದಾರೆ. ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಮೆಡಿಕಲ್ ಕಾಲೇಜಿನಲ್ಲಿ ಆಕ್ಸಿಜನ್, ವೆಂಟಿಲೇಟರ್ ಮತ್ತು ಸಾಮಾನ್ಯ ಬೆಡ್ಗಳಿರುವ 205 ಹಾಸಿಗೆಗಳ ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಗಿದೆ.

ಮೈಸೂರಿನ ಹಸಿರು ಪ್ರತಿಷ್ಠಾನದಿಂದ ಬಿಜಿಎಸ್ ಮೆಡಿಕಲ್ ಕಾಲೇಜಿಗೆ 2 ಸಾವಿರ ಗಿಡಗಳನ್ನು ಹಸ್ತಾಂತರಿಸಲಾಗಿದೆ. ಮೆಡಿಕಲ್ ಕಾಲೇಜು ಆವರಣದಲ್ಲಿ ಸಿಎಂ ಯಡಿಯೂರಪ್ಪ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಗಿಡ ನೆಟ್ಟಿದ್ದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಈ ಶುಭ ಸಮಯದಲ್ಲಿ ಉಪಸ್ಥಿತರಿದ್ದರು.

ಇನ್ನು ಇದೇ ವೇಳೆ ಕೆಂಗೇರಿಯಲ್ಲಿ ನಿರ್ಮಿಸಿರುವ ಟ್ರಯಾಜ್ ಸೆಂಟರನ್ನು ಸಿಎಂ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಕೆಂಗೇರಿ ಉಪನಗರದಲ್ಲಿರೋ ಅಂಬೇಡ್ಕರ್ ಸೆಂಟರ್ ಉದ್ಘಾಟನೆ ಮಾಡಲು ಬಂದಿದ್ದೇನೆ. 24 ಗಂಟೆ ವೈದ್ಯರು ಉಪಸ್ಥಿತಿಯಲ್ಲಿರಲಿದ್ದಾರೆ. ರೋಗಿಯ ಪರಿಸ್ಥಿತಿ ನೋಡಿ ಸಾಮಾನ್ಯ, ಐಸಿಯು ಬೆಡ್ ಬಗ್ಗೆ ವೈದ್ಯರು ನಿರ್ಧರಿಸುತ್ತಾರೆ. ಸೆಂಟರ್‌ನಲ್ಲಿ ಒಂದು ಆಂಬ್ಯುಲೆನ್ಸ್‌ ಇರಲಿದೆ. ಟ್ರಯಾಜ್ ಸೆಂಟರ್ನಲ್ಲಿ ಸಮರ್ಥ ರೀತಿಯಲ್ಲಿ ಕೆಲಸ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಿಎಂ ಜೊತೆ ಮಹಿಳೆಯರ ಸೆಲ್ಫಿ ಕ್ರೇಜ್ ಕೆಂಗೇರಿ ಉಪನಗರದಲ್ಲಿ ಟ್ರಯಾಜ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದ ಬಳಿಕ ಕಾರು ಹತ್ತಿದ್ದ ಸಿಎಂಗೆ ಮಹಿಳೆಯರು ಮನವಿ ಮಾಡಿಕೊಂಡಿದ್ದು ಮನವಿಗೆ ಸ್ಪಂದಿಸಿ ಕಾರಿನಿಂದ ಇಳಿದು ಸಿಎಂ ಸೆಲ್ಫಿಗೆ ಫೋಸ್ ಕೊಟ್ಟಿದ್ದಾರೆ. ಬಳಿಕ ಸಿಎಂ ಜೊತೆ ಸೆಲ್ಫಿ ತೆಗೆಸಿಕೊಳ್ಳುಲು ಮಹಿಳೆಯರು ಮುಗಿಬಿದ್ದಿದ್ದು ಮಹಿಳೆಯರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸೆಲ್ಫಿ ಪಡೆಯಲು ಬಂದ ಮಹಿಳೆಯರನ್ನು ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್​ನಲ್ಲಿ ಟ್ರೆಂಡ್​ ಆಯ್ತು #Modiji_cancel12thboards ಹ್ಯಾಶ್​ಟ್ಯಾಗ್​; ಪ್ರಧಾನಿ ಮೋದಿಗೆ ಸಿಬಿಎಸ್​ಇ ಕ್ಲಾಸ್​ 12 ವಿದ್ಯಾರ್ಥಿಗಳ ಮೊರೆ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ