AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಸ್ಕ್ ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಫುಲ್ ಡ್ರಿಲ್

ಬೆಂಗಳೂರು: ಇಂದು ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ತರಾಟೆಗೆ ತೆಗುದುಕೊಂಡ್ರು. ಜಿಲ್ಲಾಧಿಕಾರಿಗಳ ಸಭೆ ಬಳಿಕ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೀತು. ಸಭೆಯಲ್ಲಿ ಕೊರೊನಾ ನಿಯಂತ್ರಣ, ಜಿಲ್ಲಾ ಲಾಕ್​ಡೌನ್ ಬಗ್ಗೆ ಚರ್ಚೆ ಮಾಡಲಾಯ್ತು. ಈ ವೇಳೆ ಸಿಎಂ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ್ರು. ಬಿಐಇಸಿಗೆ ಕೋವಿಡ್ ಕೇರ್ ಸೆಂಟರ್​ನಲ್ಲಿ ಬೆಡ್​ಗಳನ್ನು ಬಾಡಿಗೆಗೆ ತಂದಿದ್ದು ಯಾಕೆ? ಎರಡು ತಿಂಗಳಲ್ಲಿ ಅದರ ಬಾಡಿಗೆ ಎಷ್ಟಾಗುತ್ತದೆ ಎಂದು ಪ್ರಶ್ನಿಸಿದ್ರು. […]

ಟಾಸ್ಕ್ ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಫುಲ್ ಡ್ರಿಲ್
ಆಯೇಷಾ ಬಾನು
| Edited By: |

Updated on:Jul 13, 2020 | 3:20 PM

Share

ಬೆಂಗಳೂರು: ಇಂದು ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ತರಾಟೆಗೆ ತೆಗುದುಕೊಂಡ್ರು.

ಜಿಲ್ಲಾಧಿಕಾರಿಗಳ ಸಭೆ ಬಳಿಕ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಬಿಎಸ್​ವೈ ನೇತೃತ್ವದಲ್ಲಿ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೀತು. ಸಭೆಯಲ್ಲಿ ಕೊರೊನಾ ನಿಯಂತ್ರಣ, ಜಿಲ್ಲಾ ಲಾಕ್​ಡೌನ್ ಬಗ್ಗೆ ಚರ್ಚೆ ಮಾಡಲಾಯ್ತು. ಈ ವೇಳೆ ಸಿಎಂ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ್ರು.

ಬಿಐಇಸಿಗೆ ಕೋವಿಡ್ ಕೇರ್ ಸೆಂಟರ್​ನಲ್ಲಿ ಬೆಡ್​ಗಳನ್ನು ಬಾಡಿಗೆಗೆ ತಂದಿದ್ದು ಯಾಕೆ? ಎರಡು ತಿಂಗಳಲ್ಲಿ ಅದರ ಬಾಡಿಗೆ ಎಷ್ಟಾಗುತ್ತದೆ ಎಂದು ಪ್ರಶ್ನಿಸಿದ್ರು. ನನ್ನ ಗಮನಕ್ಕೆ ತಾರದೆ ಅಷ್ಟು ದೊಡ್ಡ ನಿರ್ಧಾರ ಹೇಗೆ ಕೈಗೊಂಡ್ರಿ? ಬಿಐಇಸಿಯಲ್ಲಿ ಬೆಡ್ ಬಾಡಿಗೆಗೆ ಪಡೆಯದೇ ಖರೀದಿ ಮಾಡಿ. ನಂತರ ಅವುಗಳನ್ನು ಬೇರೆಯದಕ್ಕೆ ಬಳಸಿಕೊಳ್ಳಿ ಎಂದು ಕ್ಲಾಸ್ ತಗೊಂಡ್ರು.

ಜೊತೆಗೆ ಆಂಬುಲೆನ್ಸ್ ಯಾಕೆ ಇನ್ನೂ ಖರೀದಿ ಆಗಿಲ್ಲ. ಇದು ಕೊನೆ ಬಾರಿಯ ಲಾಕ್​ಡೌನ್ ಅಷ್ಟೇ. ಮುಂದಿನ ಸಭೆಯ ವೇಳೆಗೆ ಎಲ್ಲ ಸಮಸ್ಯೆ ಬಗೆಹರಿಸಿರಬೇಕು. ಸಮಸ್ಯೆ ಪರಿಹರಿಸದಿದ್ದರೆ ನಿಮ್ಮ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತೆ ಎಂದು ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ.

15-20 ದಿನಗಳಿಂದ ಆಂಬುಲೆನ್ಸ್ ಬಗ್ಗೆ ಮಾತಾಡ್ತಾ ಇದ್ದೀರಿ. ಏನು ಕೆಲ್ಸ ಆಗಿದೆ? ಇಂದಿನ ಸಭೆ ಬಳಿಕ ನಾನು ನಿಮ್ಮನ್ನು‌ ಯಾರನ್ನೂ ಕರೆಯಲ್ಲ. ನಾನು ಯಾರ ಜೊತೆಯೂ ಒಂದು ಶಬ್ದ ಮಾತಾಡುವುದಿಲ್ಲ. ನಾನು ಏನು ಸೂಚನೆ ಕೊಡುತ್ತೇನೋ ಅದು ಪಾಲಿಸಬೇಕು. ಬೇರೆ ಪ್ರಶ್ನೆ ಯಾವನೂ ಕೇಳಕೂಡದು ಎಂದು ತರಾಟೆ ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ.

Published On - 3:16 pm, Mon, 13 July 20

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ