AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSY ರಾಜಕೀಯ ಕಾರ್ಯದರ್ಶಿ NR ಸಂತೋಷ್ ಆತ್ಮಹತ್ಯೆ ಯತ್ನ, ರಾಜಕೀಯ ಒತ್ತಡ ಎಂದ ಕುಟುಂಬಸ್ಥರು

ಸಂತೋಷ್​ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಹೇಳಿಕೆ ನೀಡಿದ್ದು, ಸಂತೋಷ್​ ಚೆನ್ನಾಗಿ ಮಾತಾಡುತ್ತಿದ್ದಾನೆ. ಹಾಗೂ ಅವರ​​ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಬೆಳಗ್ಗೆ ನನ್ನ ಜೊತೆ ಮುಕ್ಕಾಲು ಘಂಟೆ ವಾಕ್ ಮಾಡ್ದ. ಖುಷ್ ಖುಷಿ ಆಗಿನೇ ಚೆನ್ನಾಗಿ ಇದ್ದ ಆದರೆ ಈಗ ಹೀಗಾಗಿದೆ.

ಸಿಎಂ BSY ರಾಜಕೀಯ ಕಾರ್ಯದರ್ಶಿ NR ಸಂತೋಷ್ ಆತ್ಮಹತ್ಯೆ ಯತ್ನ, ರಾಜಕೀಯ ಒತ್ತಡ ಎಂದ ಕುಟುಂಬಸ್ಥರು
N.R.ಸಂತೋಷ್
ಪೃಥ್ವಿಶಂಕರ
|

Updated on:Nov 28, 2020 | 3:23 PM

Share

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ N.R. ಸಂತೋಷ್ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಎಂ ಬಿಎಸ್​ವೈ ಅವರ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ N.R.ಸಂತೋಷ್ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೀಗಾಗಿ ಅವರನ್ನು ಕುಟುಂಬಸ್ಥರು M.S.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ.ವಿಚಾರ ತಿಳಿದು ಕೂಡಲೇ ಆಸ್ಪತ್ರೆಗೆ ದಾವಿಸಿದ ಸಿಎಂ ಬಿ.ಎಸ್​ ಯಡಿಯೂರಪ್ಪನವರು ಸಂತೋಷ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಸಂತೋಷ್​ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಹೇಳಿಕೆ ನೀಡಿದ್ದು, ಸಂತೋಷ್​ ಚೆನ್ನಾಗಿ ಮಾತಾಡುತ್ತಿದ್ದಾನೆ. ಹಾಗೂ ಅವರ​​ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಬೆಳಗ್ಗೆ ನನ್ನ ಜೊತೆ ಮುಕ್ಕಾಲು ಘಂಟೆ ವಾಕ್ ಮಾಡ್ದ. ಖುಷ್ ಖುಷಿ ಆಗಿನೇ ಚೆನ್ನಾಗಿ ಇದ್ದ ಆದರೆ ಈಗ ಹೀಗಾಗಿದೆ. ಬೆಳಗ್ಗೆ ಎದ್ದು ಒಡಾಡ್ತಾನೆ ಎಂದು M.S.ರಾಮಯ್ಯ ಆಸ್ಪತ್ರೆ ಬಳಿ ಸಿಎಂ ಬಿಎಸ್​​ವೈ ಹೇಳಿಕೆ ನೀಡಿದರು.

ಇನ್ನು ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕುಟುಂಬಸ್ಥರು, ರಾಜಕೀಯ ಒತ್ತಡದಿಂದಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೌಟುಂಬಿಕವಾಗಿ ಯಾವುದೇ ಸಮಸ್ಯೆ ಇರಲಿಲ್ಲ. ಜೊತೆಗೆ ಆತ್ಮಹತ್ಯೆ ಯತ್ನಕ್ಕೂ ಮುನ್ನ ಸಂತೋಷ ಖಿನ್ನತೆಗೊಳಗಾಗಿದ್ದರು. ಕೆಲಸಕ್ಕೆ ಹೋಗಿ ಬಂದಾಗನಿಂದಲೂ ಬೇಸರದಲ್ಲಿದ್ದರು ಎಂದು ಕುಟುಂಬಸ್ಥರು ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: CM ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಯ್ತಾ.. ಆ ಪರ್ಸನಲ್​ ವಿಡಿಯೋ?

Published On - 6:54 am, Sat, 28 November 20

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!