AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ಶಕ್ತಿ ಕಳೆದುಕೊಂಡಿದ್ದಾರೆ, ಆರೋಗ್ಯ ಸಚಿವರು ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ; ಡಿ ಕೆ ಶಿವಕುಮಾರ್

DK Shivakumar: ಸರ್ಕಾರ ಆಕ್ಸಿಜನ್ ಕೊಡದೇ ಇದ್ರೆ ಹೇಗೆ? ಚಾಮರಾಜನಗರ ದುರಂತದ ಜವಾಬ್ದಾರಿ ಹೊತ್ತು ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ಕೊಡಲಿ. ಸರ್ಕಾರ ಕೊವಿಡ್ ತಡೆಯಲು ಅಗತ್ಯ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದರು. 

ಸಿಎಂ ಯಡಿಯೂರಪ್ಪ ಶಕ್ತಿ ಕಳೆದುಕೊಂಡಿದ್ದಾರೆ, ಆರೋಗ್ಯ ಸಚಿವರು ಸರ್ಕಾರದ ದಾರಿ ತಪ್ಪಿಸುತ್ತಿದ್ದಾರೆ; ಡಿ ಕೆ ಶಿವಕುಮಾರ್
ಡಿ.ಕೆ.ಶಿವಕುಮಾರ್
guruganesh bhat
|

Updated on:May 03, 2021 | 8:14 PM

Share

ಬೆಂಗಳೂರು: ಚಾಮರಾಜನಗರ ದುರಂತ ಪ್ರಕರಣದಲ್ಲಿ ಸಚಿವರು ತಪ್ಪು ಮಾಹಿತಿ ಕೊಡ್ತಾ ಇದ್ದಾರೆ. ಸರ್ಕಾರ ಜನರ ಕೊಲೆ ಮಾಡಿದೆ. ಮೃತಪಟ್ಟವರಿಗೆ ಪರಿಹಾರ ಕೊಡಲೇಬೇಕು. ಸಿಎಂ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಇನ್ನೂ ಅವರು ಎಷ್ಟೂ ಅಂತ ಸುಳ್ಳು ಹೇಳುತ್ತಾರೆ. ಸಿಎಂ ಯಡಿಯೂರಪ್ಪ ಶಕ್ತಿ ಕಳೆದುಕೊಂಡಿದ್ದಾರೆ. ಆರೋಗ್ಯ ಸಚಿವರು ಇಡೀ ಸರ್ಕಾರವನ್ನೇ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಎರಡನೇ ಡೋಸ್ ಲಸಿಕೆ ಸಿಗುತ್ತಿಲ್ಲ. ಲಸಿಕೆಯ ನೋಂದಣಿ ಪದ್ಧತಿ ಬದಲಾಯಿಸಲು ತಿಳಿಸಿದ್ದೇವೆ. ಪ್ರತಿ ಊರಿನಲ್ಲೂ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆಯನ್ನು ಕೊಡಬೇಕು. ನಮ್ಮ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಲು ಅವಕಾಶ ಕೇಳಿದ್ದರು. ಆದರೆ ಸಿಎಂ ಅನುಮತಿ ಕೊಟ್ಟಿಲ್ಲ. ಹಾಗಾಗಿ ನಾವು ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿದೆವು ಎಂದರು.

ಸಂಸದ ಜಾಧವ್ ರೆಮ್​ಡಿಸಿವಿರ್ ಕೊಂಡೊಯ್ದ ವಿಚಾರವಾಗಿಯೂ ಪ್ರತಿಕ್ರಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಸ್​ ಪಿ.ರವಿಕುಮಾರ್​ ಕೊಟ್ಟ ಉತ್ತರ ಸಮಂಜಸವಾಗಿಲ್ಲ. ನಮಗೂ ರೆಮ್​ಡಿಸಿವಿರ್ ಕೊಡಿ, ತೆಗೆದುಕೊಂಡು ಹೋಗುತ್ತೇವೆ ಎಂದು ವ್ಯಂಗ್ಯವಾಡಿದರು.

ರಾಜ್ಯ ಸರ್ಕಾರದ ಸಿಎಂ ಯಡಿಯೂರಪ್ಪ, ಸಚಿವರ ಮೇಲೆ ನಂಬಿಕೆಯೇ ಇಲ್ಲ. ಮೆಡಿಕಲ್ ಆಕ್ಸಿಜನ್ ಕೊರತೆ ಬಗ್ಗೆ ಸಿಎಸ್ ಒಪ್ಪಿಕೊಂಡಿದ್ದಾರೆ. ಆಕ್ಸಿಜನ್ ಬೇಡಿಕೆಯನ್ನು ನಿಭಾಯಿಸಲು ಆಗ್ತಿಲ್ಲ ಎಂದು ಸಿಎಸ್ ಹೇಳಿದ್ದಾರೆ. ಶೇ.50ರಷ್ಟು ಮಾತ್ರ ಕೇಂದ್ರ ಸರ್ಕಾರ ಆಕ್ಸಿಜನ್ ಕೊಟ್ಟಿದೆ. ರಾಜ್ಯ ಸರ್ಕಾರ ಹೊಸ ಬೆಡ್​ಗಳಿಗೆ ಪ್ರಯತ್ನ ಮಾಡುತ್ತಿಲ್ಲ. ನನ್ನ ಹಾಸ್ಟೆಲ್ ಕೂಡ ಕೊಡಲು ನಾನು ತಯಾರಿದ್ದೇನೆ. ನೋಡೋಣ ಅಂತ ಮಾತ್ರ ರಾಜ್ಯ ಸರ್ಕಾರ ಹೇಳಿದೆ. ಕೊವಿಡ್ ತಡೆಯಲು ಕಳೆದ 8 ತಿಂಗಳಿಂದ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಅವರು ಟೀಕಿಸಿದರು.

ಆರೋಗ್ಯ ಸಚಿವರು ರಾಜೀನಾಮೆ ಕೊಡಲಿ; ಸಂಸದ ಡಿ. ಕೆ. ಸುರೇಶ್ ಸರ್ಕಾರ ಆಕ್ಸಿಜನ್ ಕೊಡದೇ ಇದ್ರೆ ಹೇಗೆ? ಚಾಮರಾಜನಗರ ದುರಂತದ ಜವಾಬ್ದಾರಿ ಹೊತ್ತು ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ಕೊಡಲಿ. ಸರ್ಕಾರ ಕೊವಿಡ್ ತಡೆಯಲು ಅಗತ್ಯ ಸಿದ್ಧತೆ ಮಾಡಿಕೊಂಡಿಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದರು.

CM BS Yediyurappa lost his power he should resign urges KPCC President D K Shivakumar

ಇದನ್ನೂ ಓದಿ: K Sudhakar Press Meet: ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ; ಸಚಿವ ಸುಧಾಕರ್ ಸ್ಪಷ್ಟನೆ

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು ಮೂವರಲ್ಲ, ಮೂವತ್ನಾಲ್ಕು: ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಗಂಭೀರ ಆರೋಪ

(CM BS Yediyurappa lost control over govt he should resign demands KPCC President D K Shivakumar)

Published On - 8:07 pm, Mon, 3 May 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ